ಹುಲಿ ಮತ್ತು ಹುಲ್ಲೆ

ಮಿಂಚಿ ಚಕಮಕ, ಬಾಗಿ ತೂಗುತ ಮಣಿದು ಬಳಕುತ ತಡೆದಿದೆ
ಕಾಮಬೆಟ್ಟದ ಪಚ್ಚೆ ಹೃದಯದಿ ಏನು ನುಸುಳುತ ನಡೆದಿದೆ
ನಯನ ನಿಗಿನಿಗಿ ಎದೆಯ ದೃಢಪಡೆ ಏನೊ ನಾತವ ಹಿಡಿದಿದೆ
ಕಳ್ಳಹೆಜ್ಜೆಯ ಮೆಲ್ಲನಡಿಗೆಯ ಘಾತಸಂಭ್ರಮ ಪಡೆದಿದೆ
ಎಲೆಯ ಸಂದಿಗಳಿಂದ ಜಳಕನೆ ಹರಿದ ಮರ್ಮರ ಗಾಳಿಯೆ
ಮೊದಲೆ ನಿರ್ದಯವಾದ ಅದ್ಭುತ ಮತ್ತೆ ಕೆರಳಿದರೆಂತೆನೆ
ಉಸಿರನಡಗಿಸಿ ಭಯದಿ ನಡುಗುತ ಕಾಣ ಕಾಣುತ ಜಾರಿದೆ
ಮಹಾಮೃಗವಗೊ ಹೇಗೆ ಸಾಗಿದೆ ಬಾಗಿ ನಯಭಯಮಯದಲಿ
ಸೌಮ್ಯ ಸೌಂದರ್ಯವನ್ನು ನಶಿಸಲು ರೌದ್ರ ಸುಂದರ ನಯದಲಿ.

ಮುಗ್ಧ ಮೃಗವಧು ತನ್ನ ಕಾಲಿಲೆ ಮರಣವಿದ್ದೆಡೆ ಸಾಗಿದೆ
ಬನದ ತಣ್ನೆಳಲಲ್ಲಿ ತಿಳಿಗೊಳದಲ್ಲಿ ನಿರ್ಭಯ ಬಾಗಿದೆ
ಪಾಪ, ಸಂಶಯವೆಂಬುದೇ ಗೊತ್ತಿಲ್ಲ ನಂಬುಗೆ-ಜೀವಕೆ
ಆಚೆ-ಈಚೆಗೆ ನೋಡದೇ ನಾಲಗೆಯ ಚಾಚಿರೆ ತೇವಕೆ
ಹಾರಿ ಜಿಗಿದಿತು ಮೇಲೆ ಒಗೆದಿತು ಹುಲಿಯು ಹುಲ್ಲೆಯ ಹೀರಿತು
ಅಯ್ಯೋ ಬಿದ್ದಿತು, ಭಕ್ಷವಾಯಿತು, ಆಯಿತೋ ಬಾಳಾಯಿತು,
ಗಹನ ಗುಹೆಯಲ್ಲಿ ಒಂಟಿ ಇಹ ಸಖನನ್ನೆ ನೆನೆಯುತ ತೀರಿತು
ಅದೇ ಸುಖದಲಿ ಮೃತ್ಯುಮುಖದಲಿ ಹುಲ್ಲೆ ಓ ಹಾಳಾಯಿತು
ಹಾರಿ ಜಪ್ಪಿಸಿ ಕೊಲುವ ಕೌಶಲವಿರಲಿ ಆರ್ಭಟಿ ಇಂದಿನ
ಆದರೂ ಬಂದೀತು ಎಂದೋ ಹುಲಿಯ ಲಯವಾದೊಂದಿನ.

ನೆಲವ ಲಟಲಟ ಮುರಿಯೆ ಮೆಟ್ಟಿದ ಪೆಡಂಭೂತಗಳೆಲ್ಲಿವೆ?
ನೆರಳ ತಂಗೊಳ ಜಲವ ಕುಡಿದುಳಿದಾವು ಹರಿಣಗಳಿಲ್ಲಿಯೇ!
ಪ್ರಬಲ ಬಲಿಯೇ ತನ್ನ ಬಲಭರಭಾರದಲ್ಲಿಯೆ ಮಡಿವನು
ಬದುಕಿನೊಡೆಯನು ಸತ್ತನೆನಿಸಿದ ಸತ್ಯಸಂತತಿ ಜೀವನು
ಕೊಲ್ಲಬಲ್ಲವ ಮೆಲ್ಲಮೆಲ್ಲನೆ ಮೃತ್ಯು ಪಂಥವ ಹಿಡಿವನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನದ ಮಾತು
Next post ವಾಗ್ದೇವಿ – ೪೮

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys