Home / ಕವನ / ಕವಿತೆ / ಪ್ರಾಣಾಂಗನೆ

ಪ್ರಾಣಾಂಗನೆ

ಆನಂದ ತನುಜೆ, ಅನುಭೂತಿಯನುಜೆ, ಅದ್ಭುತ ಪವಾಡದಂತೆ
ಓ ಜಾತಿವಂತೆ ನನ್ನಿದಿರು ಧ್ಯಾನದಲಿ ಮಗ್ನಳಾಗಿ ನಿಂತೆ
ದಿಗ್ದಂತಿದಂತ ಚಾಚಿರುವನಂತದಾಚೆಯಲಿ ನಿನ್ನ ಚೂಚು
ಏನು ಹಾರಿಕೆಯ ದೌಡು ಇಡುವೆ ಆ ಚಿರಂತನದ ಕೂಚು.

ಗಗನ ಶಿಖರಕೇರುತ್ತ ನಡೆದೆ ಹೇ ಗಗನ ದೇಹ ಪಡೆದೆ
ಖೇದ ಮೋದಗಳನೆರಡು ತೋಳಿನಲಿ ತೂಗಿ ತೂಗಿ ಹಿಡಿದೆ
ಇಗೊ ಇತ್ತ ಮೃತ್ಯು ಅಗೊ ಅತ್ತ ಅಮೃತ ಎರಡಕ್ಕು ನಡುವೆ ಇರುವೆ
ನೋವು ಸಾವುಗಳ ಕವಳ ಮಾಡಿ ಹಿಗ್ಹಿಗ್ಗಿ ಬಾಯಿದೆರೆವೆ.

ಘನನಿಬಿಡವಾಗಿ ಆಲಿಂಗಿಸೆನ್ನ ತುಸು ಕೂಡ ತೆರವು ಬೇಡ
ಬಾನಗಲ ನಿನ್ನ ಎದೆ ಹರವುಗೊಳಿಸಿ ಹೃದಯವನೆ ತುತ್ತು ಮಾಡ
ಓ ಭೀಮಕಾಯ ನಿರ್ಮಾಯ ಮುಖವೆ ಹಿಂಜರಿವುದೇಕೆ ಇನ್ನು ?
ಮೂರ್ಚ್ಛೆಮುಸುಕು ತೆರೆದೆರಗಿ ಬಾರ ಕ್ರೀಡೆಯಲ್ಲಿ ಇದುವೆ ಚೆನ್ನು.

ತೊಟ್ಟು ಕೂಡ ಬಿಡದಂತೆ ಸವರಿ ಹಿಗ್ಗನ್ನು ಹುಡುಕಿ ಕುಡಿವೆ
ಕಚ್ಚು ಚುಚ್ಚು ಎದೆ ಹೊಚ್ಚು ಬಿಚ್ಚು; ಮೆಚ್ಚಿದ್ದ ಮಾಡಿ ಬಿಡುವೆ
ನರಸಿಂಹನಂತೆ ಬಸಿರನ್ನೆ ಹೊಕ್ಕು ಕರುಳುಗಳ ಮಾಲೆ ಸೂಡಿ
ಮಧುಮಾಸ ಮತ್ತಮಧುಕರನ ಹಾಗೆ ರಸ ಸರಸ ವಿರಸಮಾಡಿ

ಏನು ತಾನು ಮಾಡಿದರು ನಾನು ದಾನವನ ಹಾಗೆ ಹೀರಿ
ಅಭಿಮಾನಿ ದೈವ ಬರುವೊಲು ಸದೈವ ಆನಂದ ಮೇರೆ ಮೀರಿ
ಮಾನವನ ಮೈಯೆ ಯಾತಕ್ಕು ಸೈಯೆ, ನಾನಿರುವೆ ಪ್ರೇಮದಂತೆ
ಶಿವ-ರತಿಯ ತಕ್ಕೆಯಲಿ ನಲಿನ ಉಲಿವ ಚಿರಬಾಲ ಕಾಮನಂತೆ.

ನಾ ಬೇಡಲೇನು ನೀ ಕೊಡುವದೇನು ? ವ್ಯಾಪಾರ ಸಾಕು ಬಲ್ಲೆ
ಆ ದೈವದತ್ತ ಈ ಮೊಗದ ಮುತ್ತ ಸುತ್ತುತ್ತಲಿರುವೆ ಇಲ್ಲೆ
ಅರಸಾದರೇನು ಆಳಾದರೇನು ಆನಂದ ಭೋಗದಲ್ಲಿ
ಬಾಳಾದರೇನು ಹಾಳಾದರೇನು ಈ ಪೂರ್ಣಯೋಗದಲ್ಲಿ.

ಅಧಃಪಾತದಲಿ ನೆರೆದು ಬರುವೆ ಗಂಗಾವತಾರದಂತೆ
ಜೀರ್ಣವಸ್ತ್ರದಲಿ ಮಿಂಚಿ ತೆರೆವೆ ಸುರ ಸುಮನ ಹಾರದಂತೆ
ಮೂರ್ತ ಮೃತ್ಯುಮುಖರಂಗದಲ್ಲಿ ನರ್ತಿಸುವೆ ಅಮರನಂತೆ
ತೊತ್ತುಳಿದರೂನು ಥಥ್ಥಳಿಸಿ ಹೊಳೆವೆ ಸಂಜೀವ ಭ್ರಮರನಂತೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...