Home / ಕವನ / ಕವಿತೆ / ಸಾಕ್ಷಿ ಮತ್ತು ಚಕ್ರ

ಸಾಕ್ಷಿ ಮತ್ತು ಚಕ್ರ

ಯಾರಣ್ಣ ನೀ ಬಿಡುಗಣ್ಣನೇ | ಎದೆಗೆಳೆಯ ! ಕುಳಿತಿಹ ತಣ್ಣನೇ
ಮಾನವನ ಕರ್ಮವ ಬಿಮ್ಮನೇ | ಸುಖದುಃಖ ನೋಡುವೆ ಸುಮ್ಮನೇ

ಸಂತಾಪ ಜಾಲಕೆ ಅದರದೇ | ಮರಣಕ್ಕೂ ವಿಧಿಗೂ ಬೆದರದೇ
ಕುರುಡು ಜಗ ಉರುಳುವುದ ಕಾಯುವೆ | ಸಾಕ್ಷಿ ಕಣ್ಣೂ ನೋಯವೇ ?

ಈ ವಕ್ರಚಕ್ರದ ಜೊತೆಗೆ ನಿಃಸಹನಂತೆ ಏತಕೊ ತಿರುಗುವೇ
ಯಾ ಕಲ್ಪ ತವ ಸಂಕಲ್ಪವೋ | ಈ ಹೃದಯ ದುಡಿಸಿದೆ ಸ್ವಲ್ಪವೇ

ನೀ ನಿಲ್ಲದೇನೂ ನಿಲ್ಲದೋ | ಚಿರಕಾಲದಲು ಅನುಭಾವಿಯೋ
ಜಡ ಪ್ರಕೃತಿ ನಿಯಮಿತ ಪ್ರೇರಣೆಯ ಬಿಟ್ಟಿನ್ನು ಜೀವನ ತೊಳೆವೆವು

ಹುಲು ಎದೆಯ ವಾಸನೆ ತೊಳೆವೆವು | ನಿನ್ನಂತೆ ಪರಿಣತಿಗೊಳುವೆವು
ಎಂದಿನಂತೆಯೆ ಹಿಂದಿನಂತೆಯೆ ಪ್ರಕೃತಿರಥವೋ ಸಾಗಲಿ

ತನ್ನ ರತಿಕೃತಿ, ಭಿನ್ನ ಗತಿಸ್ಥಿತಿ, ಅಂಧ ರೀತಿಯೊಳಾಗಲಿ
ಈ ಇಹದ ರಾಗದ್ವೇಷ ಈ ಸುಖದುಃಖ ಜಲಲಿಪಿಮಾನವು

ಏನಿಲ್ಲ ಅರ್ಥವು ವ್ಯರ್ಥವಿದು ಗುರಿಯಿರದ ಜಗ-ಸೋಪಾನವು
ಅಗೊ ಪುರುಷನೋ, ಅದು ಆತ್ಮವೋ, ಆ ಜೀವವೋ ಕಾಯುತಲಿರೆ

ಆಕಾಶವ್ಯೂಹಪರಾಕ್ರಮಕ್ಕದೊ ಕಾಲತತಿ ಸಾಯುತಲಿರೆ
ಶಮದ ಸೀಮೆಯೊಳಚಲವಿರುವೆವು, ನಿಯತಿ ಮರಣವ ನೂಗಲಿ

ನೀನಾರು ಹೇಳೈ ಸಾಕ್ಷಿಯೇ, | ನಾನಾರು ನಿನ್ನೊಡನಾತನು
ಈ ಲೋಕಚಕ್ರವ ಕಾಲದೇಶದಿ ಕಾಂಬ ನಾಮಾತೀತನು ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...