Home / ಕವನ / ಕವಿತೆ / ಹುಲಿ ಮತ್ತು ಹುಲ್ಲೆ

ಹುಲಿ ಮತ್ತು ಹುಲ್ಲೆ

ಮಿಂಚಿ ಚಕಮಕ, ಬಾಗಿ ತೂಗುತ ಮಣಿದು ಬಳಕುತ ತಡೆದಿದೆ
ಕಾಮಬೆಟ್ಟದ ಪಚ್ಚೆ ಹೃದಯದಿ ಏನು ನುಸುಳುತ ನಡೆದಿದೆ
ನಯನ ನಿಗಿನಿಗಿ ಎದೆಯ ದೃಢಪಡೆ ಏನೊ ನಾತವ ಹಿಡಿದಿದೆ
ಕಳ್ಳಹೆಜ್ಜೆಯ ಮೆಲ್ಲನಡಿಗೆಯ ಘಾತಸಂಭ್ರಮ ಪಡೆದಿದೆ
ಎಲೆಯ ಸಂದಿಗಳಿಂದ ಜಳಕನೆ ಹರಿದ ಮರ್ಮರ ಗಾಳಿಯೆ
ಮೊದಲೆ ನಿರ್ದಯವಾದ ಅದ್ಭುತ ಮತ್ತೆ ಕೆರಳಿದರೆಂತೆನೆ
ಉಸಿರನಡಗಿಸಿ ಭಯದಿ ನಡುಗುತ ಕಾಣ ಕಾಣುತ ಜಾರಿದೆ
ಮಹಾಮೃಗವಗೊ ಹೇಗೆ ಸಾಗಿದೆ ಬಾಗಿ ನಯಭಯಮಯದಲಿ
ಸೌಮ್ಯ ಸೌಂದರ್ಯವನ್ನು ನಶಿಸಲು ರೌದ್ರ ಸುಂದರ ನಯದಲಿ.

ಮುಗ್ಧ ಮೃಗವಧು ತನ್ನ ಕಾಲಿಲೆ ಮರಣವಿದ್ದೆಡೆ ಸಾಗಿದೆ
ಬನದ ತಣ್ನೆಳಲಲ್ಲಿ ತಿಳಿಗೊಳದಲ್ಲಿ ನಿರ್ಭಯ ಬಾಗಿದೆ
ಪಾಪ, ಸಂಶಯವೆಂಬುದೇ ಗೊತ್ತಿಲ್ಲ ನಂಬುಗೆ-ಜೀವಕೆ
ಆಚೆ-ಈಚೆಗೆ ನೋಡದೇ ನಾಲಗೆಯ ಚಾಚಿರೆ ತೇವಕೆ
ಹಾರಿ ಜಿಗಿದಿತು ಮೇಲೆ ಒಗೆದಿತು ಹುಲಿಯು ಹುಲ್ಲೆಯ ಹೀರಿತು
ಅಯ್ಯೋ ಬಿದ್ದಿತು, ಭಕ್ಷವಾಯಿತು, ಆಯಿತೋ ಬಾಳಾಯಿತು,
ಗಹನ ಗುಹೆಯಲ್ಲಿ ಒಂಟಿ ಇಹ ಸಖನನ್ನೆ ನೆನೆಯುತ ತೀರಿತು
ಅದೇ ಸುಖದಲಿ ಮೃತ್ಯುಮುಖದಲಿ ಹುಲ್ಲೆ ಓ ಹಾಳಾಯಿತು
ಹಾರಿ ಜಪ್ಪಿಸಿ ಕೊಲುವ ಕೌಶಲವಿರಲಿ ಆರ್ಭಟಿ ಇಂದಿನ
ಆದರೂ ಬಂದೀತು ಎಂದೋ ಹುಲಿಯ ಲಯವಾದೊಂದಿನ.

ನೆಲವ ಲಟಲಟ ಮುರಿಯೆ ಮೆಟ್ಟಿದ ಪೆಡಂಭೂತಗಳೆಲ್ಲಿವೆ?
ನೆರಳ ತಂಗೊಳ ಜಲವ ಕುಡಿದುಳಿದಾವು ಹರಿಣಗಳಿಲ್ಲಿಯೇ!
ಪ್ರಬಲ ಬಲಿಯೇ ತನ್ನ ಬಲಭರಭಾರದಲ್ಲಿಯೆ ಮಡಿವನು
ಬದುಕಿನೊಡೆಯನು ಸತ್ತನೆನಿಸಿದ ಸತ್ಯಸಂತತಿ ಜೀವನು
ಕೊಲ್ಲಬಲ್ಲವ ಮೆಲ್ಲಮೆಲ್ಲನೆ ಮೃತ್ಯು ಪಂಥವ ಹಿಡಿವನು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...