Home / ಕವನ / ಕವಿತೆ / ಪ್ರತೀಕ್ಷಾ-ಸಮಾಧಿ

ಪ್ರತೀಕ್ಷಾ-ಸಮಾಧಿ

ಬ್ರಹ್ಮಾಂಡಕೆ ಕಾನ್ ಕೊಡುತಿದ್ದೆ, ಒಬ್ಬೊಂಟಿಗ ಶಮ-ಶಿಖರದಲೂ
ಮುತ್ತಿತ್ತೋ ಗುಜುಗುಜು ನಾದಾ
ಝಗಝಗಿಸುವ ನಿದ್ದೆಯೊಳದ್ದಿ, ಮಾನಸವನು ಸುತ್ತಿದೆ ಎತ್ತೂ
ಮರ್ಮರಿಸುವ ನಿರ್ಭರ ಮೌನಾ.
ಚಿರಶುಭ್ರ ಜ್ವಾಲಾ ಗೂಢಾ, ಮನನಕ್ಕೆ ಪ್ರಾಪ್ತ ಪದಾರ್ಥಾ
ಜಿನುಗುಡುತಿದೆ ಅಸ್ಪುಟ ನಾದಾ
ದೃಕ್‌ಪಥಕತಿಗೋಚರಸೀಮಾ, ಪಡಿದನಿಸುತ್ತಿಹುದು ಅಲೀನಾ
ಜಡವಾದದ ಗಾಢ ವಿವಾದಾ
ಯಃಕಶ್ಚಿತ್ ಛಾಯಾವಿಹಗಾ, ಪಕ್ಷಾಹತ ಚಂಚಲವಾದಾ
ನಿಸ್ತೇಜಿತ ಪಲ್ವಲದಂತೆ,
ಕೆಳಕೆಳಗೋ ದೂರವಿದೂರಾ ಆಕ್ರಾಮಿತರಾಗ ವಿಭಂಗಾ
ಆಜೀವನ ಜಲಧಿ ಅಪಾರಾ
ಲಗುಬಗೆ ಬಗೆ ಚಕ್ರಾಕಾರಾ ಹಾರಾಟವ ನಿಲಿಸಿದೆ ಪೂರಾ
ಸ್ವನಿವೃತ್ತವೊ ಸ್ವಾಂತವಿಚಾರಾ
ನಿಸ್ತಬ್ಧಾ ನಾಡಿಸ್ಪಂದಾ, ಈ ಅಸ್ಮಿತೆ ಶಾಂತಾ ನಿಷ್ಠಾ
ಅಧ್ಭುತ ವಿಶ್ರಾ೦ತಿ ಸ್ನಾತಾ, –
ಅವಲೋಕಿಸ ಬಂದಿದೆ ಜ್ಞಾನಾ, ವಿಜ್ಞಾನದ ಮೀರಿದ ಮಾನಾ
ಆ ಮಾನಸ ಪ್ರಮೆಗೆ ಅಮೇಯಾ
ತುಂತುಂಬಿದೆ ತೂತೂಬಿನೊಳು, ಚೈತನ್ಯದ ಘನ ಅವಕಾಶಾ
ಸತ್‌ಸಾಕ್ಷಾತ್ಕಾರ ಪ್ರಕಾಶಾ,
ಕಂಪಿಸುತಿದೆ ಸಂವಿತ್ತಾಗ್ನಿ, ಪುಲಕಿಸುತಿದೆ ತಂತಾನಾಗಿ
ಸ್ವಾಧಿಷ್ಠಾನಪ್ರಭಾವಾ,
ಭೂದೇವಿಯ ನೂತನ ಪಾತ್ರಾ ಸಮಾಧಿಯೇ ಕಾಂಚೀದಾಮಾ
ಸ್ವರ್ಗಾಂಬರ ವಸನ ಸಮಾನಾ
ಶಾಶ್ವತತೆಯ ಹೆಬ್ಬಾಗಿಲೊಳು, ದಿವ್ಯಪ್ರಭೆ ಪಕ್ಷಗಳಾದ
ನಿಯತಿಯು ಶುಭನಿದ್ರಾಮಗ್ನಾ
ಕಾಲನಿರೀಕ್ಷಾಶೂನ್ಯಾ, ಚೇತಿಸುವಾ ವಿದ್ಯುಲ್ಲೇಖಾ
ವ್ಯವರ್ತಿಕ ಮಂತ್ರೋತ್ಸೇಕಾ,
ಪಾರ್ಥಿವ ಗೃಹ ಸರ್ಜನ ಸಿದ್ದಾ ಅವಕಾಶಾವಸ್ತಿತ ದೇವಾ
ಯೋಗಾಲಂಬಿ ಸ್ವಭಾವಾ
ಚಿರಂತನದ ಪಾದಾರ್ಪಣಕೆ ಆದೇಶಾಗಮನಾರ್ತಸ್ತಾ
ಪ್ರತೀಕ್ಷಾಪೇಕ್ಷ ಬುಭೂಷಾ
ಬೀಸಿತ್ತೋವೋ ಸಂಭಾವ್ಯಾ, ಆನಂದ ರಾಗಾಲಾಪಾ
ಆನಂತ್ಯದ ಸಾಗರದಿಂದಾ.
*****

Tagged:

Leave a Reply

Your email address will not be published. Required fields are marked *

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...