ಹುಲಿ ಮತ್ತು ಹುಲ್ಲೆ

ಮಿಂಚಿ ಚಕಮಕ, ಬಾಗಿ ತೂಗುತ ಮಣಿದು ಬಳಕುತ ತಡೆದಿದೆ
ಕಾಮಬೆಟ್ಟದ ಪಚ್ಚೆ ಹೃದಯದಿ ಏನು ನುಸುಳುತ ನಡೆದಿದೆ
ನಯನ ನಿಗಿನಿಗಿ ಎದೆಯ ದೃಢಪಡೆ ಏನೊ ನಾತವ ಹಿಡಿದಿದೆ
ಕಳ್ಳಹೆಜ್ಜೆಯ ಮೆಲ್ಲನಡಿಗೆಯ ಘಾತಸಂಭ್ರಮ ಪಡೆದಿದೆ
ಎಲೆಯ ಸಂದಿಗಳಿಂದ ಜಳಕನೆ ಹರಿದ ಮರ್ಮರ ಗಾಳಿಯೆ
ಮೊದಲೆ ನಿರ್ದಯವಾದ ಅದ್ಭುತ ಮತ್ತೆ ಕೆರಳಿದರೆಂತೆನೆ
ಉಸಿರನಡಗಿಸಿ ಭಯದಿ ನಡುಗುತ ಕಾಣ ಕಾಣುತ ಜಾರಿದೆ
ಮಹಾಮೃಗವಗೊ ಹೇಗೆ ಸಾಗಿದೆ ಬಾಗಿ ನಯಭಯಮಯದಲಿ
ಸೌಮ್ಯ ಸೌಂದರ್ಯವನ್ನು ನಶಿಸಲು ರೌದ್ರ ಸುಂದರ ನಯದಲಿ.

ಮುಗ್ಧ ಮೃಗವಧು ತನ್ನ ಕಾಲಿಲೆ ಮರಣವಿದ್ದೆಡೆ ಸಾಗಿದೆ
ಬನದ ತಣ್ನೆಳಲಲ್ಲಿ ತಿಳಿಗೊಳದಲ್ಲಿ ನಿರ್ಭಯ ಬಾಗಿದೆ
ಪಾಪ, ಸಂಶಯವೆಂಬುದೇ ಗೊತ್ತಿಲ್ಲ ನಂಬುಗೆ-ಜೀವಕೆ
ಆಚೆ-ಈಚೆಗೆ ನೋಡದೇ ನಾಲಗೆಯ ಚಾಚಿರೆ ತೇವಕೆ
ಹಾರಿ ಜಿಗಿದಿತು ಮೇಲೆ ಒಗೆದಿತು ಹುಲಿಯು ಹುಲ್ಲೆಯ ಹೀರಿತು
ಅಯ್ಯೋ ಬಿದ್ದಿತು, ಭಕ್ಷವಾಯಿತು, ಆಯಿತೋ ಬಾಳಾಯಿತು,
ಗಹನ ಗುಹೆಯಲ್ಲಿ ಒಂಟಿ ಇಹ ಸಖನನ್ನೆ ನೆನೆಯುತ ತೀರಿತು
ಅದೇ ಸುಖದಲಿ ಮೃತ್ಯುಮುಖದಲಿ ಹುಲ್ಲೆ ಓ ಹಾಳಾಯಿತು
ಹಾರಿ ಜಪ್ಪಿಸಿ ಕೊಲುವ ಕೌಶಲವಿರಲಿ ಆರ್ಭಟಿ ಇಂದಿನ
ಆದರೂ ಬಂದೀತು ಎಂದೋ ಹುಲಿಯ ಲಯವಾದೊಂದಿನ.

ನೆಲವ ಲಟಲಟ ಮುರಿಯೆ ಮೆಟ್ಟಿದ ಪೆಡಂಭೂತಗಳೆಲ್ಲಿವೆ?
ನೆರಳ ತಂಗೊಳ ಜಲವ ಕುಡಿದುಳಿದಾವು ಹರಿಣಗಳಿಲ್ಲಿಯೇ!
ಪ್ರಬಲ ಬಲಿಯೇ ತನ್ನ ಬಲಭರಭಾರದಲ್ಲಿಯೆ ಮಡಿವನು
ಬದುಕಿನೊಡೆಯನು ಸತ್ತನೆನಿಸಿದ ಸತ್ಯಸಂತತಿ ಜೀವನು
ಕೊಲ್ಲಬಲ್ಲವ ಮೆಲ್ಲಮೆಲ್ಲನೆ ಮೃತ್ಯು ಪಂಥವ ಹಿಡಿವನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನದ ಮಾತು
Next post ವಾಗ್ದೇವಿ – ೪೮

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…