ಮುಳ್ಳು ಗುಲಾಬಿಯ ಮಧ್ಯೆ

ಮುಳ್ಳುಗಳ ಮಧ್ಯದಲ್ಲಿಯೇ ಗುಲಾಬಿ ಹುಟ್ಟುತ್ತದೆ ನಿಜ.
ಪ್ರೀತಿ ಹೂ ಅರಳುವ ಕ್ರಿಯೆ ನಿರಂತರ ನಡೆಯುತ್ತಲೇ ಇರುತ್ತದೆ ನೋಡು.

ಅಮವಾಸ್ಯೆ ಕತ್ತಲಲ್ಲಿ ಏಕಾಕಿ ಕಾಡಿನಲ್ಲಿ ಪಯಣಿಸುತ್ತೇನೆ ನಿಜ,
ರಾತ್ರಿ ಕಳೆದುಹೋದ ಸೂರ್ಯ ಮತ್ತೇ ಹುಟ್ಟುತ್ತಲೇ ಇರುತ್ತಾನೆ ನೋಡು.

ಕಬ್ಬಿಗೆ ಬೆಂಕಿ ಹಚ್ಚಿ ಸುಟ್ಟು ಹುಗಿದರೂ ಮತ್ತೆ ಚಿಗುರುತ್ತದೆ ನಿಜ,
ಬೆಂಕಿಯಲ್ಲಿ ಸುಟ್ಟು ಬೂದಿಯಾದರೂ ಫೀನಿಕ್ಸ್ ಮತ್ತೆ ಹುಟ್ಟುತ್ತಲೇ ಇರುತ್ತದೆ ನೋಡು.

ಸುಡುವುದೇ ಬೆಂಕಿಯ ಗುಣ ಉರಿದುರಿದು ಕೊನೆಗೆ ಬೂದಿಯಾಯ್ತು ನಿಜ,
ಬಿರುಗಾಳಿ ಬೀಸಿ ಬೂದಿಯನ್ನು ಎತ್ತಲೋ ಹೊತ್ತುಯ್ಯುತ್ತಲೇ ಇರುತ್ತದೆ ನೋಡು.

ಬದುಕ ಸಂಜೆಯಲಿ ಬೆಂಕಿ ಬೂದಿಗಳ ಚಿಂತೆಯೇಕೆ `ಕೇಶ’,
ಉದುರಿದರೂ ಚಿಗುರುವಾ ಮರದೆಲೆ ಆಸೆ ಹುಟ್ಟಿಸುತ್ತಲೇ ಇರುತ್ತದೆ ನೋಡು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಲುಗಳ ಬೊಂಬೆ ಕೇಳೆ
Next post ಆರು ಗತಿಯೆನಗೆ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

cheap jordans|wholesale air max|wholesale jordans|wholesale jewelry|wholesale jerseys