Home / ಕವನ / ಕವಿತೆ / ಆರೋಹ

ಆರೋಹ

೧ ಮೌನ

ಮೌನಾ, ಮೌನಾ, ಮೌನಾ ಮೌನ-ವಿಮಾನಾರೂಢಾ
ಅಮೃತಾತ್ಮಾ, ತರ! ಉತ್ತರ! ಭೋ ಉಧ್ವ್ರೋಧ್ವ್ರೋ, ಭೋ
ಈ ಮಾಯಾಮಂಡಲ ಮುರಿಯೋ, ದಾಟೈ ಆ ತಿರ್ರನ ಚಕ್ರ
ಏರೈ, ಏಕಾ, ಏಕೈಕಾ ಮರಣೋತ್ತೀರ್ಣಾ
ಫೂಃ! ಪಿಸುಪಿಸು ಮಾತೋ ಮಾತು, ಇರುಳಿರುಳಿನ ಭುಂಭೋದ್ಗಾರಾ
ಕರೆ, ಕರೆನರೆ ಕಿರಿಕಿರಿ ಲೋಕಾ
ಬಿಡು ಶೋಕಾ, ಉಳಿದೊದ್ದಾಟಾ
ಚಿರಮೌನದಿ ಹೊಗು ಹೊಗು ಏಗೂ ಮೇಗೂ.
ವಿಶಾಲಾ, ಅಚಲಾ, ಅಕ್ಷರಾ, ಅರೂಪಾ, ಅದ್ಭುತಭೂತಾ
ಸ್ವರ್ಗೋಪರಿ ಸ್ವರ್ಗಾ, ಅಗಲಾ ಬ್ರಹ್ಮಾಂಡಕು ಮಿಗಿಲಾ,
ಶುದ್ಧಾ, ವಿಶುದ್ಧಾ, ಸತ್ತ್ವಾ ಮಹಿಮಾಮಗ್ನ
ಸ್ವಾನ್ವೀಕ್ಷಕ ಸೋಜ್ವಲ ಸ್ತಿಮಿತಾ
ಅಸೀಮಾ, ನಿರೋದ್ಗಾರಾ, ಸಾಕ್ಷಾತ್ ಸಂವಾದನಶೀಲಾ
ಮಾಡೈ ವಿಚಾರಾತೀತಜ್ಞಾನಾ, ಪಡೆ ಅಕ್ಷೋಭ್ಯಗಭೀರಾಮೋದಾ
ಅವಿಕಾರಿತ ಜ್ಯೋತಿಯೊಳಿರು ವಿಶ್ರಾಂತಾ, ಮೂಕಾ,
ನಿಶ್ಯಬ್ದಿತಸಾಕ್ಷಾತ್ಕಾರಾ
ನಿನ್ನನ್ನೇ ಮೀರೈ ಆತ್ಮಾ, ಪ್ರಕೃತ್ಯೋತ್ತರಪುರುಷಾ
ಓ ಸಾಕ್ಷೀ, ಕಳೆದುಳಿ ಉಳಿ ಕಂಡದ್ದೆಲ್ಲಾ
ಕಾಣೈ, ಕೇವಲಾ, ಬ್ರಹ್ಮಾ, ಶಾಶ್ವತಾ
ಸನಾತನ ಮಾತ್ರಾ, ಶಾಂತಾ, ಮೌನೋನ್ಮೌನ
ಓ ಲೋಕೋತ್ತಮ ನಾಮಾತೀತಾ, ಏಕಾ
ಭೌಮಾಮೃತ ಆತ್ಮಾ.

೨ ಮೌನಾತೀತ

ಉನ್ಮಜ್ಜೋನ್ಮಜ್ಜ, ಹೇ ಮೌನನಿಮಗ್ನಾ,
ಅವರ್ಣ್ಯದ್ರವ್ಯಸ್ವಭಾವಾ,
ಪ್ರಭಾವಾ, ವಿಭಾವಾ, ಸಹಿತಾ
ರೋಹಿಸು ಭೋ ಅಮೃತಾತ್ಮಾ
ಕಾಲಕೆ ಕೊಡು ಚಿರತರ ಅರ್ಥಾ
ಕಾಲಾತೀತಾಲಿಂಗಿತಾ ಭವ ಮಾಧುರ್ಯೊದರ ಪ್ರವಿಷ್ಟಾ
ಶಾಶ್ವತಿಯಲಿ ಬಾಳೈ ಜಾಗೃತಾ, ಅನಂತಪ್ರೇಮೋದ್ಭೂತಾ
ಪೂರ್ಣಾಪೂರ್ಣಾಪೂರ್ಣಾ ಸ್ವಪ್ರಾಪ್ತಾ ಆಪ್ತಾ ಪೂರ್ತಾ
ಪ್ರಿಯಹೃದಯೇ ಸಂಪ್ಲುತಸ್ವರಸಾ
ಇದು ಯಾವುದೊ ಬ್ರಹ್ಮಾತೀತಾ, ಬ್ರಹ್ಮಾಂತರ್ಜಾತಾ, ತ್ರಾತಾ
ಸ್ವರೂಪಾ, ರೂಪಾರೂಪಾರೂಪಾ, ಬಹುರೂಪಾ, ಭೂಪಾ, ಜೇತಾ
ಲೀಲಾವಿಗ್ರಹಾ, ಆಹಾ ಚಿರಸಂತತಿ ಸಂತತಜನಿತಾ
ಪ್ರಕೃತಾ ವಿಕೃತಾ ಕೃತಕಾ ಕೃತಕೃತ್ಯಾ ಧನ್ಯಾಮೂರ್ತಾ
ಸುಂದರಾ, ಸುಬಂಧಾ, ಸುಗಮಾ, ನಿಗಮಾತೀತಾ
ಹೃದಯೇ ಹೃದಯಾಂತಹೃದಯೇ ಲಗ್ನಃ ಪರಮಾತ್ಮೇಮಗ್ನಃ
ಸಾಕ್ಷಿನ್, ದೃಷ್ಟಂ ತ್ಯಜ, ದೃಷ್ಟಂ ತ್ಯಜ
ಭಜ ಸ್ವಾಂತಂ ಏಕಾಂತಂ ಏಕಂ ಬ್ರಹ್ಮಚಿರಂತನಂ
ಆಃ ಲೋಕಾತೀತಾ, ಅನಾಮಾ ಏಕೈಕಾ
ಓ ಮಹದ್ಭೂತಾ, ಅಮೃತಾ!
ಭವಮೌನೀ, ಶಾಂತೋನಂತನಂತಃ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...