ಮೈ

ಈ ಮೈಯೆ ಒಮ್ಮೆ ಇಡಿ ವಿಶ್ವವೆಂದು ನನಗೇಕೊ ತೋರುತಿತ್ತು.
ಈಗ ಜೀವದೀ ಹೊಟ್ಟೆ ಪೂರ್ತಿ ಎನಿಸುವದು ಎರಡೆ ತುತ್ತು.
ಜಗದ್ವ್ಯಾಡ ಸಂಚಲನಕೀಗ ಇದು ಸಣ್ಣದೊಂದು ಸಂಚಿ
ಬೃಹದ್ಭೂಮಿಯಲಿ ಬೃಹತ್ತರದ ಆದರ್ಶಕೆಂದು ಹಂಚಿ

ಒಪ್ಪಿಡಿಯ ಕವಳ ಏತಕ್ಕೆ ಸಾಕು ಅದು ಮಹಾಸುರದ ಭಿಕ್ಷೆ
ಅನಂತತೆಯ ಸಂತತಿಯನುಂಡು ತೀರಿತು, ಆ ಬುಭುಕ್ಷೆ;
ಆ ಬುಭೂಕ್ಷೆ ಒಳಮಡಿಕೆಗಳಲಿ ತುಷ್ಣೀ೦ಭಾವವಾಗಿ
ದೇವರಾಯಸವು ಆಗಿ ಇಹುದು ಶಾಶ್ವತದ ಠಾವಿಗಾಗಿ.

ಅದರ ಇದಿರು ಮುಗಿದಿರದ ಹೊತ್ತು-ಗೊತ್ತೆಲ್ಲ ಮುಗಿಲ ತಬ್ಬಿ
ಮಾಡಿದ್ದೆ ಮಾಟ ಮಟ್ಟಿದ್ದೆ ಚಿನ್ನ ಎನುವಂತೆ ಘಟನೆ ಹಬ್ಬಿ
ಹೃದಯವನು ಹೊಕ್ಕು ಬ್ರಹ್ಮಾಂಡದುಕ್ಕು ಉಕ್ಕುಕ್ಕು ಮಧುರಪೂರಾ
ಅದರ ಮನವು ಹಾಕುವದು ಎಣಿಕೆ ಧ್ರುವೆನೆಡೆಗೆ ದೂರ ದೂರಾ.

ಇಟುಕುಮನೆಯ ವಾಮನನು ಬೆಳೆದ ಹೇಗೋ – ವಿಶ್ವಯೋಗಿ
ಈ ಪ್ರಪಂಚದೊಡನೊಡನೆ ಸಾಗಿ ವಿಶ್ವಾಕಾರನಾಗಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವಳ ಕಣ್ಣುಗಳು
Next post ಖಾಲಿ ಗಾದಿಯ ಕೈವಾಡ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys