ಪ್ರಾಣದೇವತೆಗಳ ಪರಮಸ್ವರ್ಗ

ಮಧುಮಧುರವಾದ ಹಿರಿಹಗಲು ಒಂದು ಬೆಳಗಿತ್ತು ಅವನ ಸುತ್ತು.
ಹರ್ಷಾವತರಣ ಆನಂತ್ಯದಿಂದ ಪ್ರಭೆ ಬೀರಿದಂತೆ ಇತ್ತು.
ಬಂಗಾರನಗೆಯ ಹೊಂಗಾವಲಲ್ಲಿ ಮೆರೆದಿಹವು ಸುಖದ ಬೀಡು,
ಬಿಡುಗಡೆಯ ಪಡೆದ ಒಳಗಡೆಯ ಎದೆಯ ಹದಹದುಳವುಳ್ಳ ನಾಡು.

ಆದೇವದೇವನಾ ಸೋಮರಸವು ಮೈಗಿಳಿದ ಮತ್ತಿನಲ್ಲಿ
ಎಂದೆಂದು ತನ್ನ ದಿವ್ಯತೆಯಲುಳಿದು ಮುಳುಗಿಹುದು ಬೆಳಕಿನಲ್ಲಿ.
ಎಲ್ಲ ದೇವರಿಗೆ ಮುದ್ದುಬಹದು, ಬಲು ಸಲುಗೆಯಲ್ಲಿ ಬಳೆದು.
ಹಿಗ್ಗಿನೊಂದೆ ಕಾಯಕದೊಳಿಹುದು ಅದು ದೇವನಾಜ್ಞೆ ತಳೆದು.

ತನ್ನ ತಾನೆ ಆಳುವದು ತನ್ನ ಸ್ವಾನಂದದಲ್ಲಿ ಬಾಳಿ
ಅದರ ಬಲದ ಸ್ವಾರಾಜ್ಯಗಳಲಿ ಅರಸೊತ್ತು ತಾನೆ ತಾಳಿ.
ಎಲ್ಲ ರೂಪಗಳು ಯಾವ ಮೋದವನು ನೆಮ್ಮಿ ನೆಚ್ಚಿ ಇಹವು
ಕ್ಷಣ-ಕ್ಷಣಕು ಅಳಿವಂಥ ಕಾಲಕೂ ಬೆಚ್ಚಿಬೆದರದಿಹವು.

ಮುತ್ತಲರಿಯದೆಂದೆಂದು ಅದನ್ನು ಪ್ರತಿಕೂಲ ಸ್ಥಿತಿಯು ಕೂಡ.
ಇಂಥ ಸಹಜ ವಿಶ್ರಾಂತಿಯಲ್ಲಿ ಅದು ವಿಲಸಿಸುವದು ನೋಡ.
ಆ ಮರಣಕೌತಣವ ಕೊಡುವ ಮೈಯ ಕ್ಷಣಭಂಗುರತ್ವವಿಲ್ಲ.
ಅಡಿಗೊಮ್ಮೆ ಎಡವಿ ಭಯದಲ್ಲಿ ಇರುವ ಸಂಕಲ್ಪವಲ್ಲಿ ಸಲ್ಲ.

ಆ ರಾಗಭೋಗದಾವೇಗಗಳನು ಬಿಗಿಹಿಡಿವುದಲ್ಲಿ ಏಕೆ?
ಸಂತೃಪ್ತವಾದ ಸುಖದೊಂದು ತಕ್ಕೆ ಇರೆ ಬೇರೆ ಪುಲಕ ಬೇಕೆ?
ಅಬ್ಬಬ್ಬ ಏನು ಅದ್ಭುತದ ಓಟ, ಕುಡಿಬೆಂಕಿ ನೋಟ, ಕೂಗು
ತನಿಪ್ರಾಣದೂರ್ಮಿ ನಿಗಿನಿಗಿಯೆ ಹರಿವ ನೆತ್ತರಿನ ತುಂಬು ತೇಗು.

ಅದು ಇಹುದು ದೇವನಗೆಯಲ್ಲಿ ಒಗೆದ ನವರತ್ನನಗರದಲ್ಲಿ
ಒರಗಿಹುದು ಎದೆಗೆ ಬೆರಗಾಗಿ ಪ್ರೇಮ ಹರಿದಿರಲು ಆಗಿ ಬಳ್ಳಿ.
ಅದಕಾವ ಬಂಧ? ಸ್ವಚ್ಛಂದದಿಂದ ಆನಂದ ಕೀರ್ತಿಸುವದು;
ಬಿಸಿಲೊಡ್ಡು ಮೈಯ್ಸಿ, ಬೆಳುದಿಂಗಳುಣಿಸಿ, ಜ್ಯೋತಿಯನೆ ಮೂರ್ತಿಸುವದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮಗೆಯು ಹೆಸರೊಂದನು ತರಲಿ!
Next post ಸುಭದ್ರೆ – ೯

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys