Home / ಕವನ / ಕವಿತೆ / ಸಾವಿತ್ರಿ

ಸಾವಿತ್ರಿ

(ಕೆಲವು ಸಾಲುಗಳು)

ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು.
ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು.
ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ
ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ
ಕಾಲಪಥಿಕನಾ ಕಿವಿಗೆ ಮುಟ್ಟಿತಾ ಕರೆಯು, ಕೇಳಿ ಸೊಲ್ಲ
ಒಂಟಿಯಾಗಿ ಏಕಾಂತಿಯಾಗಿ ಅದರಾಳವವನೆ ಬಲ್ಲ.
ಹೊರಟ ಯಾತ್ರಿ ದಿಕ್ತಟದ ಶಕ್ತಿಯಲಿ ಮೂಕಮುಗ್ಧನಾಗಿ.
* * *

ಕಾಲ-ಜನಿತ ಮಾನವರ ಈ ಜ್ಞಾನ ಇತ್ತು ಮೊದಲು ಅವಗೆ
ಬೆಳಕು-ಮನದ ತೆರೆ ಸರಿದು ಹಿಂದೆ ಅವ ಹೊಕ್ಕನಾಗ ಒಳಗೆ.
ನಮ್ಮ ಬಗೆಗೆ ಕೇವಲದ ಕಣ್ಗೆಮರೆಯಾಗಿ ಮುಸುಕ ನಡುವೆ
ಗೂಢಗವಿಯ ಅವ ಕಂಡ, ಮತ್ತೆ ಮುಂದಾ ರಹಸ್ಯದ್ವಾರ
ಆತ್ಮನೊಳಗಿನಾ ದೃಷ್ಟಿ ದಾನದಾ ಬಾವಿ ಅದರ ಬಳಿಗೆ
ಅಲ್ಲಿ ಇತ್ತು ಶ್ರೀವಿಜಯಪಕ್ಷಿ ಕಾವ್ಗೊಡುತ ಧ್ಯಾನಲೀನ
ಇಲ್ಲ ಬೆಳಕೆ ಆಕಾಶ ಸರ್ವಸರ್ವತ್ರ ಜ್ಞಾನತಾನ.
ಪ್ರಾಣಸ್ಪಂದನವು ನಿಂತುಬಿಟ್ಟರೂ ಸಾವು ದುಮುಕ ಸಲ್ಲ.
ಉಸಿರು ಹಿಂಗಿಯೂ ಬಗೆಯು ಇಂಗಿಯೂ ಆತ ಬದುಕಬಲ್ಲ.
* * *

ದೇವರೆಚ್ಚರಿವ ಉದಯರಾಗ ಬ್ರಾಹ್ಮೀಮುಹೂರ್ತದಲ್ಲಿ
ದಿವ್ಯಘಟನೆ ಘಟಿಸುವದು ಇತ್ತು ಆ ದೇವಯಾನದಲ್ಲಿ
ತನ್ನ ಶಾಶ್ವತಿಯ ಗರ್ಭಗುಡಿಯ ನಿರ್ದೀಪ್ತ ಐಕ್ಯವಲ್ಲಿ
ಮೌನದಂಚಿನಲಿ ಮೈಯು ಚಾಚಿ ಮಲಗಿತ್ತು ಮಿಸುಕದಾಗಿ.
ನಿಶೆಯ ಮಹಮನವು ಏನೊ ಮುಂಗಂಡು ಸ್ವಯಂ ಲೀನವಾಗಿ.
ಅನಿರ್ಭೇದ್ಯವಿದು ಇದು ಅಪಾರ ಎನಿಸುವದಗಾಧ ಚಿಂತೆ
ಆ ಅಮೂರ್ತ ಆನಂತ್ಯದಾಳ ಪಾತಾಳಖಾತ ಬಂತೇ
ಕಣ್ಣು ಮುಚ್ಚಿದಾ ಧ್ಯಾನಗಮ್ಯ ಸಂಕೇತ ಚಿತ್ರದಂತೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...