Home / ಕವನ / ಕವಿತೆ / ಬಾಡಿಗೆ ತಾಯಂದಿರು

ಬಾಡಿಗೆ ತಾಯಂದಿರು

ಸಿಗುತ್ತದೆ ಈ ಪುಣ್ಯಭೂಮಿಯಲಿ
ತಾಯಂದಿರ ಗರ್ಭಗಳು ಬಾಡಿಗೆಗೆ
ತಾಯ್ತನದ ಬಯಕೆಗಳ ಅದುಮಿಟ್ಟು
ದುಡ್ಡು ಕೊಟ್ಟವರಿಗೆ ಹೆತ್ತು ಕೊಡುವರು
ಇಲ್ಲಿ ಬಾಡಿಗೆ ತಾಯಂದಿರು

ಬಸಿರಲಿ ಮೂಡಿದ ಮಗು
ಒದ್ದು ಮೈ ಬದಲಿಸುವ ಚಲನೆ
ತಾಯ್ತನದ ಖುಷಿಯ ಘಳಿಗೆಯಲಿ
ಕಲ್ಲಾಗಿ ಕನಸಿಗೆ ನಿಷೇಧ ಹೇರುವರು.
ಹಿಂಸೆಯ ಶಿಲುಬೆಗೇರುವರು
ಇಲ್ಲಿ ಬಾಡಿಗೆ ತಾಯಂದಿರು.

ಕನಲುವ, ಮಗ್ಗಲು ಬದಲಿಸುವ
ಮುಲುಕುವ, ಹೊಟ್ಟೆಗೆ ಒದೆಯುವ,
ಕಂದನ ಕೈಸರಬೇಕೆಂದರೆ
ಸತ್ತ ಹೃದಯ ತಾಯಿಯವಳು
ಗಂಡನ ಸಾಲ ತೀರಿಸಲು
ಕೇವಲ ಬಾಡಿಗೆ ಗರ್ಭವಾದವಳು.

ಹೆತ್ತ ಕೂಸಿಗೆ ಅವಡುಗಚ್ಚಿ ಕೊಡುವಳು
ಉಕ್ಕಿ ಹರಿವ ಹಾಲಿನ ತೊರೆಯ
ಮನಸು ಕಲ್ಲಾಗಿಸಿ ಆವಿಯಾಗಿಸುವಳು
ಕೊಟ್ಟ ಮಕ್ಕಳ ಮರಳಿ ನೋಡಳು
ಹೊಟ್ಟೆ ಹೊರೆಯಲವಳು
ಸಂತೆಯಲಿ ಗರ್ಬವಿಟ್ಟವಳು

ಅವಳದೆಂತಹ ಹಣೆಬರಹ ನೋಡು
ಹೆತ್ತ ಮಗುವಿಗೆ ಎತ್ತಿ ಮುದ್ದಿಸಲಾರಳು
ತನ್ನದೇ ಕುಡಿ, ತನ್ನಾತ್ಮದ ತುಣುಕನು
ಕರುಳಿಲ್ಲದ ಮಾರುಕಟ್ಟೆಯಲ್ಲಿಟ್ಟು
ಜಾಗತೀಕರಣದ ಹೊಸ ಉದ್ಯಮದಲಿ
ಕೇವಲ ಬಾಡಿಗೆ ತಾಯಾದವಳು.

ಪ್ರಭುವೆ! ಕಣ್ಣಲ್ಲಿ ಕನಸುಗಳ ಕೊಡಬೇಡವೆಂದು
ಕಣ್ಣು ರೆಪ್ಪೆ ಗಟ್ಟಿ ಮುಚ್ಚಿಕೊಳ್ಳುವಳು
ತೇಲಿ ಬರುವ ಕನಸುಗಳಿಗೆ ನಿಷೇಧ ಹೇರುವಳು
ಬಸಿರೋದ್ಯಮದಲಿ ಗರ್ಭ ಮಾರಾಟಕ್ಕಿಡುವಳು
ಮಮತೆಯ ಕತ್ತು ಹಿಸುಕಿದ ಅವಳು,
ಕೇವಲ ಬಾಡಿಗೆ ತಾಯಿಯಾದವಳು.

ದೇವತೆಯೆಂದು ಪೂಜಿಸಿದವರೇ
ಅವಳ ಕ೦ಡು ಇಂದೇಕೆ ನಗುವಿರಿ?
ತಾಯ್ತಾನದ ಘನತೆ ಮಾರಾಟದ ಸರಕಾಗಿಸಿ
ಘನತೆಯ ಬದುಕು ಬೀದಿಪಾಲಾಗಿಸಿ
ಕೇವಲ ಬಾಡಿಗೆ ತಾಯಾಗಿಸಿದಿರಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...