ಸಾವಿತ್ರಿ

(ಕೆಲವು ಸಾಲುಗಳು)

ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು.
ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು.
ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ
ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ
ಕಾಲಪಥಿಕನಾ ಕಿವಿಗೆ ಮುಟ್ಟಿತಾ ಕರೆಯು, ಕೇಳಿ ಸೊಲ್ಲ
ಒಂಟಿಯಾಗಿ ಏಕಾಂತಿಯಾಗಿ ಅದರಾಳವವನೆ ಬಲ್ಲ.
ಹೊರಟ ಯಾತ್ರಿ ದಿಕ್ತಟದ ಶಕ್ತಿಯಲಿ ಮೂಕಮುಗ್ಧನಾಗಿ.
* * *

ಕಾಲ-ಜನಿತ ಮಾನವರ ಈ ಜ್ಞಾನ ಇತ್ತು ಮೊದಲು ಅವಗೆ
ಬೆಳಕು-ಮನದ ತೆರೆ ಸರಿದು ಹಿಂದೆ ಅವ ಹೊಕ್ಕನಾಗ ಒಳಗೆ.
ನಮ್ಮ ಬಗೆಗೆ ಕೇವಲದ ಕಣ್ಗೆಮರೆಯಾಗಿ ಮುಸುಕ ನಡುವೆ
ಗೂಢಗವಿಯ ಅವ ಕಂಡ, ಮತ್ತೆ ಮುಂದಾ ರಹಸ್ಯದ್ವಾರ
ಆತ್ಮನೊಳಗಿನಾ ದೃಷ್ಟಿ ದಾನದಾ ಬಾವಿ ಅದರ ಬಳಿಗೆ
ಅಲ್ಲಿ ಇತ್ತು ಶ್ರೀವಿಜಯಪಕ್ಷಿ ಕಾವ್ಗೊಡುತ ಧ್ಯಾನಲೀನ
ಇಲ್ಲ ಬೆಳಕೆ ಆಕಾಶ ಸರ್ವಸರ್ವತ್ರ ಜ್ಞಾನತಾನ.
ಪ್ರಾಣಸ್ಪಂದನವು ನಿಂತುಬಿಟ್ಟರೂ ಸಾವು ದುಮುಕ ಸಲ್ಲ.
ಉಸಿರು ಹಿಂಗಿಯೂ ಬಗೆಯು ಇಂಗಿಯೂ ಆತ ಬದುಕಬಲ್ಲ.
* * *

ದೇವರೆಚ್ಚರಿವ ಉದಯರಾಗ ಬ್ರಾಹ್ಮೀಮುಹೂರ್ತದಲ್ಲಿ
ದಿವ್ಯಘಟನೆ ಘಟಿಸುವದು ಇತ್ತು ಆ ದೇವಯಾನದಲ್ಲಿ
ತನ್ನ ಶಾಶ್ವತಿಯ ಗರ್ಭಗುಡಿಯ ನಿರ್ದೀಪ್ತ ಐಕ್ಯವಲ್ಲಿ
ಮೌನದಂಚಿನಲಿ ಮೈಯು ಚಾಚಿ ಮಲಗಿತ್ತು ಮಿಸುಕದಾಗಿ.
ನಿಶೆಯ ಮಹಮನವು ಏನೊ ಮುಂಗಂಡು ಸ್ವಯಂ ಲೀನವಾಗಿ.
ಅನಿರ್ಭೇದ್ಯವಿದು ಇದು ಅಪಾರ ಎನಿಸುವದಗಾಧ ಚಿಂತೆ
ಆ ಅಮೂರ್ತ ಆನಂತ್ಯದಾಳ ಪಾತಾಳಖಾತ ಬಂತೇ
ಕಣ್ಣು ಮುಚ್ಚಿದಾ ಧ್ಯಾನಗಮ್ಯ ಸಂಕೇತ ಚಿತ್ರದಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಳಿದು ಕಾಳೆಗದ ಕಣ!
Next post ಸುಭದ್ರೆ – ೭

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys