ಅಗ್ನಾಯಿ

ಅಗ್ನಾಯಿ ! ಇನ್ನು ಆಲಿಂಗಿಸೆನ್ನ
ಓ ಜಾತವೇದಜಾಯೆ
ಗಂಧ-ಪಕಳೆಗಳು ಎಂದೊ ಉರುಳಿದವು
ಕೊಂಬೆ ಕಾಮಮಾಯೆ
ತೆಕ್ಕೆಯಲ್ಲಿ ಮುತ್ತೆನ್ನ ಜೀವನವ
ಜ್ಯೋತಿಲಲಿತೆ ನಲ್ಲೆ !
ಬಯಕೆ ಸುಟ್ಟೆ ಆ ದುಗುಡ ಬಿಟ್ಟೆ ಹಿ-
ಗ್ಗನ್ನು ತಾಳಬಲ್ಲೆ
ಮೋದಮೂರ್ತಿ ! ಪುಲಕಿಸುತ ಬಾರ ಆ-
ನಂದದೇಕ ಪ್ರತಿಮೆ
ಮೊಗದ ಬೆಡಗಿನಲಿ ನಾಟಿ ಹೀರುವೆನು
ಮುತ್ತಿನೊಂದೆ ಮಹಿಮೆ
ದಿವ್ಯಧ್ವನಿಯೆ ಹೃದಯದಲೆ ನುಡಿಸು ಆ-
ನಂದದೇಕ ತೂರ್ಯ
ಮುದ್ರೆ ಹಾಕು ತವ ತೇಜ ನೆಲಿಸು ಓ
ಪ್ರಾಣಪೂರ್ಣ ಸೂರ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಯಕೆ
Next post ವಾಗ್ದೇವಿ – ೫೨

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys