Home / ಕವನ / ಕವಿತೆ / ಸ್ವಪ್ನನೌಕೆ

ಸ್ವಪ್ನನೌಕೆ

ಓ ಸ್ವಪ್ನಾಗ್ನಿಸೃಷ್ಟಾ ನೌಕಾರೂಢಾ ಗೂಢಾ
ಯಾರವನೋ ಚಿರತರುಣಾ ಬಂದಾ
ಹುಬ್ಬೋ, ಅನಂಗನು ಚಿತೆಯಲಿ ಮಣಿಸಿದ ಕಬ್ಬೋ
ಆಹಾ ಈ ಕಾಯಾ ಹಿರಣ್ಯಾಗರ್ಭಚ್ಛಾಯಾ
– ಆಕೃತಿಬಂಧಾ
ಮೌನಾ ಕರಗಿಸಿ ಎರೆದಾ, ಸೆಳೆಮಿಂಚಿನ ತೆರದಾ,
ಸವಿನುಡಿ ಛಂದಾ-
`ಆ ಹೃದಯ ಜ್ವಾಲಾ ಮಾಲಾಲಂಕೃತಾ ಯಜ್ಞಾ ಸಿದ್ದವೇನೇ ?
ಕಂಕಣಾ ಬದ್ದವೇನೇ ?
ಬಂದೆನೇ! ಬರುವಿಯೇನೇ ?’- ಎಂದಾ

ಅರರೇ, ಗದಗದನೇ ಏನೋ ನಡುಗಿತ್ತೋ-ನಡುಗಿತ್ತೂ
ಎದೆಗೂಡಿನ ಹಿಂದೇ
ಏನೇನೋ ಅಡಗಿತ್ತೋ-ಅಡಗಿತ್ತೂ
ನೆನವೇ ನನೆಕೊನೆಹೋಗಿ ಪಲ್ಲವಿಸಿತೊ ಜೀವನವೃಕ್ಷಾ
ಆಮೋದ ಲಿಂಗ ಪಡಪಡಿಸಿತು ಪ್ರಾಣದ ಪಕ್ಷಾ
ಪ್ರತಿಬಿಂಬಿತವಾಯ್ತೋ ಭಗ್ಗನೇ, ಸ್ಮೃತಿಸಾರದ ಸಾತ್ವಿಕ ಲಕ್ಷಾ
ಓಹೋ ಹೋಯಿತೋ ಹಡಗಾ, ಬಂಗಾರದ ಹುಡುಗಾ
ಹೃದಯದ ದೇವಾ!-
ತಾಳೆನೇ ನೋವಾ.
ಟೊಳ್ಳೋ ಈ ಜಗವೆಲ್ಲಾ ಬಯಲಿನ ಡೊಗರು
ಬದುಕಾಗಿದೆ ಹಗುರು
ಒಲವಿಲ್ಲಾ ಬಾರನು ನಲ್ಲಾ, ಹಳೆ ಹಿಗ್ಗಿಗೆ ಮೂಡದು ಚಿಗುರು
ಬರದೋ, ಬರದೆನಿಸದೆ ಎಂದೂ ಬರದು
ಕಿಸಲಯ-ನಯ ಹೋಗಿದೆ ತರಿದು
ಬರಿದಾಗಿದೆ ಒಳಗೂ ಹೊರಗೂ
ಆ ರುಹ್ಮಾಂಗದ ದೇವನ ಕನಸೂ ಬರಿದಾಗಿ
ಕನಸಿನ ಹಡಗಾ ಬರದಾಗಿ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...