Home / ಕವನ / ಕವಿತೆ / ಆರೋಹ

ಆರೋಹ

೧ ಮೌನ

ಮೌನಾ, ಮೌನಾ, ಮೌನಾ ಮೌನ-ವಿಮಾನಾರೂಢಾ
ಅಮೃತಾತ್ಮಾ, ತರ! ಉತ್ತರ! ಭೋ ಉಧ್ವ್ರೋಧ್ವ್ರೋ, ಭೋ
ಈ ಮಾಯಾಮಂಡಲ ಮುರಿಯೋ, ದಾಟೈ ಆ ತಿರ್ರನ ಚಕ್ರ
ಏರೈ, ಏಕಾ, ಏಕೈಕಾ ಮರಣೋತ್ತೀರ್ಣಾ
ಫೂಃ! ಪಿಸುಪಿಸು ಮಾತೋ ಮಾತು, ಇರುಳಿರುಳಿನ ಭುಂಭೋದ್ಗಾರಾ
ಕರೆ, ಕರೆನರೆ ಕಿರಿಕಿರಿ ಲೋಕಾ
ಬಿಡು ಶೋಕಾ, ಉಳಿದೊದ್ದಾಟಾ
ಚಿರಮೌನದಿ ಹೊಗು ಹೊಗು ಏಗೂ ಮೇಗೂ.
ವಿಶಾಲಾ, ಅಚಲಾ, ಅಕ್ಷರಾ, ಅರೂಪಾ, ಅದ್ಭುತಭೂತಾ
ಸ್ವರ್ಗೋಪರಿ ಸ್ವರ್ಗಾ, ಅಗಲಾ ಬ್ರಹ್ಮಾಂಡಕು ಮಿಗಿಲಾ,
ಶುದ್ಧಾ, ವಿಶುದ್ಧಾ, ಸತ್ತ್ವಾ ಮಹಿಮಾಮಗ್ನ
ಸ್ವಾನ್ವೀಕ್ಷಕ ಸೋಜ್ವಲ ಸ್ತಿಮಿತಾ
ಅಸೀಮಾ, ನಿರೋದ್ಗಾರಾ, ಸಾಕ್ಷಾತ್ ಸಂವಾದನಶೀಲಾ
ಮಾಡೈ ವಿಚಾರಾತೀತಜ್ಞಾನಾ, ಪಡೆ ಅಕ್ಷೋಭ್ಯಗಭೀರಾಮೋದಾ
ಅವಿಕಾರಿತ ಜ್ಯೋತಿಯೊಳಿರು ವಿಶ್ರಾಂತಾ, ಮೂಕಾ,
ನಿಶ್ಯಬ್ದಿತಸಾಕ್ಷಾತ್ಕಾರಾ
ನಿನ್ನನ್ನೇ ಮೀರೈ ಆತ್ಮಾ, ಪ್ರಕೃತ್ಯೋತ್ತರಪುರುಷಾ
ಓ ಸಾಕ್ಷೀ, ಕಳೆದುಳಿ ಉಳಿ ಕಂಡದ್ದೆಲ್ಲಾ
ಕಾಣೈ, ಕೇವಲಾ, ಬ್ರಹ್ಮಾ, ಶಾಶ್ವತಾ
ಸನಾತನ ಮಾತ್ರಾ, ಶಾಂತಾ, ಮೌನೋನ್ಮೌನ
ಓ ಲೋಕೋತ್ತಮ ನಾಮಾತೀತಾ, ಏಕಾ
ಭೌಮಾಮೃತ ಆತ್ಮಾ.

೨ ಮೌನಾತೀತ

ಉನ್ಮಜ್ಜೋನ್ಮಜ್ಜ, ಹೇ ಮೌನನಿಮಗ್ನಾ,
ಅವರ್ಣ್ಯದ್ರವ್ಯಸ್ವಭಾವಾ,
ಪ್ರಭಾವಾ, ವಿಭಾವಾ, ಸಹಿತಾ
ರೋಹಿಸು ಭೋ ಅಮೃತಾತ್ಮಾ
ಕಾಲಕೆ ಕೊಡು ಚಿರತರ ಅರ್ಥಾ
ಕಾಲಾತೀತಾಲಿಂಗಿತಾ ಭವ ಮಾಧುರ್ಯೊದರ ಪ್ರವಿಷ್ಟಾ
ಶಾಶ್ವತಿಯಲಿ ಬಾಳೈ ಜಾಗೃತಾ, ಅನಂತಪ್ರೇಮೋದ್ಭೂತಾ
ಪೂರ್ಣಾಪೂರ್ಣಾಪೂರ್ಣಾ ಸ್ವಪ್ರಾಪ್ತಾ ಆಪ್ತಾ ಪೂರ್ತಾ
ಪ್ರಿಯಹೃದಯೇ ಸಂಪ್ಲುತಸ್ವರಸಾ
ಇದು ಯಾವುದೊ ಬ್ರಹ್ಮಾತೀತಾ, ಬ್ರಹ್ಮಾಂತರ್ಜಾತಾ, ತ್ರಾತಾ
ಸ್ವರೂಪಾ, ರೂಪಾರೂಪಾರೂಪಾ, ಬಹುರೂಪಾ, ಭೂಪಾ, ಜೇತಾ
ಲೀಲಾವಿಗ್ರಹಾ, ಆಹಾ ಚಿರಸಂತತಿ ಸಂತತಜನಿತಾ
ಪ್ರಕೃತಾ ವಿಕೃತಾ ಕೃತಕಾ ಕೃತಕೃತ್ಯಾ ಧನ್ಯಾಮೂರ್ತಾ
ಸುಂದರಾ, ಸುಬಂಧಾ, ಸುಗಮಾ, ನಿಗಮಾತೀತಾ
ಹೃದಯೇ ಹೃದಯಾಂತಹೃದಯೇ ಲಗ್ನಃ ಪರಮಾತ್ಮೇಮಗ್ನಃ
ಸಾಕ್ಷಿನ್, ದೃಷ್ಟಂ ತ್ಯಜ, ದೃಷ್ಟಂ ತ್ಯಜ
ಭಜ ಸ್ವಾಂತಂ ಏಕಾಂತಂ ಏಕಂ ಬ್ರಹ್ಮಚಿರಂತನಂ
ಆಃ ಲೋಕಾತೀತಾ, ಅನಾಮಾ ಏಕೈಕಾ
ಓ ಮಹದ್ಭೂತಾ, ಅಮೃತಾ!
ಭವಮೌನೀ, ಶಾಂತೋನಂತನಂತಃ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...