ಮಾನವ-ಬೌದ್ಧಿಕ ಪ್ರಾಣಿ

ಆ ಅಸೀಮದಾ ಸಂಚುಹೊಂಚಿನಲಿ ಒಂದು ಕುದ್ರ ಘಟಕ
ವೈಶ್ವಾನರನ ಆವರ್ತನೃತ್ಯರಂಗದಲಿ ಸಣ್ಣ ಚುಟುಕ.
ಬಟಾಬಯಲು ಇದು, ಹೋ ಅಭಂಡ ತಾನರ್ಥಹೀನ ಹಳವು
ಅಕಸ್ಮಾತ್ತೊ ಎನುವಂತೆ ಬಂತು ಭೂಮಿಯಲಿ ನರನ ಫಲವು.

ತನ್ನ ನರೆತ ಅಜ್ಞಾನದಲ್ಲಿ ತಾನೆರೆತ ಒಂದು ಪ್ರಾಣಿ
ನೆರಳು ಬೆಳಕು ಅರ್ಧಾರ್ಧವಿರುವ ಮನ; ಬದುಕಿನೊಂದು ಕಾಣಿ
ಮರ್ತ್ಯಲೋಕದೀ ಬಂದಿ, ತಿಳಿವ ಶ್ವಾಸೋಚ್ಛ್ವಾಸ ಹರುಷ.
ಹೇಗೊ ಬಾಳುವನು ಕುಂಟುಕೂರಿಗೆಯ ಕ್ಷಣಿಕ ನೂರು ವರುಷ

ಆದರೇನು ಆಂತರ್ಯ ಪ್ರಗತಿ ದೈವಿಕರ ಅಚ್ಚಛಲವು
ಚಿನ್ಮಯದ ಅಜ್ಞಾನ ನಿಶೆಯ ಚೇತನದ ಚೊಕ್ಕ ಬಲವು
ಬರುವೆ ಎನ್ನುತಿದೆ ಪರಂಜ್ಯೋತಿ ಸಾಕ್ಷಾತ್ಕರಿಸಿಕೊಂಡು
ಆ ಅದೃಷ್ಟ ನಿಷ್ಕರುಣ ಶಕ್ತಿಗಳನಿದಿರು ಎದುರುಗೊಂಡು

ಅಚಿತ್ತಾದ ಈ ಮಣ್ಣಿನಲ್ಲಿ ದಿವ್ಯತ್ವದೂರ್ಧ್ವಭಾವ
ಕಾಂಬೆನೆನ್ನುವದು ಮಂದಗತಿಯೊಳೇ ಚಿರಂತನದ ಜಾವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಬರಿಯ ಬಾಳು
Next post ವಾಗ್ದೇವಿ – ೪೪

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys