Home / ಕವನ / ಕವಿತೆ / ಮಾನಸ ಆತ್ಮದಲ್ಲಿ

ಮಾನಸ ಆತ್ಮದಲ್ಲಿ

(ಸಾವಿತ್ರಿ)
ಕೊನೆಗಲ್ಲಿ ಬಂತು ಬರಿದೆನುವ ಬಯಲು ಆ ಉದಾಸೀನ ಬಾನು.
ಕೋಟಿ ಪ್ರಶ್ನೆ ಏನೇನು ? ಇರಲಿ ಉತ್ತರವು ಬ್ರಹ್ಮ ನಾನು.
ವಿಶ್ವ ಹೇಳುತಿದೆ ಮೌನ ಕೇಳುತಿದೆ ಮನನ ಏಕತಾನು.
ಜೀವ ಜಿಜ್ಞಾಸೆಗಿಲ್ಲ ಕೊನೆಯು ಪ್ರತಿ ಮೌನ ಕಾಮಧೇನು.

ಲವಲವಿಕೆಯೆಲ್ಲ ಎಕ್ಕೆಕ್ಕಿ ನಡೆದು ಮುಗ್ಗರಿಸಿಕೊಂಡು ಬಿತ್ತು.
ಬರಿ ಸಾಮಸೂಮ ಹಬ್ಬುತ್ತ ಒಮ್ಮೆಗೆಲೆ ಸ್ತಬ್ಧವಾಗಿ ಇತ್ತು.
* * *

ನಿರಾಕಾರ, ನಿಶ್ಚರ್ಯ ಮತ್ತು ನಿಃಶಬ್ಬ ಪುರುಷನೊಬ್ಬ.
ಹೊತ್ತು ಹೊರತಾಗೆ, ತನ್ನ ತಿಳಿದವನು ತಾನೆ ತಾನು ಆಗಿ,
ನಿಸ್ತರಂಗದಾ ಆಳದಲ್ಲಿ ಅರಿವೆನಿಸಿ ಆಗಳೂನೂ
ನಿರ್ಮಾತನಲ್ಲ, ನಿರ್ಮಾಣವಲ್ಲ, ಪೂರಾ ಅಜಾತನಾಗಿ

ಒಂದರದೆ ಹಲವು, ಇವನಿಂದೆ ಹರವು, ಎರವಿಲ್ಲದೊಬ್ಬನೊಬ್ಬ,
ಇಲ್ಲದಕೆ ಅಳತೆ ಬೆಳ್ಳಂ ಬೆಳಕು-ಮುಸುಕಿತ್ತು ಗುಪ್ತವಿರಿಸಿ.
ಅವ್ಯಕ್ತ ತನ್ನ ಆವರಣಗಳಲಿ ಕಾಪಾಡಿದಂತೆ ಉಳಿಸಿ,
ವಿಶ್ವದೊಂದು ವಿಷ್ಕಂಭದಾಚೆ ಲೋಕಾಲೋಕ ದಾಟಿ,
ಬ್ರಹ್ಮದಕ್ಷರದ ಪರಂಧಾಮ ಏಕೋ ಏಕವೆನಿಸಿ,

ಅರಿದಾದ ಗೂಢಕಾರಣವು ತಾನು ದುರ್ಭೇದ್ಯದಾತನಾಗಿ,
ಚಿರಂತನವು ತಾ, ತಾನನಂತ್ಯ ಕೇವಲವಗಮ್ಯವಾಗಿ,
* * *

ಆಕಾರವಿರದ ಆಕಾರವೊಂದು ಆತ್ಮಾರ್ಥವೆಂದು ತಿಳಿಯೆ,
ತುಹದ್ಭೂತ ಗತಿಸಿರಲು ಅದರ ಘನಛಾಯೆ ಹಿಂದೆ ಉಳಿಯೆ,
ಆ ಅಪಾರ ಪಾರಾವಾರದಲ್ಲಿಳಿವ ಮೊದಲು ಗಳಿಗೆ,
ಅಳಿವೆ ಅಲೆಯಲೆಯ ಕೊನೆಯ ಕಲೆಯ ಅನುಭವದ ಹಾಗೆ ಕಳೆಯೆ,

ಶೂನ್ಯ ಸಾಗರದ ತೀರದಲ್ಲೆ ಇಂಗಿಂಗಿ ಜಡಧಿ ಹೋಗೆ,
ಬಯಲು ಭಾವನೆಯ ತೇವ ಭಾವಿಯಲೆ ಆರಿಹೋದ ಹಾಗೆ,
ಅವಕಾಶವನ್ನು ನೆಂಬಿಲ್ಲ ಎಂಬ ಮಹದಾತ್ಮಧ್ಯಾನ ಪ್ರಖರ,
ಕಾಲವನೆ ಕೊಸರಿ ನಿಡಿದಾದ ತಾನು ಶಾಶ್ವತದ ಶೂನ್ಯಶಿಖರ,

ಅದ್ಭುತವು ಭವ್ಯ ವ್ಯಭಿಚರಣೆ ಇದರ ಸುಸ್ಥಾಣು ದಾಂತಶಾಂತ.
ಜಗಜೀವಗಳನು ತಾ ಹೊರಗು ಮಾಡಿ ನಿಬ್ಬೆರಗು ಮೌನವಾಂತ
ಎರಡರಿಯದೊಂದು ಕೈವಲ್ಯ ನೈಜ ಬರಿಬೆತ್ತಲೆತ್ತಲೂನೂ.
ಕಂಡಿತ್ತು ಅವನ ಕಡು-ರಾಗಿ ಜೀವ ಅರಸರಸಿ ಕೊನೆಗೆ ತಾನು.
* * *

ಆಳಾದ ಶಾಂತಿ ಅಲ್ಲಿತ್ತು, ಇಲ್ಲ ಹೆಸರಿರದ ಶಕ್ತಿಯಾಕೆ
ಇರಲಿಲ್ಲ ಅಲ್ಲಿ ಮಾಧುರ್ಯವಂತೆ, ಮಾಶಕ್ತಿ ನಮ್ಮ ಮಾತೆ
ತನ್ನೆದೆಗೆ ಅವಚಿಕೊಳುವವಳು, ತನ್ನ ಸಂತತಿಯ ಬಾಳ್ಕೆ ಜೋಕೆ.

ಏನವಳ ಹಿಡಿತ, ಸಕಲ ಪ್ರಪಂಚ ಆ ಅಗಲ ತಕ್ಕೆಯಲ್ಲಿ
ನೆಲೆ ಹತ್ತದಂಥ ಹರ್ಷಪ್ರಮೋದ ಆನಂತ್ಯದಬ್ಧಿಯಲ್ಲಿ
ನಾಳೆ ನಾಡಿದಿನ ಬಾಳಕಾಳು ಬೆಳೆಸೆನುವ ಮೋದಮುದ್ರೆ
ದೈವದುನ್ಮಾದದಲ್ಲಿ ಬಿಳಿಗಾವು ಎದ್ದ ಭಾವಭದ್ರೆ.
* * *

ಬೆಳಕುಕತ್ತಲೆಯ ಎರಡು ಗೋಲಗಳು ಒಂದನ್ನೊಂದು ದೂಡೆ,
ಮೇರೆಗೆರೆಯಲ್ಲಿ ಆತ್ಮಚರಿತಕ್ಕೆ ಗೀರುಹಾದಿ ಮಾಡೆ
ಕ್ಷಣಿಕ ಘಟನೆಗಳ ರಾಜ್ಯದಲ್ಲಿ; ಜೀವಪ್ರಪಂಚದಲ್ಲಿ.
ಬದುಕಲಿಕ್ಕೆ ಸಾಯುವರು ಅಲ್ಲಿ ಬದುಕುವರು ಸಾವಿಗೆಲ್ಲಿ?

ಮರಳಿ ಮರಳಿ ಮರಣವನೆ ಉಂಡು ಅಮರತ್ವ ಭೋಗಭಾಗಿ
ತನ್ನ ಕೃತಿಯ ಗೋಪುರದ ಚಕ್ರದಲಿ ವಕ್ರವಕ್ರವಾಗಿ
ಆಡಿದ್ದೆ ಆಡಿ ಮಾಡಿದ್ದೆ ಮಾಡಿ ಬಲಗೊಂಬುವಂತೆ ಆಗಿ

ಮೂಲ ಭಂಡವಲು ಮುಗಿಯಲಿಲ್ಲ, ನಿಜ, ಬೆಳೆಯಲಿಲ್ಲ ಕೂಡ
ಜ್ಞಾನವೆಲ್ಲ ಅಜ್ಞಾನದಂತೆ ಮೊದಲಿದ್ದ ಹಾಗೆ ಮೂಢ.
ಆತ್ಮದಾನಂತ್ಯದಿಂದ ಮರೆಯಾಗಿ ಅದುವು ಸಾಗುತಿತ್ತು.
ಇರವು ಬಂಧನದ ಬಾಳು; ಸಾವುದೇ ಮುಕ್ತಿ ಎನಿಸಲಿತ್ತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...