Home / ಕವನ / ಕವಿತೆ / ಬಾಡಿಗೆ ತಾಯಂದಿರು

ಬಾಡಿಗೆ ತಾಯಂದಿರು

ಸಿಗುತ್ತದೆ ಈ ಪುಣ್ಯಭೂಮಿಯಲಿ
ತಾಯಂದಿರ ಗರ್ಭಗಳು ಬಾಡಿಗೆಗೆ
ತಾಯ್ತನದ ಬಯಕೆಗಳ ಅದುಮಿಟ್ಟು
ದುಡ್ಡು ಕೊಟ್ಟವರಿಗೆ ಹೆತ್ತು ಕೊಡುವರು
ಇಲ್ಲಿ ಬಾಡಿಗೆ ತಾಯಂದಿರು

ಬಸಿರಲಿ ಮೂಡಿದ ಮಗು
ಒದ್ದು ಮೈ ಬದಲಿಸುವ ಚಲನೆ
ತಾಯ್ತನದ ಖುಷಿಯ ಘಳಿಗೆಯಲಿ
ಕಲ್ಲಾಗಿ ಕನಸಿಗೆ ನಿಷೇಧ ಹೇರುವರು.
ಹಿಂಸೆಯ ಶಿಲುಬೆಗೇರುವರು
ಇಲ್ಲಿ ಬಾಡಿಗೆ ತಾಯಂದಿರು.

ಕನಲುವ, ಮಗ್ಗಲು ಬದಲಿಸುವ
ಮುಲುಕುವ, ಹೊಟ್ಟೆಗೆ ಒದೆಯುವ,
ಕಂದನ ಕೈಸರಬೇಕೆಂದರೆ
ಸತ್ತ ಹೃದಯ ತಾಯಿಯವಳು
ಗಂಡನ ಸಾಲ ತೀರಿಸಲು
ಕೇವಲ ಬಾಡಿಗೆ ಗರ್ಭವಾದವಳು.

ಹೆತ್ತ ಕೂಸಿಗೆ ಅವಡುಗಚ್ಚಿ ಕೊಡುವಳು
ಉಕ್ಕಿ ಹರಿವ ಹಾಲಿನ ತೊರೆಯ
ಮನಸು ಕಲ್ಲಾಗಿಸಿ ಆವಿಯಾಗಿಸುವಳು
ಕೊಟ್ಟ ಮಕ್ಕಳ ಮರಳಿ ನೋಡಳು
ಹೊಟ್ಟೆ ಹೊರೆಯಲವಳು
ಸಂತೆಯಲಿ ಗರ್ಬವಿಟ್ಟವಳು

ಅವಳದೆಂತಹ ಹಣೆಬರಹ ನೋಡು
ಹೆತ್ತ ಮಗುವಿಗೆ ಎತ್ತಿ ಮುದ್ದಿಸಲಾರಳು
ತನ್ನದೇ ಕುಡಿ, ತನ್ನಾತ್ಮದ ತುಣುಕನು
ಕರುಳಿಲ್ಲದ ಮಾರುಕಟ್ಟೆಯಲ್ಲಿಟ್ಟು
ಜಾಗತೀಕರಣದ ಹೊಸ ಉದ್ಯಮದಲಿ
ಕೇವಲ ಬಾಡಿಗೆ ತಾಯಾದವಳು.

ಪ್ರಭುವೆ! ಕಣ್ಣಲ್ಲಿ ಕನಸುಗಳ ಕೊಡಬೇಡವೆಂದು
ಕಣ್ಣು ರೆಪ್ಪೆ ಗಟ್ಟಿ ಮುಚ್ಚಿಕೊಳ್ಳುವಳು
ತೇಲಿ ಬರುವ ಕನಸುಗಳಿಗೆ ನಿಷೇಧ ಹೇರುವಳು
ಬಸಿರೋದ್ಯಮದಲಿ ಗರ್ಭ ಮಾರಾಟಕ್ಕಿಡುವಳು
ಮಮತೆಯ ಕತ್ತು ಹಿಸುಕಿದ ಅವಳು,
ಕೇವಲ ಬಾಡಿಗೆ ತಾಯಿಯಾದವಳು.

ದೇವತೆಯೆಂದು ಪೂಜಿಸಿದವರೇ
ಅವಳ ಕ೦ಡು ಇಂದೇಕೆ ನಗುವಿರಿ?
ತಾಯ್ತಾನದ ಘನತೆ ಮಾರಾಟದ ಸರಕಾಗಿಸಿ
ಘನತೆಯ ಬದುಕು ಬೀದಿಪಾಲಾಗಿಸಿ
ಕೇವಲ ಬಾಡಿಗೆ ತಾಯಾಗಿಸಿದಿರಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...