Home / ಕವನ / ಕವಿತೆ / ತಲ್ಲಾಕಿನ ಕತ್ತಿಗಳು

ತಲ್ಲಾಕಿನ ಕತ್ತಿಗಳು

ಅದು ಕೋಟೆಯಂತೆ ಕಟ್ಟಿದ ಗೋಡೆ
ದಪ್ಪ ದಪ್ಪ ಕಪ್ಪು ಕಲ್ಲಿನ ಕೋಟೆ
ಗೋಡೆಯಾಚೆಗೆ ಸ್ವಚ್ಛಂದ ಪಾರಿವಾಳ
ಗೋಡೆಗಳ ಮಧ್ಯ ನಾನು ಸಮಾಧಿ.

ಬದುಕು ಕಬ್ಬಿಣದ ಕಠಿಣ ಹಾದಿ
ಹಿಮಾಲಯದ ಹಿಮನೀರು ನಾನಾದರೆ
ಬಿಸಿನೀರ ಬುಗ್ಗೆಯಂತೆ ಕುದಿವ ನೀರವನು
ಕಿಲುಬುಗಟ್ಟಿದ ಸಂದು ಗೊಂದುಗಳಲ್ಲಿ
ನನಗಿಲ್ಲ ರಕ್ಷಣೆಯ ಭದ್ರ ಬುನಾದಿ.

ಮೂರು ಮಡದಿಯರಿಟ್ಟು
ನಾಲ್ಕನೆಯವಳ ಮೇಲೆ ಕಣ್ಣು ನೆಟ್ಟು
ಆಕಳಿಸಿ ಕಿಟಕಿಯಲ್ಲಿ ಇಣುಕಿದರೂ ಸಾಕು
ಭಯಗೊಂಡು ಚಿಟ್ಟನೆ ಕಿರುಚುತ್ತಾನೆ.
“ಬೇಗಂ ನನ್ನ ಹುಕ್ಕಾ ಎಲ್ಲಿ?
ತಲೆ ಕೆಟ್ಟಿದೆಯಾ ಪರದೆ ಇಳಿ ಬಿಡು.”
ಇಣುಕಿದೆಯಾ ಜೋಕೆ, ತಲ್ಲಾಕಿನ ಕತ್ತಿ
ತೂಗುತ್ತಿದೆ ನೆತ್ತಿ ಮೇಲೆ ಗೊತ್ತಿಲ್ಲವೆ?

ಚಂದ್ರನ ಹಾಲು ಬೆಳದಿಂಗಳಿಲ್ಲ
ವಸಂತನ ಆಗಮನದ ಸಂಭ್ರಮವಿಲ್ಲ
ನಿಷೇಧದ ಗೋಡೆಗಳ ಮಧ್ಯದಿಂದ
ನಿರಾಸೆಯ ಗೂಡಿನ ಬಂಧಿಸಿ ಒಮ್ಮೆ
ಕೊಡವಿ ಕೇಳಿದಳು “ಹೆದರಿಸದಿರು ನನಗೆ
ತಲ್ಲಾಕಿನ ಕತ್ತಿಯನು” ತಿವಿದು.

ಪಹರೆ ಗೋಡೆಗಳ ಕಲ್ಲು ಶಿಥಿಲವಾಯ್ತು
ಸೋತ ನನ್ನ ಕೈಗಳಲ್ಲೀಗ ಶಕ್ತಿ ಸಂಚಾರವಾಯ್ತು
ಬಂಧನ ಕಳಚಿ ತಿರುಗಿ ನಿಂತು ಕೇಳಿತು.
ನಿನಗೆ ಜನ್ಮ ಕೊಟ್ಟ ತಾಯಿ ನಾನು
ಹೆದರಿಸದಿರು ತಲ್ಲಾಕಿನ ಕತ್ತಿಯಿಂದ
ನೀನವಳ ಮಡಿಲ ಕೂಸು ತಾನೇ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...