Home / ಕವನ / ಕವಿತೆ / ಆತ್ಮದ ದೃಶ್ಯ

ಆತ್ಮದ ದೃಶ್ಯ

ಮೋಡಗಳೊರಗಿವೆ ನಿರ್ವಾಸಿತವಾದಾಕಾಶದ ಅವಕಾಶದೊಳು
ಆಲಸದಲಿ ದಣಿವಾದವೊಲು
ಗತಿಸಿದ ಕಡಲಿನ ನೆರೆ ತೆರೆ ಅವಲೋಕಿಸಿ ಸುತ್ತಾಡುತ್ತಿವೆ ಖಿನ್ನ
ಉರುಳುರುಳುತ್ತಿವೆ ಅವಸನ್ನ
ಬರಿ ಚಿಂತೆಯೊಳೋ ಕರಿ ಕರೆ ಚಾಚಿದೆ ಶೋಕಾಕುಲತೆಯೆ ಮುಸುಕಿದೊಲು
ವಾಯವ್ಯದ ಉಸಿರಾಟದಲು
ಅಗೊ ಅದರಾಚೆಗೆ ಅಡಕಿಲವಾಗಿವೆ ವಿಷಾದದಲಿ ಹಲ ದಿನ್ನೆಗಳು

ಪ್ರಕೃತಿಯಲ್ಲಿ ಏಕಾಕಿಯಾದ ಆ ಆತ್ಮದ ನಿಸ್ಸಾರಿತ ಭಾವ
ರಿಕ್ತವಾದ ಹುಸಿಪುಸಿ ಜಾವ
ಗರ್ಭಿತಾರ್ಥದಲ್ಲಿ ಕೆತ್ತಿದಂತೆ ಇರೆ ನೆಲದ ಮುಖಕೆ ಮೊಗವಾಡವಿದೆ
ವಿಕಾರದಲಿ ಕೊರೆದಂತೆ ಇದೆ
ಸ್ತಬ್ದ ಮನೋದಯ ಮಾನವ ಹೃದಯ, ಆಧ್ಯಾತ್ಮಿಕ ಅನುರಾಗದಲಿ
ಇದಿರಿಸುತಿದೆ ಸಂಸ್ತ್ಯಾಗದಲಿ
ವಿಜನ ವನದ ಹತ ಪ್ರತೀಕ್ಷೆಯನ್ನೇ ಅನುಕರಿಸುವ ಆಕಾರದಲಿ

ಎತ್ತಿರಿಸದೆ ಅಗೊ ನಿಂತಿದೆ ಕಾದು, ಸಹಸ್ರರಶ್ಮಿಯ ವರಕಾಗಿ
ಬಂಗಾರಕು ನೀಲಿಗು ಆಗಿ
ಸಾಗರ ಗೀತದ ಮಂಥರ ಸುಂದರ ಮಂಗಲಮಯ ಧ್ರುವಪದಗಾನ
ಸುಖಸಂಚಲ ತಾನವಿತಾನ
ಗಭೀರ ತಲದಲಿ ಮಾನವನಾತ್ಮದಿ ದಿವ್ಯಪ್ರಭವಿಸ್ಫೋಟನಕೆ
ಅಂತರ್ಗತ ಉದ್ಘಾಟನಕೆ
ಸ್ವಪ್ರತಿಬಿಂಬವ ಮೂಡಿಸಿದಾಗ ಹಿಗ್ಗಾದೊಲು ದೇವನ ಮನಕೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...