Home / ಕವನ / ಕವಿತೆ / ಸಾವಿತ್ರಿ

ಸಾವಿತ್ರಿ

(ಕೆಲವು ಸಾಲುಗಳು)

ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು.
ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು.
ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ
ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ
ಕಾಲಪಥಿಕನಾ ಕಿವಿಗೆ ಮುಟ್ಟಿತಾ ಕರೆಯು, ಕೇಳಿ ಸೊಲ್ಲ
ಒಂಟಿಯಾಗಿ ಏಕಾಂತಿಯಾಗಿ ಅದರಾಳವವನೆ ಬಲ್ಲ.
ಹೊರಟ ಯಾತ್ರಿ ದಿಕ್ತಟದ ಶಕ್ತಿಯಲಿ ಮೂಕಮುಗ್ಧನಾಗಿ.
* * *

ಕಾಲ-ಜನಿತ ಮಾನವರ ಈ ಜ್ಞಾನ ಇತ್ತು ಮೊದಲು ಅವಗೆ
ಬೆಳಕು-ಮನದ ತೆರೆ ಸರಿದು ಹಿಂದೆ ಅವ ಹೊಕ್ಕನಾಗ ಒಳಗೆ.
ನಮ್ಮ ಬಗೆಗೆ ಕೇವಲದ ಕಣ್ಗೆಮರೆಯಾಗಿ ಮುಸುಕ ನಡುವೆ
ಗೂಢಗವಿಯ ಅವ ಕಂಡ, ಮತ್ತೆ ಮುಂದಾ ರಹಸ್ಯದ್ವಾರ
ಆತ್ಮನೊಳಗಿನಾ ದೃಷ್ಟಿ ದಾನದಾ ಬಾವಿ ಅದರ ಬಳಿಗೆ
ಅಲ್ಲಿ ಇತ್ತು ಶ್ರೀವಿಜಯಪಕ್ಷಿ ಕಾವ್ಗೊಡುತ ಧ್ಯಾನಲೀನ
ಇಲ್ಲ ಬೆಳಕೆ ಆಕಾಶ ಸರ್ವಸರ್ವತ್ರ ಜ್ಞಾನತಾನ.
ಪ್ರಾಣಸ್ಪಂದನವು ನಿಂತುಬಿಟ್ಟರೂ ಸಾವು ದುಮುಕ ಸಲ್ಲ.
ಉಸಿರು ಹಿಂಗಿಯೂ ಬಗೆಯು ಇಂಗಿಯೂ ಆತ ಬದುಕಬಲ್ಲ.
* * *

ದೇವರೆಚ್ಚರಿವ ಉದಯರಾಗ ಬ್ರಾಹ್ಮೀಮುಹೂರ್ತದಲ್ಲಿ
ದಿವ್ಯಘಟನೆ ಘಟಿಸುವದು ಇತ್ತು ಆ ದೇವಯಾನದಲ್ಲಿ
ತನ್ನ ಶಾಶ್ವತಿಯ ಗರ್ಭಗುಡಿಯ ನಿರ್ದೀಪ್ತ ಐಕ್ಯವಲ್ಲಿ
ಮೌನದಂಚಿನಲಿ ಮೈಯು ಚಾಚಿ ಮಲಗಿತ್ತು ಮಿಸುಕದಾಗಿ.
ನಿಶೆಯ ಮಹಮನವು ಏನೊ ಮುಂಗಂಡು ಸ್ವಯಂ ಲೀನವಾಗಿ.
ಅನಿರ್ಭೇದ್ಯವಿದು ಇದು ಅಪಾರ ಎನಿಸುವದಗಾಧ ಚಿಂತೆ
ಆ ಅಮೂರ್ತ ಆನಂತ್ಯದಾಳ ಪಾತಾಳಖಾತ ಬಂತೇ
ಕಣ್ಣು ಮುಚ್ಚಿದಾ ಧ್ಯಾನಗಮ್ಯ ಸಂಕೇತ ಚಿತ್ರದಂತೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...