Home / ಕವನ / ಕವಿತೆ / ಪೆರುಮಾಳನ ಕೆಂದಾವರೆ

ಪೆರುಮಾಳನ ಕೆಂದಾವರೆ

ಪೆರುಮಾಳನ ಕೆಂದಾವರೆ ಅರಳಿದೆ ನಸುನಕ್ಕೆ!
ಹರಿನೀಲದ ಬಾನೊಳಗಿನ ಸಿಂಧೂರದ ಚುಕ್ಕೆ.
ನಲಿವಿನ ನಲಿನವು ತಾನೇ ತಾನಾಗಿಯೆ ಬಿಚ್ಚೆ
ಏಳ್ಮಡಿ ಧಾಳಾಧೂಳಿಯ ಏಳ್ಳಣ್ಣದ ಕಿಚ್ಚೇ
ಕಾರಣತನುವಿನ ಕೃತಿಯೇ ಸವಿಯೇ ಹರಿವರಿಯೇ
ಮನುಹೃದಯದಿ ಚಿಗಿ ನಿಗಿನಿಗಿ ಜಿಗಿ ಮೇಲಕ್ಕುರಿಯೇ
ಹೆಸರಾಚೆಯ ಭಾವದ ಹೂ ಸುರಿಸಿದ ಹಿರಿ ಹಿಗ್ಗೇ
ಬೆಡಗಿನ ನುಡಿ ಮೌನದ ಕುಡಿಮುಗುಳೇ ಮುಮ್ಮೊಗ್ಗೇ.

ಪೆರುಮಾಳನ ಕೆಂದಾವರೆ ಬೆಳಕಿನ ಚೆಂದಿರುಳೇ
ಬಾಳಿನ ತಿರುಕೋಡೊಳಗಿನ ಬಲು ಅರಿವಿನ ಅರುಳೇ
ಕಗ್ಗೊನೆಗಾಣ್ಕೆಯ ಒಳಗಿನ ಅಕಲಂಕಿತ ಕೆಚ್ಚೇ
ನೆಲದೆದೆಯಲಿ ನೆಲೆಮಾಡೆಲೆ ಹೊನ್‌ಹೂ ಮನಮೆಚ್ಚೇ
ಗುಟ್ಟೇ ಹುಟ್ಟೇ ಮೊಟ್ಟೆಯೆ ಹುರುಳಡಗಿದ ಹೆಸರೇ
ನಿಷ್ಕಾಲದ ನಡುನೆತ್ತಿಯ ನೇಸರೆ ಹೊಂಬಸಿರೇ
ದಿವ್ಯಮುಹೂರ್ತದ ಅತಿಥಿಯೆ ಕಾದಿರುವದು ಈಗ
ಮೂರಾಳದ ಕತ್ತಲೆ ಅದ ಬೆಳಗಿಸು ಬಾ ಬೇಗ.

ಪೆರುಮಾಳನ ಕೆಂದಾವರೆ ರತ್ನಪ್ರಭೆ ಬೀರೆ.
ಇರುಳಿಂಗಿತು ಮರ್ತ್ಯರ ಸಂಕಲ್ಪವೆ ಹೊತ್ತುತಿರೆ
ಆನಂತ್ಯದ ತಪಚಿತ್ರಿತ ಚೀನಾಂಶುಕನಾಗೆ
ದಿವ್ಯಪ್ರತಾಪದ ಮಾಣಿಕ್ಯದ ಮೂರ್ತಿಯ ಹಾಗೆ
ಕಾರ್ಮೋಡದ ತಿಳಿನೀರಲಿ ಕೆಮ್ಮಿಂಚುರಿವಂತೆ
ಡಾಳಿಂಬರ ಮೈದುಂಬಿರೆ ತಾನೇ ಬಿರಿವಂತೆ
ನಿನ್ನಾ ಹಂಚಿಕೆ ಮಾಟಕೆ ಬೆಳಗಾದೊಲು ಹಣತೆ
ವಿಗ್ರಹಗಂಡೊಲು ಅಮರತೆ ನರನಾರಾಯಣತೆ.

ಪೆರುಮಾಳನ ಕೆಂದಾವರೆ ಬಾಳಿನ ತಾಣವಿದೋ
ವರ್ಣಕ್ರಮ ಬಣ್ಣ ಸರಂಗೊಂಡಿಹ ವೀಣೆಯಿದೋ
ದಿವ್ಯೇಚ್ಛೆಯೆ ಮೈದಾಳಿದೆ ನೇರಳೆ ಬಣ್ಣದೊಳು
ಶತದಳದೊಲು ದಳದಳದಲಿ ಮಣ್ಣಿನ ಕಣ್ಣಿನೊಳು
ನೆಲ ಬಾನಿಗು ನಿಚ್ಚಣಿಕೆಯ ನಿಲ್ಲಿಸು ನಿಲ್ಲಿಸೆಲೇ
ಮರ್ತ್ಯವು ಮರಣವನರಿಯದ ಹಾಗಿರಲಿಲ್ಲಿ ಸೆಲೆ
ಮಧುಮಂತ್ರದ ಛಂದಸ್ಸನು ಪಲ್ಲಟಿಸುವ ಹಾಗೆ
ಕಾಲನ ಕಂದರ ಮಾಡೈ ಮಾರ್ಕಂಡೆಯರಾಗೆ.

ಪೆರುಮಾಳನ ಕೆಂದಾವರೆ ನಲುಮೆಯ ನಲಿನವಿದೋ
ಗುರುಕಾರುಣ್ಯದ ಭಾವಜ್ವಾಲಾಮಾಲೆಯಿದೋ
ಎಂದೆಂದಿನ ಮೊಗದೊಳಗಿಹ ಹಿಗ್ಗಿನ ನಾಚಿಕೆಯೋ
ಬಾಳಿನ ಆಳವ ತುಂಬಿದ ಮಾಣಿಕವೀಚಿಕೆಯೋ
ಪ್ರಕೃತಿಯ ಪಾತಾಳದ ಎದೆಯಾಳವೆ ಬಿಕ್ಕುತಿರೆ
ಬಾ ಬಲವೇ ಬಾ ನಲಿವೇ ಚೆಲುವೇ ಉಕ್ಕುತಿರೆ.
ಬಿಸವಂದದ ನಂದನಬನ ಮಾಡೀ ಜಗವಿಂದು
ಬಾಳಾಗಲಿ ಚಿನ್ಮೋದದ ಮುತ್ತಿನ ಸರವೊಂದು.
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...