ನಿರ್ವಸ್ತುಭಾವ

ಅಧಃಪತಿತ ನಿಃಸೀಮ ಆತ್ಮದೆಚ್ಚತ್ತ ಶಕ್ತಿ ಒಂದು
ಇಲ್ಲತನದ ಕೊನೆ-ಮೊದಲುಗಳಲಿ ಅರೆಅರವು ಮರವುಗೊಂಡು
ಇದು ಬಿಡಿಸಬರದ ಕಗ್ಗಂಟು ಕೂಟ ಜನ್ಮದ ರಹಸ್ಯವೆಂದು
ಅತಿಸಾವಕಾಶಗತಿಯಲ್ಲಿ ನಡೆದ ಮೃತರೀತಿ ಮನಕೆ ತಂದು

ತಾನು ಬಂದ ಘನ ಅಂಧಗರ್ಭವಾಸವನೆ ಮರಳಿ ನೆನಿಸಿ
ಇಲ್ಲವೆಯ ಬಯಲ ಬಯಸಿತ್ತು ಅದುವೆ ಆಲಯವು ಲಯಕೆ ಎನಿಸಿ.
ಅಜ್ಞಾತದೊಂದು ಹೋಲಿಕೆಯನುಳ್ಳ ಮುಕ್ಕಾದ ಮೂಕಮುಖವು
ಮರವೆ ತುಂಬಿರುವ ಮಾಟಗಳನೆ ಮರಮರಳಿ ಮಾಡುತಿತ್ತು.

ಕುರುಡು ಕಲ್ಪವನೆ ಬರಡುಹಾದಿಯಲಿ ಎತ್ತೊ ದೂಡುತಿತ್ತು
ಪ್ರತಿಪದಾರ್ಥಗಳ ಉಗಮ ಅಡಗಿದೊಲು ತಮದ ಆಳದಲ್ಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಯ ಬಂಧಿಸಿದ ಬಸವ
Next post ಸುಭದ್ರೆ – ೬

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…