ಪ್ರಾಣದೇವತೆಗಳ ಪರಮಸ್ವರ್ಗ

ಮಧುಮಧುರವಾದ ಹಿರಿಹಗಲು ಒಂದು ಬೆಳಗಿತ್ತು ಅವನ ಸುತ್ತು.
ಹರ್ಷಾವತರಣ ಆನಂತ್ಯದಿಂದ ಪ್ರಭೆ ಬೀರಿದಂತೆ ಇತ್ತು.
ಬಂಗಾರನಗೆಯ ಹೊಂಗಾವಲಲ್ಲಿ ಮೆರೆದಿಹವು ಸುಖದ ಬೀಡು,
ಬಿಡುಗಡೆಯ ಪಡೆದ ಒಳಗಡೆಯ ಎದೆಯ ಹದಹದುಳವುಳ್ಳ ನಾಡು.

ಆದೇವದೇವನಾ ಸೋಮರಸವು ಮೈಗಿಳಿದ ಮತ್ತಿನಲ್ಲಿ
ಎಂದೆಂದು ತನ್ನ ದಿವ್ಯತೆಯಲುಳಿದು ಮುಳುಗಿಹುದು ಬೆಳಕಿನಲ್ಲಿ.
ಎಲ್ಲ ದೇವರಿಗೆ ಮುದ್ದುಬಹದು, ಬಲು ಸಲುಗೆಯಲ್ಲಿ ಬಳೆದು.
ಹಿಗ್ಗಿನೊಂದೆ ಕಾಯಕದೊಳಿಹುದು ಅದು ದೇವನಾಜ್ಞೆ ತಳೆದು.

ತನ್ನ ತಾನೆ ಆಳುವದು ತನ್ನ ಸ್ವಾನಂದದಲ್ಲಿ ಬಾಳಿ
ಅದರ ಬಲದ ಸ್ವಾರಾಜ್ಯಗಳಲಿ ಅರಸೊತ್ತು ತಾನೆ ತಾಳಿ.
ಎಲ್ಲ ರೂಪಗಳು ಯಾವ ಮೋದವನು ನೆಮ್ಮಿ ನೆಚ್ಚಿ ಇಹವು
ಕ್ಷಣ-ಕ್ಷಣಕು ಅಳಿವಂಥ ಕಾಲಕೂ ಬೆಚ್ಚಿಬೆದರದಿಹವು.

ಮುತ್ತಲರಿಯದೆಂದೆಂದು ಅದನ್ನು ಪ್ರತಿಕೂಲ ಸ್ಥಿತಿಯು ಕೂಡ.
ಇಂಥ ಸಹಜ ವಿಶ್ರಾಂತಿಯಲ್ಲಿ ಅದು ವಿಲಸಿಸುವದು ನೋಡ.
ಆ ಮರಣಕೌತಣವ ಕೊಡುವ ಮೈಯ ಕ್ಷಣಭಂಗುರತ್ವವಿಲ್ಲ.
ಅಡಿಗೊಮ್ಮೆ ಎಡವಿ ಭಯದಲ್ಲಿ ಇರುವ ಸಂಕಲ್ಪವಲ್ಲಿ ಸಲ್ಲ.

ಆ ರಾಗಭೋಗದಾವೇಗಗಳನು ಬಿಗಿಹಿಡಿವುದಲ್ಲಿ ಏಕೆ?
ಸಂತೃಪ್ತವಾದ ಸುಖದೊಂದು ತಕ್ಕೆ ಇರೆ ಬೇರೆ ಪುಲಕ ಬೇಕೆ?
ಅಬ್ಬಬ್ಬ ಏನು ಅದ್ಭುತದ ಓಟ, ಕುಡಿಬೆಂಕಿ ನೋಟ, ಕೂಗು
ತನಿಪ್ರಾಣದೂರ್ಮಿ ನಿಗಿನಿಗಿಯೆ ಹರಿವ ನೆತ್ತರಿನ ತುಂಬು ತೇಗು.

ಅದು ಇಹುದು ದೇವನಗೆಯಲ್ಲಿ ಒಗೆದ ನವರತ್ನನಗರದಲ್ಲಿ
ಒರಗಿಹುದು ಎದೆಗೆ ಬೆರಗಾಗಿ ಪ್ರೇಮ ಹರಿದಿರಲು ಆಗಿ ಬಳ್ಳಿ.
ಅದಕಾವ ಬಂಧ? ಸ್ವಚ್ಛಂದದಿಂದ ಆನಂದ ಕೀರ್ತಿಸುವದು;
ಬಿಸಿಲೊಡ್ಡು ಮೈಯ್ಸಿ, ಬೆಳುದಿಂಗಳುಣಿಸಿ, ಜ್ಯೋತಿಯನೆ ಮೂರ್ತಿಸುವದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮಗೆಯು ಹೆಸರೊಂದನು ತರಲಿ!
Next post ಸುಭದ್ರೆ – ೯

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…