ಬೆಳಕ ಹುಡುಕುತ್ತ

ಸದಾ ಹಸಿರಿನ ಉಸಿರು
ಕವಿಯ ಕಾವ್ಯದ ಭೂಮಿ
ಆಶೆಗಳಿವೆ, ಕನಸುಗಳಿವೆ ನೂರಾರು
ಉಸಿರಾಡಿದರೆ ನನ್ನ ಕಾವ್ಯ ಬದುಕುತ್ತೇನೆ.
ಇಲ್ಲಿಯ ಒಂದೊಂದು ವಸ್ತುವಿನಲ್ಲೂ
ಗತಮರೆತ ಇತಿಹಾಸ ಹುಡುಕುತ್ತೇನೆ.
ಕಾವ್ಯ ಬದುಕಿದರೆ ಉಸಿರಾಡುತ್ತೇನೆ.

ವಿಶಾಲ ಭೂಮಿಯ ಮೇಲೆ
ಸ್ನೇಹದ ಬೀಜ ಬಿತ್ತುತ್ತೇನೆ.
ಸರಹದ್ದುಗಳ ನಿರ್ಬಂಧ ಮುರಿಯುತ್ತೇನೆ.
ಸೌಹಾರ್ದ ಬದುಕಿಗೆ ನಾಂದಿ ಹಾಕುತ್ತೇನೆ.
ಮೋಡಗಳ ದಿಂಬವಾಗಿಸಿದ ಸೂರ್ಯ
ಮರುಭೂಮಿ ಬೆಟ್ಟದ ಹಿಂದೆ ನಿದ್ದೇ ಹೋಗುತ್ತಾನೆ.
ಜುಳು ಜುಳು ಹರಿವ ಝರಿಗಳು
ಉಲಿಯುತ್ತದೆ. ರಸನದಿಗಳು ಹರಿಯುತ್ತವೆ.

ಕತ್ತಲ ರಾತ್ರಿ ಲೋಕವೆಲ್ಲ ಮಂಪರು
ನಿದ್ರೆಯ ಲೋಕಕ್ಕೆ ಜಾರಿದಾಗ
ಎಚ್ಚರಿಸುತ್ತದೆ ಕಾವ್ಯ ಮೈದಡವಿ
ಮಂಪರಿನ ಕಣ್ಣು ತಿಕ್ಕಿ ತಿಳಿಗೊಳಿಸಿ
ಅಸ್ತಿತ್ವದ ಬೆಳಕ ಹುಡುಕುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧರ್ಮಕ್ಷೇತ್ರೇ ಕುರುಕ್ಷೇತ್ರೇ
Next post ಗೋಮಾತೆ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys