Home / ಕವನ / ಕವಿತೆ / ಪ್ರಾಣದೇವತೆಗಳ ಪರಮಸ್ವರ್ಗ

ಪ್ರಾಣದೇವತೆಗಳ ಪರಮಸ್ವರ್ಗ

ಮಧುಮಧುರವಾದ ಹಿರಿಹಗಲು ಒಂದು ಬೆಳಗಿತ್ತು ಅವನ ಸುತ್ತು.
ಹರ್ಷಾವತರಣ ಆನಂತ್ಯದಿಂದ ಪ್ರಭೆ ಬೀರಿದಂತೆ ಇತ್ತು.
ಬಂಗಾರನಗೆಯ ಹೊಂಗಾವಲಲ್ಲಿ ಮೆರೆದಿಹವು ಸುಖದ ಬೀಡು,
ಬಿಡುಗಡೆಯ ಪಡೆದ ಒಳಗಡೆಯ ಎದೆಯ ಹದಹದುಳವುಳ್ಳ ನಾಡು.

ಆದೇವದೇವನಾ ಸೋಮರಸವು ಮೈಗಿಳಿದ ಮತ್ತಿನಲ್ಲಿ
ಎಂದೆಂದು ತನ್ನ ದಿವ್ಯತೆಯಲುಳಿದು ಮುಳುಗಿಹುದು ಬೆಳಕಿನಲ್ಲಿ.
ಎಲ್ಲ ದೇವರಿಗೆ ಮುದ್ದುಬಹದು, ಬಲು ಸಲುಗೆಯಲ್ಲಿ ಬಳೆದು.
ಹಿಗ್ಗಿನೊಂದೆ ಕಾಯಕದೊಳಿಹುದು ಅದು ದೇವನಾಜ್ಞೆ ತಳೆದು.

ತನ್ನ ತಾನೆ ಆಳುವದು ತನ್ನ ಸ್ವಾನಂದದಲ್ಲಿ ಬಾಳಿ
ಅದರ ಬಲದ ಸ್ವಾರಾಜ್ಯಗಳಲಿ ಅರಸೊತ್ತು ತಾನೆ ತಾಳಿ.
ಎಲ್ಲ ರೂಪಗಳು ಯಾವ ಮೋದವನು ನೆಮ್ಮಿ ನೆಚ್ಚಿ ಇಹವು
ಕ್ಷಣ-ಕ್ಷಣಕು ಅಳಿವಂಥ ಕಾಲಕೂ ಬೆಚ್ಚಿಬೆದರದಿಹವು.

ಮುತ್ತಲರಿಯದೆಂದೆಂದು ಅದನ್ನು ಪ್ರತಿಕೂಲ ಸ್ಥಿತಿಯು ಕೂಡ.
ಇಂಥ ಸಹಜ ವಿಶ್ರಾಂತಿಯಲ್ಲಿ ಅದು ವಿಲಸಿಸುವದು ನೋಡ.
ಆ ಮರಣಕೌತಣವ ಕೊಡುವ ಮೈಯ ಕ್ಷಣಭಂಗುರತ್ವವಿಲ್ಲ.
ಅಡಿಗೊಮ್ಮೆ ಎಡವಿ ಭಯದಲ್ಲಿ ಇರುವ ಸಂಕಲ್ಪವಲ್ಲಿ ಸಲ್ಲ.

ಆ ರಾಗಭೋಗದಾವೇಗಗಳನು ಬಿಗಿಹಿಡಿವುದಲ್ಲಿ ಏಕೆ?
ಸಂತೃಪ್ತವಾದ ಸುಖದೊಂದು ತಕ್ಕೆ ಇರೆ ಬೇರೆ ಪುಲಕ ಬೇಕೆ?
ಅಬ್ಬಬ್ಬ ಏನು ಅದ್ಭುತದ ಓಟ, ಕುಡಿಬೆಂಕಿ ನೋಟ, ಕೂಗು
ತನಿಪ್ರಾಣದೂರ್ಮಿ ನಿಗಿನಿಗಿಯೆ ಹರಿವ ನೆತ್ತರಿನ ತುಂಬು ತೇಗು.

ಅದು ಇಹುದು ದೇವನಗೆಯಲ್ಲಿ ಒಗೆದ ನವರತ್ನನಗರದಲ್ಲಿ
ಒರಗಿಹುದು ಎದೆಗೆ ಬೆರಗಾಗಿ ಪ್ರೇಮ ಹರಿದಿರಲು ಆಗಿ ಬಳ್ಳಿ.
ಅದಕಾವ ಬಂಧ? ಸ್ವಚ್ಛಂದದಿಂದ ಆನಂದ ಕೀರ್ತಿಸುವದು;
ಬಿಸಿಲೊಡ್ಡು ಮೈಯ್ಸಿ, ಬೆಳುದಿಂಗಳುಣಿಸಿ, ಜ್ಯೋತಿಯನೆ ಮೂರ್ತಿಸುವದು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...