ಬೆಳಕು

ಬೆಳಕು ಬೆಳಕು ಕೊನೆಯಿರದ ಬೆಳಕು ಕತ್ತಲೆಗೆ ಖಣವೆ ಇಲ್ಲ.
ಪ್ರಾಣದಲ್ಲಿ ಅಜ್ಞಾತ-ಖಾತ ತೆರೆವುದು ರಹಸ್ಯವೆಲ್ಲ.
ಜಡದಗಾಧ ಆಖಾತ ಮುಂಚೆ ಮುಚ್ಚಿತ್ತು ತನ್ನ ನೆಲೆಯ.
ಲವಲವಿಕೆಯಲ್ಲಿ ಎಚ್ಚೆತ್ತು ಈಗ ಎತ್ತಿಹುದು ತನ್ನ ತಲೆಯ.

ಬೆಳಕು, ಹೊತ್ತಿರದ ಬೆಳಕು ತನ್ನ ತಾನಾದ ಅಚ್ಚವೆಳಕು
ಪಾವಿತ್ರ್ಯ ಮುದ್ರೆಯಲ್ಲಿದ್ದ ಗೂಢ ತೆರೆದಿತ್ತು ತನ್ನ ಫಡಕು
ಬೆಳಕು ಬೆಳಕು ಕಿಚ್ಚೆದ್ದ ಬೆಳಕು ಆನಂತ್ಯ ಹೃದಯರತ್ನ
ಎದೆಯಲೆನ್ನ ಪ್ರಸ್ಪಂದಿಸುತ್ತ ಅರಳಿದೆ ಗುಲಾಬಿ ನೂತ್ನ.

ಬೆಳಕೊ ಬೆಳಕೊ ನರನಾಡಿಯಲ್ಲಿ ತುತ್ತೂರಿ ಕುಣಿವುತೆದ್ದು
ಧ್ಯಾನಸ್ಥ ಬೆಳಕು! ಆ ಕಾವಿನಿಂದ ಜೀವಾಣು ತಣಿವುತಿದ್ದು
ಆನಂದ ಮುಗ್ಧ, ಸುಸಮಾಧಿಯಲ್ಲಿ ಪ್ರಜ್ವಲಿಸುತಿಹುದು ತೀರಾ
ಅಮೃತ ಸ್ಪರ್ಶ ನೆನೆವಂತೆ ರಸದಿ ನಾಂದಿಹವು ಪುಟ್ಟಪೂರಾ.

ದೀಪ್ತಿ ಸಾಗರದ ಬೃಹದ್ಗರ್ಭದಲ್ಲಿ ಸ್ತಂಭದಂತೆ ನಿಂತೆ
ಮೂಲದಗ್ನಿಯನು ಮೇಲಿನಗ್ನಿಯಲಿ ಒಂದುಗೊಳಿಸುವಂತೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾರಯ್ಕೆ
Next post ವಾಗ್ದೇವಿ – ೩೯

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys