Home / ಕವನ / ಕವಿತೆ / ಹೋರಾಡುತ್ತೇನೆ ಶಬ್ದಗಳಿಂದ

ಹೋರಾಡುತ್ತೇನೆ ಶಬ್ದಗಳಿಂದ

ವ್ಯವಸ್ಥೆಯ ಒಳಗಿನಿಂದ
ಒಂದೊಂದೇ ಪ್ರಶ್ನೆಗಳೇಳುತ್ತವೆ
ರಾಜಕೀಯದ ಬಣ್ಣ ಬಯಲಾಗುತ್ತದೆ
ಶಸ್ತ್ರಾಸ್ತ್ರ ಕೆಳಗಿಟ್ಟ ಅವರು
ಶಾಂತಿ ಮಂತ್ರಗಳ ಜಪಿಸುತ್ತಿದ್ದಾರೆ ನೋಡು!

ಪಾರ್ಲಿಮೆಂಟರಿ ಪ್ರಜಾಪ್ರಭುತ್ವದಲಿ
ಕೆಂಪು ಬಣ್ಣಕ್ಕೆ ಅನೇಕ ಛಾಯೆಗಳಿವೆ ತಾನೇ?
ಶಾಂತಿ ಒಪ್ಪಂದ ಆಗಿದೆ ಅವರೊಂದಿಗೆ
ಶಸ್ತ್ರಾಸ್ತ್ರ ಕೆಳಗಿಟ್ಟು ಶಾಂತವಾಗಿದ್ದಾರೆ
ಹಗ್ಗದ ಮೇಲಿನ ನಡಿಗೆ ನಡೆಯುತ್ತಿದ್ದಾರೆ ನೋಡು!

ಪೋಲೀಸು ರಾಜ್ಯದಲ್ಲಿ ಸೈನ್ಯದ ಸಮಾವೇಶ
ಸಂಸ್ಕೃತಿಯ ಹೆಸರಿನಲಿ ಸಭೆ ಸಮಾರಂಭಗಳು
ಘೋಷಣೆಗಳು ಮೊಳಗುತ್ತಿವೆ ನೋಡು!
ಧರ್ಮ, ಜನಾಂಗಗಳ ಪ್ರಶ್ನೆ, ಓಟಿನ ಲೆಕ್ಕಾಚಾರ
ರೈತ, ಕಾರ್ಮಿಕರ ಸವಾಲು ನೆಲಕಚ್ಚಿವೆ ನೋಡು!

ಚಿವುಟಿ ಹಾಕಿದ ಕನಸುಗಳ ಸಮಾಧಿ
ಸಮತೆಯ ಮಣ್ಣಲ್ಲಿ ಚಿಗುರೊಡೆದು
ಮತ್ತೆ ಮತ್ತೆ ಪ್ರಶ್ನಿಸುತ್ತಿವೆ ನೋಡು!
ರೈತರ ಆತ್ಮ ಹತ್ಯೆಗಳಿಗೆ ಕೊನೆಯೆಂದು?
ಕಾರ್ಮಿಕರ ತುತ್ತಿಗೆ ಲಾಕೌಟ್ ನಿಲ್ಲುವದೆಂದು?
ದುಡಿಯುವ ಕೈಗಳು ನೇಣಿಗೆ ಶರಣಾಗಿ
ಊರ ಹೊರಗಿನ ಮರಗಳಿಗೆ ಹೆಣಗಳು
ಕೇಳುವವರಿಲ್ಲದೆ ನೇತಾಡುತ್ತಿವೆ ನೋಡು!

ಹೊತ್ತು ನಿಂತಿದ್ದಾಳೆ ಧರಿತ್ರಿ
ಹೆಗಲ ಮೇಲೆ ಹೆಣಭಾರದ ಹೊರೆ ನೋಡು
ಅಸಹಾಯಕ ಮಕ್ಕಳ, ಮುದುಕರ
ಜವಾಬ್ದಾರಿ, ಖಾಲಿ ತುತ್ತಿನ ಚೀಲ ತುಂಬಲು
ಅಗ್ಗದ ಕೂಲಿಯಾಗಿದ್ದಕ್ಕೆ ಯಾರು ಹೊಣೆ ಹೇಳು?
ಸಹನೆ ಮೀರುವ ಹೊತ್ತಲ್ಲೂ ಹೇಳುತ್ತಿದ್ದಾಳೆ
ಬಂದೂಕು ಬೇಡ ಹೋರಾಡಲು ಶಬ್ದಗಳಿವೆಯಲ್ಲ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...