ಮಿಹಿರದ್ವೀಪ

ಸ್ವರ್ಣಸಮುದ್ರದಿ ಪಯಣಿಸಿಹೆ
ರಜತತೀರವನು ನೂಕಿರುವೆ
ಜ್ಞಾನಭಾಸ್ಕರನ ತಲುಪಿರುವೆ
ಇಳೆಯಿರುಳಭಿಜಿತ್ ಸೋಕಿರುವೆ.

ದೃಷ್ಟಿದೀಪಿಸುವ ಕ್ಷೇತ್ರಗಳು
ಕೆಚ್ಚಿನ ಕಸುವಿನ ಬೆಟ್ಟಗಳು
ಹರ್ಷಜ್ವಾಲೆಯ ಶಿಖರಗಳು
ಕೇವಲ ಬೆಳಕಿನ ಗಾಳಿಯೊಳು.

ಆತ್ಮವಿಸ್ಕೃತಿಯ ಕಡಲುಗಳು
ರುದ್ರನಿದ್ರೆಗಳ ಗಿರಿದರಿಯು
ನನ್ನ ಜೀವದಾ ರಾಜ್ಯದೊಳು
ನಂದಾ ದ್ವೀಪಾವಳಿಗಳೊಳು.

ದೇವನೆ ದೇವ ಮೌನೋ ಮೌನ
ಕಾಲರಹಿತವಹ ಕಾಲದ ಅಯನ
ಅಲ್ಲಿ ಜೀವನವು ರಾಗದ ಮೂರ್ತಿ.
ಸತ್ಯ ವಿಚಾರವೆ ಛಂದಃಶಯನ

ಅಲ್ಲಿಯ ಬೆಳಕೇ ಸುತ್ತೂಮುತ್ತು.
ಇಲ್ಲಿಗೆ ಬಂದರು ಎತ್ತಲು ಇತ್ತು
ಅಮೃತ ಜ್ಞಾನವು ಇಳೆಗಿಳಿದಿತ್ತು
ಮೌನವ ಜನ್ಮದ ಗರ್ಭದಿ ಬಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾವ ದಾರಿಯೊ!
Next post ವಾಗ್ದೇವಿ – ೪೦

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys