Home / ಕವನ / ಕವಿತೆ / ಸಾವಿತ್ರಿ

ಸಾವಿತ್ರಿ

(ಕೆಲವು ಸಾಲುಗಳು)

ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು.
ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು.
ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ
ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ
ಕಾಲಪಥಿಕನಾ ಕಿವಿಗೆ ಮುಟ್ಟಿತಾ ಕರೆಯು, ಕೇಳಿ ಸೊಲ್ಲ
ಒಂಟಿಯಾಗಿ ಏಕಾಂತಿಯಾಗಿ ಅದರಾಳವವನೆ ಬಲ್ಲ.
ಹೊರಟ ಯಾತ್ರಿ ದಿಕ್ತಟದ ಶಕ್ತಿಯಲಿ ಮೂಕಮುಗ್ಧನಾಗಿ.
* * *

ಕಾಲ-ಜನಿತ ಮಾನವರ ಈ ಜ್ಞಾನ ಇತ್ತು ಮೊದಲು ಅವಗೆ
ಬೆಳಕು-ಮನದ ತೆರೆ ಸರಿದು ಹಿಂದೆ ಅವ ಹೊಕ್ಕನಾಗ ಒಳಗೆ.
ನಮ್ಮ ಬಗೆಗೆ ಕೇವಲದ ಕಣ್ಗೆಮರೆಯಾಗಿ ಮುಸುಕ ನಡುವೆ
ಗೂಢಗವಿಯ ಅವ ಕಂಡ, ಮತ್ತೆ ಮುಂದಾ ರಹಸ್ಯದ್ವಾರ
ಆತ್ಮನೊಳಗಿನಾ ದೃಷ್ಟಿ ದಾನದಾ ಬಾವಿ ಅದರ ಬಳಿಗೆ
ಅಲ್ಲಿ ಇತ್ತು ಶ್ರೀವಿಜಯಪಕ್ಷಿ ಕಾವ್ಗೊಡುತ ಧ್ಯಾನಲೀನ
ಇಲ್ಲ ಬೆಳಕೆ ಆಕಾಶ ಸರ್ವಸರ್ವತ್ರ ಜ್ಞಾನತಾನ.
ಪ್ರಾಣಸ್ಪಂದನವು ನಿಂತುಬಿಟ್ಟರೂ ಸಾವು ದುಮುಕ ಸಲ್ಲ.
ಉಸಿರು ಹಿಂಗಿಯೂ ಬಗೆಯು ಇಂಗಿಯೂ ಆತ ಬದುಕಬಲ್ಲ.
* * *

ದೇವರೆಚ್ಚರಿವ ಉದಯರಾಗ ಬ್ರಾಹ್ಮೀಮುಹೂರ್ತದಲ್ಲಿ
ದಿವ್ಯಘಟನೆ ಘಟಿಸುವದು ಇತ್ತು ಆ ದೇವಯಾನದಲ್ಲಿ
ತನ್ನ ಶಾಶ್ವತಿಯ ಗರ್ಭಗುಡಿಯ ನಿರ್ದೀಪ್ತ ಐಕ್ಯವಲ್ಲಿ
ಮೌನದಂಚಿನಲಿ ಮೈಯು ಚಾಚಿ ಮಲಗಿತ್ತು ಮಿಸುಕದಾಗಿ.
ನಿಶೆಯ ಮಹಮನವು ಏನೊ ಮುಂಗಂಡು ಸ್ವಯಂ ಲೀನವಾಗಿ.
ಅನಿರ್ಭೇದ್ಯವಿದು ಇದು ಅಪಾರ ಎನಿಸುವದಗಾಧ ಚಿಂತೆ
ಆ ಅಮೂರ್ತ ಆನಂತ್ಯದಾಳ ಪಾತಾಳಖಾತ ಬಂತೇ
ಕಣ್ಣು ಮುಚ್ಚಿದಾ ಧ್ಯಾನಗಮ್ಯ ಸಂಕೇತ ಚಿತ್ರದಂತೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...