Home / ಕವನ / ಕವಿತೆ / ಹುಲಿ ಮತ್ತು ಹುಲ್ಲೆ

ಹುಲಿ ಮತ್ತು ಹುಲ್ಲೆ

ಮಿಂಚಿ ಚಕಮಕ, ಬಾಗಿ ತೂಗುತ ಮಣಿದು ಬಳಕುತ ತಡೆದಿದೆ
ಕಾಮಬೆಟ್ಟದ ಪಚ್ಚೆ ಹೃದಯದಿ ಏನು ನುಸುಳುತ ನಡೆದಿದೆ
ನಯನ ನಿಗಿನಿಗಿ ಎದೆಯ ದೃಢಪಡೆ ಏನೊ ನಾತವ ಹಿಡಿದಿದೆ
ಕಳ್ಳಹೆಜ್ಜೆಯ ಮೆಲ್ಲನಡಿಗೆಯ ಘಾತಸಂಭ್ರಮ ಪಡೆದಿದೆ
ಎಲೆಯ ಸಂದಿಗಳಿಂದ ಜಳಕನೆ ಹರಿದ ಮರ್ಮರ ಗಾಳಿಯೆ
ಮೊದಲೆ ನಿರ್ದಯವಾದ ಅದ್ಭುತ ಮತ್ತೆ ಕೆರಳಿದರೆಂತೆನೆ
ಉಸಿರನಡಗಿಸಿ ಭಯದಿ ನಡುಗುತ ಕಾಣ ಕಾಣುತ ಜಾರಿದೆ
ಮಹಾಮೃಗವಗೊ ಹೇಗೆ ಸಾಗಿದೆ ಬಾಗಿ ನಯಭಯಮಯದಲಿ
ಸೌಮ್ಯ ಸೌಂದರ್ಯವನ್ನು ನಶಿಸಲು ರೌದ್ರ ಸುಂದರ ನಯದಲಿ.

ಮುಗ್ಧ ಮೃಗವಧು ತನ್ನ ಕಾಲಿಲೆ ಮರಣವಿದ್ದೆಡೆ ಸಾಗಿದೆ
ಬನದ ತಣ್ನೆಳಲಲ್ಲಿ ತಿಳಿಗೊಳದಲ್ಲಿ ನಿರ್ಭಯ ಬಾಗಿದೆ
ಪಾಪ, ಸಂಶಯವೆಂಬುದೇ ಗೊತ್ತಿಲ್ಲ ನಂಬುಗೆ-ಜೀವಕೆ
ಆಚೆ-ಈಚೆಗೆ ನೋಡದೇ ನಾಲಗೆಯ ಚಾಚಿರೆ ತೇವಕೆ
ಹಾರಿ ಜಿಗಿದಿತು ಮೇಲೆ ಒಗೆದಿತು ಹುಲಿಯು ಹುಲ್ಲೆಯ ಹೀರಿತು
ಅಯ್ಯೋ ಬಿದ್ದಿತು, ಭಕ್ಷವಾಯಿತು, ಆಯಿತೋ ಬಾಳಾಯಿತು,
ಗಹನ ಗುಹೆಯಲ್ಲಿ ಒಂಟಿ ಇಹ ಸಖನನ್ನೆ ನೆನೆಯುತ ತೀರಿತು
ಅದೇ ಸುಖದಲಿ ಮೃತ್ಯುಮುಖದಲಿ ಹುಲ್ಲೆ ಓ ಹಾಳಾಯಿತು
ಹಾರಿ ಜಪ್ಪಿಸಿ ಕೊಲುವ ಕೌಶಲವಿರಲಿ ಆರ್ಭಟಿ ಇಂದಿನ
ಆದರೂ ಬಂದೀತು ಎಂದೋ ಹುಲಿಯ ಲಯವಾದೊಂದಿನ.

ನೆಲವ ಲಟಲಟ ಮುರಿಯೆ ಮೆಟ್ಟಿದ ಪೆಡಂಭೂತಗಳೆಲ್ಲಿವೆ?
ನೆರಳ ತಂಗೊಳ ಜಲವ ಕುಡಿದುಳಿದಾವು ಹರಿಣಗಳಿಲ್ಲಿಯೇ!
ಪ್ರಬಲ ಬಲಿಯೇ ತನ್ನ ಬಲಭರಭಾರದಲ್ಲಿಯೆ ಮಡಿವನು
ಬದುಕಿನೊಡೆಯನು ಸತ್ತನೆನಿಸಿದ ಸತ್ಯಸಂತತಿ ಜೀವನು
ಕೊಲ್ಲಬಲ್ಲವ ಮೆಲ್ಲಮೆಲ್ಲನೆ ಮೃತ್ಯು ಪಂಥವ ಹಿಡಿವನು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...