Home / ಕವನ / ಕವಿತೆ / ಸಾವಿತ್ರಿ

ಸಾವಿತ್ರಿ

(ಕೆಲವು ಸಾಲುಗಳು)

ಕಾಂಬನೊಬ್ಬ ಒಳಗಿಹನು ಬಲ್ಲನೋರಣದ ಹಂಚು-ಸಂಚು.
ಅದು ಕಾಣದಣ್ಣ ಕಾಲಲ್ಲೆ ಇದು ಅಡಿಗಡಿಗು ಅದರ ಅಂಚು.
ಊದಿ ಉಸಿರನುಬ್ಬಿಸುವನೆಮ್ಮ ಕಣ್ಣಾಚೆ ಶಿಖರಗಳಿಗೆ
ಹುಟ್ಟು-ಬಾಳುಗಳ ದರಿಗೆ ನೂಗಿದೊಲು ಹಿಂದೆ ಒಮ್ಮೆ ನಮಗೆ
ಕಾಲಪಥಿಕನಾ ಕಿವಿಗೆ ಮುಟ್ಟಿತಾ ಕರೆಯು, ಕೇಳಿ ಸೊಲ್ಲ
ಒಂಟಿಯಾಗಿ ಏಕಾಂತಿಯಾಗಿ ಅದರಾಳವವನೆ ಬಲ್ಲ.
ಹೊರಟ ಯಾತ್ರಿ ದಿಕ್ತಟದ ಶಕ್ತಿಯಲಿ ಮೂಕಮುಗ್ಧನಾಗಿ.
* * *

ಕಾಲ-ಜನಿತ ಮಾನವರ ಈ ಜ್ಞಾನ ಇತ್ತು ಮೊದಲು ಅವಗೆ
ಬೆಳಕು-ಮನದ ತೆರೆ ಸರಿದು ಹಿಂದೆ ಅವ ಹೊಕ್ಕನಾಗ ಒಳಗೆ.
ನಮ್ಮ ಬಗೆಗೆ ಕೇವಲದ ಕಣ್ಗೆಮರೆಯಾಗಿ ಮುಸುಕ ನಡುವೆ
ಗೂಢಗವಿಯ ಅವ ಕಂಡ, ಮತ್ತೆ ಮುಂದಾ ರಹಸ್ಯದ್ವಾರ
ಆತ್ಮನೊಳಗಿನಾ ದೃಷ್ಟಿ ದಾನದಾ ಬಾವಿ ಅದರ ಬಳಿಗೆ
ಅಲ್ಲಿ ಇತ್ತು ಶ್ರೀವಿಜಯಪಕ್ಷಿ ಕಾವ್ಗೊಡುತ ಧ್ಯಾನಲೀನ
ಇಲ್ಲ ಬೆಳಕೆ ಆಕಾಶ ಸರ್ವಸರ್ವತ್ರ ಜ್ಞಾನತಾನ.
ಪ್ರಾಣಸ್ಪಂದನವು ನಿಂತುಬಿಟ್ಟರೂ ಸಾವು ದುಮುಕ ಸಲ್ಲ.
ಉಸಿರು ಹಿಂಗಿಯೂ ಬಗೆಯು ಇಂಗಿಯೂ ಆತ ಬದುಕಬಲ್ಲ.
* * *

ದೇವರೆಚ್ಚರಿವ ಉದಯರಾಗ ಬ್ರಾಹ್ಮೀಮುಹೂರ್ತದಲ್ಲಿ
ದಿವ್ಯಘಟನೆ ಘಟಿಸುವದು ಇತ್ತು ಆ ದೇವಯಾನದಲ್ಲಿ
ತನ್ನ ಶಾಶ್ವತಿಯ ಗರ್ಭಗುಡಿಯ ನಿರ್ದೀಪ್ತ ಐಕ್ಯವಲ್ಲಿ
ಮೌನದಂಚಿನಲಿ ಮೈಯು ಚಾಚಿ ಮಲಗಿತ್ತು ಮಿಸುಕದಾಗಿ.
ನಿಶೆಯ ಮಹಮನವು ಏನೊ ಮುಂಗಂಡು ಸ್ವಯಂ ಲೀನವಾಗಿ.
ಅನಿರ್ಭೇದ್ಯವಿದು ಇದು ಅಪಾರ ಎನಿಸುವದಗಾಧ ಚಿಂತೆ
ಆ ಅಮೂರ್ತ ಆನಂತ್ಯದಾಳ ಪಾತಾಳಖಾತ ಬಂತೇ
ಕಣ್ಣು ಮುಚ್ಚಿದಾ ಧ್ಯಾನಗಮ್ಯ ಸಂಕೇತ ಚಿತ್ರದಂತೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...