Home / ಕವನ / ಕವಿತೆ / ಪೆರುಮಾಳನ ಕೆಂದಾವರೆ

ಪೆರುಮಾಳನ ಕೆಂದಾವರೆ

ಪೆರುಮಾಳನ ಕೆಂದಾವರೆ ಅರಳಿದೆ ನಸುನಕ್ಕೆ!
ಹರಿನೀಲದ ಬಾನೊಳಗಿನ ಸಿಂಧೂರದ ಚುಕ್ಕೆ.
ನಲಿವಿನ ನಲಿನವು ತಾನೇ ತಾನಾಗಿಯೆ ಬಿಚ್ಚೆ
ಏಳ್ಮಡಿ ಧಾಳಾಧೂಳಿಯ ಏಳ್ಳಣ್ಣದ ಕಿಚ್ಚೇ
ಕಾರಣತನುವಿನ ಕೃತಿಯೇ ಸವಿಯೇ ಹರಿವರಿಯೇ
ಮನುಹೃದಯದಿ ಚಿಗಿ ನಿಗಿನಿಗಿ ಜಿಗಿ ಮೇಲಕ್ಕುರಿಯೇ
ಹೆಸರಾಚೆಯ ಭಾವದ ಹೂ ಸುರಿಸಿದ ಹಿರಿ ಹಿಗ್ಗೇ
ಬೆಡಗಿನ ನುಡಿ ಮೌನದ ಕುಡಿಮುಗುಳೇ ಮುಮ್ಮೊಗ್ಗೇ.

ಪೆರುಮಾಳನ ಕೆಂದಾವರೆ ಬೆಳಕಿನ ಚೆಂದಿರುಳೇ
ಬಾಳಿನ ತಿರುಕೋಡೊಳಗಿನ ಬಲು ಅರಿವಿನ ಅರುಳೇ
ಕಗ್ಗೊನೆಗಾಣ್ಕೆಯ ಒಳಗಿನ ಅಕಲಂಕಿತ ಕೆಚ್ಚೇ
ನೆಲದೆದೆಯಲಿ ನೆಲೆಮಾಡೆಲೆ ಹೊನ್‌ಹೂ ಮನಮೆಚ್ಚೇ
ಗುಟ್ಟೇ ಹುಟ್ಟೇ ಮೊಟ್ಟೆಯೆ ಹುರುಳಡಗಿದ ಹೆಸರೇ
ನಿಷ್ಕಾಲದ ನಡುನೆತ್ತಿಯ ನೇಸರೆ ಹೊಂಬಸಿರೇ
ದಿವ್ಯಮುಹೂರ್ತದ ಅತಿಥಿಯೆ ಕಾದಿರುವದು ಈಗ
ಮೂರಾಳದ ಕತ್ತಲೆ ಅದ ಬೆಳಗಿಸು ಬಾ ಬೇಗ.

ಪೆರುಮಾಳನ ಕೆಂದಾವರೆ ರತ್ನಪ್ರಭೆ ಬೀರೆ.
ಇರುಳಿಂಗಿತು ಮರ್ತ್ಯರ ಸಂಕಲ್ಪವೆ ಹೊತ್ತುತಿರೆ
ಆನಂತ್ಯದ ತಪಚಿತ್ರಿತ ಚೀನಾಂಶುಕನಾಗೆ
ದಿವ್ಯಪ್ರತಾಪದ ಮಾಣಿಕ್ಯದ ಮೂರ್ತಿಯ ಹಾಗೆ
ಕಾರ್ಮೋಡದ ತಿಳಿನೀರಲಿ ಕೆಮ್ಮಿಂಚುರಿವಂತೆ
ಡಾಳಿಂಬರ ಮೈದುಂಬಿರೆ ತಾನೇ ಬಿರಿವಂತೆ
ನಿನ್ನಾ ಹಂಚಿಕೆ ಮಾಟಕೆ ಬೆಳಗಾದೊಲು ಹಣತೆ
ವಿಗ್ರಹಗಂಡೊಲು ಅಮರತೆ ನರನಾರಾಯಣತೆ.

ಪೆರುಮಾಳನ ಕೆಂದಾವರೆ ಬಾಳಿನ ತಾಣವಿದೋ
ವರ್ಣಕ್ರಮ ಬಣ್ಣ ಸರಂಗೊಂಡಿಹ ವೀಣೆಯಿದೋ
ದಿವ್ಯೇಚ್ಛೆಯೆ ಮೈದಾಳಿದೆ ನೇರಳೆ ಬಣ್ಣದೊಳು
ಶತದಳದೊಲು ದಳದಳದಲಿ ಮಣ್ಣಿನ ಕಣ್ಣಿನೊಳು
ನೆಲ ಬಾನಿಗು ನಿಚ್ಚಣಿಕೆಯ ನಿಲ್ಲಿಸು ನಿಲ್ಲಿಸೆಲೇ
ಮರ್ತ್ಯವು ಮರಣವನರಿಯದ ಹಾಗಿರಲಿಲ್ಲಿ ಸೆಲೆ
ಮಧುಮಂತ್ರದ ಛಂದಸ್ಸನು ಪಲ್ಲಟಿಸುವ ಹಾಗೆ
ಕಾಲನ ಕಂದರ ಮಾಡೈ ಮಾರ್ಕಂಡೆಯರಾಗೆ.

ಪೆರುಮಾಳನ ಕೆಂದಾವರೆ ನಲುಮೆಯ ನಲಿನವಿದೋ
ಗುರುಕಾರುಣ್ಯದ ಭಾವಜ್ವಾಲಾಮಾಲೆಯಿದೋ
ಎಂದೆಂದಿನ ಮೊಗದೊಳಗಿಹ ಹಿಗ್ಗಿನ ನಾಚಿಕೆಯೋ
ಬಾಳಿನ ಆಳವ ತುಂಬಿದ ಮಾಣಿಕವೀಚಿಕೆಯೋ
ಪ್ರಕೃತಿಯ ಪಾತಾಳದ ಎದೆಯಾಳವೆ ಬಿಕ್ಕುತಿರೆ
ಬಾ ಬಲವೇ ಬಾ ನಲಿವೇ ಚೆಲುವೇ ಉಕ್ಕುತಿರೆ.
ಬಿಸವಂದದ ನಂದನಬನ ಮಾಡೀ ಜಗವಿಂದು
ಬಾಳಾಗಲಿ ಚಿನ್ಮೋದದ ಮುತ್ತಿನ ಸರವೊಂದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...