Home / ಕವನ / ಕವಿತೆ / ಬಾಡಿಗೆ ತಾಯಂದಿರು

ಬಾಡಿಗೆ ತಾಯಂದಿರು

ಸಿಗುತ್ತದೆ ಈ ಪುಣ್ಯಭೂಮಿಯಲಿ
ತಾಯಂದಿರ ಗರ್ಭಗಳು ಬಾಡಿಗೆಗೆ
ತಾಯ್ತನದ ಬಯಕೆಗಳ ಅದುಮಿಟ್ಟು
ದುಡ್ಡು ಕೊಟ್ಟವರಿಗೆ ಹೆತ್ತು ಕೊಡುವರು
ಇಲ್ಲಿ ಬಾಡಿಗೆ ತಾಯಂದಿರು

ಬಸಿರಲಿ ಮೂಡಿದ ಮಗು
ಒದ್ದು ಮೈ ಬದಲಿಸುವ ಚಲನೆ
ತಾಯ್ತನದ ಖುಷಿಯ ಘಳಿಗೆಯಲಿ
ಕಲ್ಲಾಗಿ ಕನಸಿಗೆ ನಿಷೇಧ ಹೇರುವರು.
ಹಿಂಸೆಯ ಶಿಲುಬೆಗೇರುವರು
ಇಲ್ಲಿ ಬಾಡಿಗೆ ತಾಯಂದಿರು.

ಕನಲುವ, ಮಗ್ಗಲು ಬದಲಿಸುವ
ಮುಲುಕುವ, ಹೊಟ್ಟೆಗೆ ಒದೆಯುವ,
ಕಂದನ ಕೈಸರಬೇಕೆಂದರೆ
ಸತ್ತ ಹೃದಯ ತಾಯಿಯವಳು
ಗಂಡನ ಸಾಲ ತೀರಿಸಲು
ಕೇವಲ ಬಾಡಿಗೆ ಗರ್ಭವಾದವಳು.

ಹೆತ್ತ ಕೂಸಿಗೆ ಅವಡುಗಚ್ಚಿ ಕೊಡುವಳು
ಉಕ್ಕಿ ಹರಿವ ಹಾಲಿನ ತೊರೆಯ
ಮನಸು ಕಲ್ಲಾಗಿಸಿ ಆವಿಯಾಗಿಸುವಳು
ಕೊಟ್ಟ ಮಕ್ಕಳ ಮರಳಿ ನೋಡಳು
ಹೊಟ್ಟೆ ಹೊರೆಯಲವಳು
ಸಂತೆಯಲಿ ಗರ್ಬವಿಟ್ಟವಳು

ಅವಳದೆಂತಹ ಹಣೆಬರಹ ನೋಡು
ಹೆತ್ತ ಮಗುವಿಗೆ ಎತ್ತಿ ಮುದ್ದಿಸಲಾರಳು
ತನ್ನದೇ ಕುಡಿ, ತನ್ನಾತ್ಮದ ತುಣುಕನು
ಕರುಳಿಲ್ಲದ ಮಾರುಕಟ್ಟೆಯಲ್ಲಿಟ್ಟು
ಜಾಗತೀಕರಣದ ಹೊಸ ಉದ್ಯಮದಲಿ
ಕೇವಲ ಬಾಡಿಗೆ ತಾಯಾದವಳು.

ಪ್ರಭುವೆ! ಕಣ್ಣಲ್ಲಿ ಕನಸುಗಳ ಕೊಡಬೇಡವೆಂದು
ಕಣ್ಣು ರೆಪ್ಪೆ ಗಟ್ಟಿ ಮುಚ್ಚಿಕೊಳ್ಳುವಳು
ತೇಲಿ ಬರುವ ಕನಸುಗಳಿಗೆ ನಿಷೇಧ ಹೇರುವಳು
ಬಸಿರೋದ್ಯಮದಲಿ ಗರ್ಭ ಮಾರಾಟಕ್ಕಿಡುವಳು
ಮಮತೆಯ ಕತ್ತು ಹಿಸುಕಿದ ಅವಳು,
ಕೇವಲ ಬಾಡಿಗೆ ತಾಯಿಯಾದವಳು.

ದೇವತೆಯೆಂದು ಪೂಜಿಸಿದವರೇ
ಅವಳ ಕ೦ಡು ಇಂದೇಕೆ ನಗುವಿರಿ?
ತಾಯ್ತಾನದ ಘನತೆ ಮಾರಾಟದ ಸರಕಾಗಿಸಿ
ಘನತೆಯ ಬದುಕು ಬೀದಿಪಾಲಾಗಿಸಿ
ಕೇವಲ ಬಾಡಿಗೆ ತಾಯಾಗಿಸಿದಿರಿ.
*****

Tagged:

Leave a Reply

Your email address will not be published. Required fields are marked *

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...