ಬಾಡಿಗೆ ತಾಯಂದಿರು

ಸಿಗುತ್ತದೆ ಈ ಪುಣ್ಯಭೂಮಿಯಲಿ
ತಾಯಂದಿರ ಗರ್ಭಗಳು ಬಾಡಿಗೆಗೆ
ತಾಯ್ತನದ ಬಯಕೆಗಳ ಅದುಮಿಟ್ಟು
ದುಡ್ಡು ಕೊಟ್ಟವರಿಗೆ ಹೆತ್ತು ಕೊಡುವರು
ಇಲ್ಲಿ ಬಾಡಿಗೆ ತಾಯಂದಿರು

ಬಸಿರಲಿ ಮೂಡಿದ ಮಗು
ಒದ್ದು ಮೈ ಬದಲಿಸುವ ಚಲನೆ
ತಾಯ್ತನದ ಖುಷಿಯ ಘಳಿಗೆಯಲಿ
ಕಲ್ಲಾಗಿ ಕನಸಿಗೆ ನಿಷೇಧ ಹೇರುವರು.
ಹಿಂಸೆಯ ಶಿಲುಬೆಗೇರುವರು
ಇಲ್ಲಿ ಬಾಡಿಗೆ ತಾಯಂದಿರು.

ಕನಲುವ, ಮಗ್ಗಲು ಬದಲಿಸುವ
ಮುಲುಕುವ, ಹೊಟ್ಟೆಗೆ ಒದೆಯುವ,
ಕಂದನ ಕೈಸರಬೇಕೆಂದರೆ
ಸತ್ತ ಹೃದಯ ತಾಯಿಯವಳು
ಗಂಡನ ಸಾಲ ತೀರಿಸಲು
ಕೇವಲ ಬಾಡಿಗೆ ಗರ್ಭವಾದವಳು.

ಹೆತ್ತ ಕೂಸಿಗೆ ಅವಡುಗಚ್ಚಿ ಕೊಡುವಳು
ಉಕ್ಕಿ ಹರಿವ ಹಾಲಿನ ತೊರೆಯ
ಮನಸು ಕಲ್ಲಾಗಿಸಿ ಆವಿಯಾಗಿಸುವಳು
ಕೊಟ್ಟ ಮಕ್ಕಳ ಮರಳಿ ನೋಡಳು
ಹೊಟ್ಟೆ ಹೊರೆಯಲವಳು
ಸಂತೆಯಲಿ ಗರ್ಬವಿಟ್ಟವಳು

ಅವಳದೆಂತಹ ಹಣೆಬರಹ ನೋಡು
ಹೆತ್ತ ಮಗುವಿಗೆ ಎತ್ತಿ ಮುದ್ದಿಸಲಾರಳು
ತನ್ನದೇ ಕುಡಿ, ತನ್ನಾತ್ಮದ ತುಣುಕನು
ಕರುಳಿಲ್ಲದ ಮಾರುಕಟ್ಟೆಯಲ್ಲಿಟ್ಟು
ಜಾಗತೀಕರಣದ ಹೊಸ ಉದ್ಯಮದಲಿ
ಕೇವಲ ಬಾಡಿಗೆ ತಾಯಾದವಳು.

ಪ್ರಭುವೆ! ಕಣ್ಣಲ್ಲಿ ಕನಸುಗಳ ಕೊಡಬೇಡವೆಂದು
ಕಣ್ಣು ರೆಪ್ಪೆ ಗಟ್ಟಿ ಮುಚ್ಚಿಕೊಳ್ಳುವಳು
ತೇಲಿ ಬರುವ ಕನಸುಗಳಿಗೆ ನಿಷೇಧ ಹೇರುವಳು
ಬಸಿರೋದ್ಯಮದಲಿ ಗರ್ಭ ಮಾರಾಟಕ್ಕಿಡುವಳು
ಮಮತೆಯ ಕತ್ತು ಹಿಸುಕಿದ ಅವಳು,
ಕೇವಲ ಬಾಡಿಗೆ ತಾಯಿಯಾದವಳು.

ದೇವತೆಯೆಂದು ಪೂಜಿಸಿದವರೇ
ಅವಳ ಕ೦ಡು ಇಂದೇಕೆ ನಗುವಿರಿ?
ತಾಯ್ತಾನದ ಘನತೆ ಮಾರಾಟದ ಸರಕಾಗಿಸಿ
ಘನತೆಯ ಬದುಕು ಬೀದಿಪಾಲಾಗಿಸಿ
ಕೇವಲ ಬಾಡಿಗೆ ತಾಯಾಗಿಸಿದಿರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನ್ನೆಚ್ಚರದಲು ನಿದ್ದೆಯಲು
Next post ಮಣ್ಣಿನ ಋಣ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

cheap jordans|wholesale air max|wholesale jordans|wholesale jewelry|wholesale jerseys