ಪೆರುಮಾಳನ ಕೆಂದಾವರೆ

ಪೆರುಮಾಳನ ಕೆಂದಾವರೆ ಅರಳಿದೆ ನಸುನಕ್ಕೆ!
ಹರಿನೀಲದ ಬಾನೊಳಗಿನ ಸಿಂಧೂರದ ಚುಕ್ಕೆ.
ನಲಿವಿನ ನಲಿನವು ತಾನೇ ತಾನಾಗಿಯೆ ಬಿಚ್ಚೆ
ಏಳ್ಮಡಿ ಧಾಳಾಧೂಳಿಯ ಏಳ್ಳಣ್ಣದ ಕಿಚ್ಚೇ
ಕಾರಣತನುವಿನ ಕೃತಿಯೇ ಸವಿಯೇ ಹರಿವರಿಯೇ
ಮನುಹೃದಯದಿ ಚಿಗಿ ನಿಗಿನಿಗಿ ಜಿಗಿ ಮೇಲಕ್ಕುರಿಯೇ
ಹೆಸರಾಚೆಯ ಭಾವದ ಹೂ ಸುರಿಸಿದ ಹಿರಿ ಹಿಗ್ಗೇ
ಬೆಡಗಿನ ನುಡಿ ಮೌನದ ಕುಡಿಮುಗುಳೇ ಮುಮ್ಮೊಗ್ಗೇ.

ಪೆರುಮಾಳನ ಕೆಂದಾವರೆ ಬೆಳಕಿನ ಚೆಂದಿರುಳೇ
ಬಾಳಿನ ತಿರುಕೋಡೊಳಗಿನ ಬಲು ಅರಿವಿನ ಅರುಳೇ
ಕಗ್ಗೊನೆಗಾಣ್ಕೆಯ ಒಳಗಿನ ಅಕಲಂಕಿತ ಕೆಚ್ಚೇ
ನೆಲದೆದೆಯಲಿ ನೆಲೆಮಾಡೆಲೆ ಹೊನ್‌ಹೂ ಮನಮೆಚ್ಚೇ
ಗುಟ್ಟೇ ಹುಟ್ಟೇ ಮೊಟ್ಟೆಯೆ ಹುರುಳಡಗಿದ ಹೆಸರೇ
ನಿಷ್ಕಾಲದ ನಡುನೆತ್ತಿಯ ನೇಸರೆ ಹೊಂಬಸಿರೇ
ದಿವ್ಯಮುಹೂರ್ತದ ಅತಿಥಿಯೆ ಕಾದಿರುವದು ಈಗ
ಮೂರಾಳದ ಕತ್ತಲೆ ಅದ ಬೆಳಗಿಸು ಬಾ ಬೇಗ.

ಪೆರುಮಾಳನ ಕೆಂದಾವರೆ ರತ್ನಪ್ರಭೆ ಬೀರೆ.
ಇರುಳಿಂಗಿತು ಮರ್ತ್ಯರ ಸಂಕಲ್ಪವೆ ಹೊತ್ತುತಿರೆ
ಆನಂತ್ಯದ ತಪಚಿತ್ರಿತ ಚೀನಾಂಶುಕನಾಗೆ
ದಿವ್ಯಪ್ರತಾಪದ ಮಾಣಿಕ್ಯದ ಮೂರ್ತಿಯ ಹಾಗೆ
ಕಾರ್ಮೋಡದ ತಿಳಿನೀರಲಿ ಕೆಮ್ಮಿಂಚುರಿವಂತೆ
ಡಾಳಿಂಬರ ಮೈದುಂಬಿರೆ ತಾನೇ ಬಿರಿವಂತೆ
ನಿನ್ನಾ ಹಂಚಿಕೆ ಮಾಟಕೆ ಬೆಳಗಾದೊಲು ಹಣತೆ
ವಿಗ್ರಹಗಂಡೊಲು ಅಮರತೆ ನರನಾರಾಯಣತೆ.

ಪೆರುಮಾಳನ ಕೆಂದಾವರೆ ಬಾಳಿನ ತಾಣವಿದೋ
ವರ್ಣಕ್ರಮ ಬಣ್ಣ ಸರಂಗೊಂಡಿಹ ವೀಣೆಯಿದೋ
ದಿವ್ಯೇಚ್ಛೆಯೆ ಮೈದಾಳಿದೆ ನೇರಳೆ ಬಣ್ಣದೊಳು
ಶತದಳದೊಲು ದಳದಳದಲಿ ಮಣ್ಣಿನ ಕಣ್ಣಿನೊಳು
ನೆಲ ಬಾನಿಗು ನಿಚ್ಚಣಿಕೆಯ ನಿಲ್ಲಿಸು ನಿಲ್ಲಿಸೆಲೇ
ಮರ್ತ್ಯವು ಮರಣವನರಿಯದ ಹಾಗಿರಲಿಲ್ಲಿ ಸೆಲೆ
ಮಧುಮಂತ್ರದ ಛಂದಸ್ಸನು ಪಲ್ಲಟಿಸುವ ಹಾಗೆ
ಕಾಲನ ಕಂದರ ಮಾಡೈ ಮಾರ್ಕಂಡೆಯರಾಗೆ.

ಪೆರುಮಾಳನ ಕೆಂದಾವರೆ ನಲುಮೆಯ ನಲಿನವಿದೋ
ಗುರುಕಾರುಣ್ಯದ ಭಾವಜ್ವಾಲಾಮಾಲೆಯಿದೋ
ಎಂದೆಂದಿನ ಮೊಗದೊಳಗಿಹ ಹಿಗ್ಗಿನ ನಾಚಿಕೆಯೋ
ಬಾಳಿನ ಆಳವ ತುಂಬಿದ ಮಾಣಿಕವೀಚಿಕೆಯೋ
ಪ್ರಕೃತಿಯ ಪಾತಾಳದ ಎದೆಯಾಳವೆ ಬಿಕ್ಕುತಿರೆ
ಬಾ ಬಲವೇ ಬಾ ನಲಿವೇ ಚೆಲುವೇ ಉಕ್ಕುತಿರೆ.
ಬಿಸವಂದದ ನಂದನಬನ ಮಾಡೀ ಜಗವಿಂದು
ಬಾಳಾಗಲಿ ಚಿನ್ಮೋದದ ಮುತ್ತಿನ ಸರವೊಂದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರುಳಿನ ಕೊರಗು
Next post ಸುಭದ್ರೆ – ೧೦

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

cheap jordans|wholesale air max|wholesale jordans|wholesale jewelry|wholesale jerseys