Home / ಕವನ / ಕವಿತೆ / ಪ್ರತೀಕ್ಷಾ-ಸಮಾಧಿ

ಪ್ರತೀಕ್ಷಾ-ಸಮಾಧಿ

ಬ್ರಹ್ಮಾಂಡಕೆ ಕಾನ್ ಕೊಡುತಿದ್ದೆ, ಒಬ್ಬೊಂಟಿಗ ಶಮ-ಶಿಖರದಲೂ
ಮುತ್ತಿತ್ತೋ ಗುಜುಗುಜು ನಾದಾ
ಝಗಝಗಿಸುವ ನಿದ್ದೆಯೊಳದ್ದಿ, ಮಾನಸವನು ಸುತ್ತಿದೆ ಎತ್ತೂ
ಮರ್ಮರಿಸುವ ನಿರ್ಭರ ಮೌನಾ.
ಚಿರಶುಭ್ರ ಜ್ವಾಲಾ ಗೂಢಾ, ಮನನಕ್ಕೆ ಪ್ರಾಪ್ತ ಪದಾರ್ಥಾ
ಜಿನುಗುಡುತಿದೆ ಅಸ್ಪುಟ ನಾದಾ
ದೃಕ್‌ಪಥಕತಿಗೋಚರಸೀಮಾ, ಪಡಿದನಿಸುತ್ತಿಹುದು ಅಲೀನಾ
ಜಡವಾದದ ಗಾಢ ವಿವಾದಾ
ಯಃಕಶ್ಚಿತ್ ಛಾಯಾವಿಹಗಾ, ಪಕ್ಷಾಹತ ಚಂಚಲವಾದಾ
ನಿಸ್ತೇಜಿತ ಪಲ್ವಲದಂತೆ,
ಕೆಳಕೆಳಗೋ ದೂರವಿದೂರಾ ಆಕ್ರಾಮಿತರಾಗ ವಿಭಂಗಾ
ಆಜೀವನ ಜಲಧಿ ಅಪಾರಾ
ಲಗುಬಗೆ ಬಗೆ ಚಕ್ರಾಕಾರಾ ಹಾರಾಟವ ನಿಲಿಸಿದೆ ಪೂರಾ
ಸ್ವನಿವೃತ್ತವೊ ಸ್ವಾಂತವಿಚಾರಾ
ನಿಸ್ತಬ್ಧಾ ನಾಡಿಸ್ಪಂದಾ, ಈ ಅಸ್ಮಿತೆ ಶಾಂತಾ ನಿಷ್ಠಾ
ಅಧ್ಭುತ ವಿಶ್ರಾ೦ತಿ ಸ್ನಾತಾ, –
ಅವಲೋಕಿಸ ಬಂದಿದೆ ಜ್ಞಾನಾ, ವಿಜ್ಞಾನದ ಮೀರಿದ ಮಾನಾ
ಆ ಮಾನಸ ಪ್ರಮೆಗೆ ಅಮೇಯಾ
ತುಂತುಂಬಿದೆ ತೂತೂಬಿನೊಳು, ಚೈತನ್ಯದ ಘನ ಅವಕಾಶಾ
ಸತ್‌ಸಾಕ್ಷಾತ್ಕಾರ ಪ್ರಕಾಶಾ,
ಕಂಪಿಸುತಿದೆ ಸಂವಿತ್ತಾಗ್ನಿ, ಪುಲಕಿಸುತಿದೆ ತಂತಾನಾಗಿ
ಸ್ವಾಧಿಷ್ಠಾನಪ್ರಭಾವಾ,
ಭೂದೇವಿಯ ನೂತನ ಪಾತ್ರಾ ಸಮಾಧಿಯೇ ಕಾಂಚೀದಾಮಾ
ಸ್ವರ್ಗಾಂಬರ ವಸನ ಸಮಾನಾ
ಶಾಶ್ವತತೆಯ ಹೆಬ್ಬಾಗಿಲೊಳು, ದಿವ್ಯಪ್ರಭೆ ಪಕ್ಷಗಳಾದ
ನಿಯತಿಯು ಶುಭನಿದ್ರಾಮಗ್ನಾ
ಕಾಲನಿರೀಕ್ಷಾಶೂನ್ಯಾ, ಚೇತಿಸುವಾ ವಿದ್ಯುಲ್ಲೇಖಾ
ವ್ಯವರ್ತಿಕ ಮಂತ್ರೋತ್ಸೇಕಾ,
ಪಾರ್ಥಿವ ಗೃಹ ಸರ್ಜನ ಸಿದ್ದಾ ಅವಕಾಶಾವಸ್ತಿತ ದೇವಾ
ಯೋಗಾಲಂಬಿ ಸ್ವಭಾವಾ
ಚಿರಂತನದ ಪಾದಾರ್ಪಣಕೆ ಆದೇಶಾಗಮನಾರ್ತಸ್ತಾ
ಪ್ರತೀಕ್ಷಾಪೇಕ್ಷ ಬುಭೂಷಾ
ಬೀಸಿತ್ತೋವೋ ಸಂಭಾವ್ಯಾ, ಆನಂದ ರಾಗಾಲಾಪಾ
ಆನಂತ್ಯದ ಸಾಗರದಿಂದಾ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...