Home / ಕವನ / ಕವಿತೆ / ಪ್ರಾಣದೇವತೆಗಳ ಪರಮಸ್ವರ್ಗ

ಪ್ರಾಣದೇವತೆಗಳ ಪರಮಸ್ವರ್ಗ

ಮಧುಮಧುರವಾದ ಹಿರಿಹಗಲು ಒಂದು ಬೆಳಗಿತ್ತು ಅವನ ಸುತ್ತು.
ಹರ್ಷಾವತರಣ ಆನಂತ್ಯದಿಂದ ಪ್ರಭೆ ಬೀರಿದಂತೆ ಇತ್ತು.
ಬಂಗಾರನಗೆಯ ಹೊಂಗಾವಲಲ್ಲಿ ಮೆರೆದಿಹವು ಸುಖದ ಬೀಡು,
ಬಿಡುಗಡೆಯ ಪಡೆದ ಒಳಗಡೆಯ ಎದೆಯ ಹದಹದುಳವುಳ್ಳ ನಾಡು.

ಆದೇವದೇವನಾ ಸೋಮರಸವು ಮೈಗಿಳಿದ ಮತ್ತಿನಲ್ಲಿ
ಎಂದೆಂದು ತನ್ನ ದಿವ್ಯತೆಯಲುಳಿದು ಮುಳುಗಿಹುದು ಬೆಳಕಿನಲ್ಲಿ.
ಎಲ್ಲ ದೇವರಿಗೆ ಮುದ್ದುಬಹದು, ಬಲು ಸಲುಗೆಯಲ್ಲಿ ಬಳೆದು.
ಹಿಗ್ಗಿನೊಂದೆ ಕಾಯಕದೊಳಿಹುದು ಅದು ದೇವನಾಜ್ಞೆ ತಳೆದು.

ತನ್ನ ತಾನೆ ಆಳುವದು ತನ್ನ ಸ್ವಾನಂದದಲ್ಲಿ ಬಾಳಿ
ಅದರ ಬಲದ ಸ್ವಾರಾಜ್ಯಗಳಲಿ ಅರಸೊತ್ತು ತಾನೆ ತಾಳಿ.
ಎಲ್ಲ ರೂಪಗಳು ಯಾವ ಮೋದವನು ನೆಮ್ಮಿ ನೆಚ್ಚಿ ಇಹವು
ಕ್ಷಣ-ಕ್ಷಣಕು ಅಳಿವಂಥ ಕಾಲಕೂ ಬೆಚ್ಚಿಬೆದರದಿಹವು.

ಮುತ್ತಲರಿಯದೆಂದೆಂದು ಅದನ್ನು ಪ್ರತಿಕೂಲ ಸ್ಥಿತಿಯು ಕೂಡ.
ಇಂಥ ಸಹಜ ವಿಶ್ರಾಂತಿಯಲ್ಲಿ ಅದು ವಿಲಸಿಸುವದು ನೋಡ.
ಆ ಮರಣಕೌತಣವ ಕೊಡುವ ಮೈಯ ಕ್ಷಣಭಂಗುರತ್ವವಿಲ್ಲ.
ಅಡಿಗೊಮ್ಮೆ ಎಡವಿ ಭಯದಲ್ಲಿ ಇರುವ ಸಂಕಲ್ಪವಲ್ಲಿ ಸಲ್ಲ.

ಆ ರಾಗಭೋಗದಾವೇಗಗಳನು ಬಿಗಿಹಿಡಿವುದಲ್ಲಿ ಏಕೆ?
ಸಂತೃಪ್ತವಾದ ಸುಖದೊಂದು ತಕ್ಕೆ ಇರೆ ಬೇರೆ ಪುಲಕ ಬೇಕೆ?
ಅಬ್ಬಬ್ಬ ಏನು ಅದ್ಭುತದ ಓಟ, ಕುಡಿಬೆಂಕಿ ನೋಟ, ಕೂಗು
ತನಿಪ್ರಾಣದೂರ್ಮಿ ನಿಗಿನಿಗಿಯೆ ಹರಿವ ನೆತ್ತರಿನ ತುಂಬು ತೇಗು.

ಅದು ಇಹುದು ದೇವನಗೆಯಲ್ಲಿ ಒಗೆದ ನವರತ್ನನಗರದಲ್ಲಿ
ಒರಗಿಹುದು ಎದೆಗೆ ಬೆರಗಾಗಿ ಪ್ರೇಮ ಹರಿದಿರಲು ಆಗಿ ಬಳ್ಳಿ.
ಅದಕಾವ ಬಂಧ? ಸ್ವಚ್ಛಂದದಿಂದ ಆನಂದ ಕೀರ್ತಿಸುವದು;
ಬಿಸಿಲೊಡ್ಡು ಮೈಯ್ಸಿ, ಬೆಳುದಿಂಗಳುಣಿಸಿ, ಜ್ಯೋತಿಯನೆ ಮೂರ್ತಿಸುವದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...