ಕಲ್ಲುಮೂರ್ತಿ

ದೇವದೇವತಾ ಪಟ್ಟಣದಲ್ಲಿ ! ದೇಗುಲದೊಲು ಕಿರಿಕಟ್ಟಡದಲ್ಲಿ ||
ಕಟ್ಟೆರಕದ ಕೈ ಕಾಲೂ ಕಣ್ಣು | ದೇವತೆ ನೋಡಿದಳದೊ ನನ್ನನ್ನು ||
ಸಜೀವ ಜಾಗೃತ ಅಮೃತವು ದಿವ್ಯ | ಏಕಮೂರ್ತಿಯೇ ಅನಂತಭವ್ಯ ||
ಮದಾದೇವಿ ಮಾತಾಯಿಯು ಅಂಬೆ | ಪ್ರತ್ಯಕ್ಷವು ಇಚ್ಚೆಯು ಎಂಬೆ ||
ಪೃಥ್ವಿಯ ಗರ್ಭದ ಆಳಡಿಯಲ್ಲಿ | ನಿಸ್ವಪ್ನದ ನಿದ್ರೆಯ ತೊಡೆಯಲ್ಲಿ ||
ಸರ್ವಶಕ್ತ, ದುರ್ಭೇದ್ಯವು ಮೂಕ | ಗಗನ-ಜಲಧಿ-ವನ ವ್ಯಾಪಿಸಿ ಏಕ ||
ಮುಸುಕಿತು ಇಗೊ ಮಾನಸದಾವರಣ | ಮೌನವನೇ ಮಾಡಿಹಳಾಭರಣ ||
ಅಗಮ್ಯ ನಿಃಶಬ್ದವು ಸರ್ವಜ್ಞ | ಸುಷುಪ್ತಿಯೊಳು ಎಚ್ಚತ್ತನು ಪ್ರಾಜ್ಞ ||
ಕಂಡಿತು ದೃಷ್ಟಿಯು ಕೇಳಿತು ಶ್ರುತಿಯು | ಏಕವ್ಯಕ್ತವು ಆಯ್ತೊ ಮೂರ್ತಿಯು ||
ಪೂಜ್ಯವು, ಪೂಜಕ, ಪೂಜೆಯು, ಪೂವು | ರೂಪ ರೂಪಗಳು ನಾವೂ ನೀವು ||
ಹೆಣ್ಣೂ ಮಣ್ಣೂ ಹೊನ್ನೂ ಒಂದು | ರಮೈಗಮ್ಯ ಶ್ರೀ ರೂಪವು ಎಂದು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿರೀಕ್ಷೆ
Next post ವಾಗ್ದೇವಿ – ೩೫

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys