Home / ಕವನ / ಕವಿತೆ / ಬಂದೆ ಬಂದೆ

ಬಂದೆ ಬಂದೆ

ಮಾತೃವಚನ

ನನ್ನ ದೊರೆಯೆ ಸವಿಗಾರ ಸ್ವಾಮಿ ಈ ನಿನ್ನ ಕೆಲಸವನ್ನೇ
ಗೊನೆಗೊಳಿಸಲೆಂದು ಜಡಜಲಧಿತಳಕೆ ಮುಟ್ಟಿದೆನು ಮೂಲವನ್ನೇ
ಸುಳ್ಳನ್ನು ಮತ್ತೆ ಅಜ್ಞಾನನರಕ ಬೆರಳೊತ್ತಿ ಮುಟ್ಟಿಬಿಟ್ಟೆ
ಗಾಢಾಂಧಕಾರ ವಿಸ್ಮೃತಿಯ ಪರಮಗುಹೆಯಲ್ಲಿ ಪಾದವಿಟ್ಟೆ

ನಿನ್ನ ನೆನೆವು ನನ್ನೆದೆಯೊಳಿತ್ತದರ ಕರೆಯೆ ಹಾರಿ ಸಾರಿ
ನಿನ್ನತ್ತ ಬಂತು; ಹಾ ದೊರೆಯೆ ಎತ್ತೆತ್ತು ನಿನ್ನ ವೈರಿ
ಜಯಮತ್ತರಂತೆ ತೋರುತ್ತಲಿಹರು ಜಗದೊಡೆಯನೀಗ ಸತ್ಯ
ನೀನಿರದ ಬಾಳು ಅದು ಒಂದು ಸಾವು ಅದು ನರಕ ನಿತ್ಯನಿತ್ಯ

ಆಸೆಯನ್ನು ತಳ್ಳಿ ಸಂಶಯವೆ ಪಟ್ಟವನ್ನು ಕಟ್ಟಿಕೊಂಡು ಮತ್ತೆ
ಹುಸಿಬಂಡು ಪುಂಡು ಶರಣತೆಯ ನೂಕಿ, ನಂಬುಗೆಯ ತೀರಹತ್ತಿ
ಉಪಕಾರ ಸ್ಮೃತಿಯು ಹುಟ್ಟಿಲ್ಲವಿನ್ನು ಕಗ್ಗುರುಡು ಕಾಮ
ಕೊಲೆಗಡಕ ಬುದ್ದಿ ಬರುತಿಹುದು ನೋಡ ದುರ್ಬಲದ ತಪ್ಪಹೊಂದಿ

ಆ ನಿನ್ನ ಮಧುರತಮ ಪ್ರೇಮಧರ್ಮ ಬಾಯ್ಗಟ್ಟಿ ಉಸಿರುಗಟ್ಟಿ
ಉಮ್ಮಳಿಸುತಿಹುದು ಹಾ ದೊರೆಯೆ ನೀನೆ ಆಪಗೆಯ ಪಟ್ಟಗಟ್ಟಿ;
ಬಿಡುವಿಯೇನು? ಆ ಅನೃತವನ್ನು ಆ ವಿಕೃತಿಯನ್ನು ಮತ್ತೆ,
ಸಂತಾಪ ತಾಪ ಸಂತತಿಯನೆಲ್ಲ ಆ ಮಹಾವಿಜಯದತ್ತೆ.

ಹಾ ದೊರೆಯೆ ಆಜ್ಞೆಯನು ಕೊಟ್ಟು ನೋಡು ಕಟ್ಟಿಟ್ಟ ವಿಜಯವಹುದು
ನಾ ಬಲ್ಲೆ, ನಮಗೆ ಯೋಗ್ಯತೆಯು ಇಲ್ಲ ಜಗ ಸಿದ್ಧವಿಲ್ಲ; ಅಹುದು
ಕಡುಕಟ್ಟಿ ನಂಬುಗೆಯ ತುಟ್ಟತುದಿಯ ಮುಟ್ಟೊಮ್ಮೆ ಕೂಗಿಕೊಳುವೆ,
ದೊರೆ ಹೈ ಹಸಾದ ಜಗ ರಕ್ಷಿಸಯ್ಯ ಅದು ನಿನ್ನ ಅರುಳಿನಳವೆ.

ಇದು ಏನೆ ಇರಲಿ, ಇದು ಹೇಗು ಇರಲಿ, ತೋರಯ್ಯ ಕರುಣೆದೋರು.
ಉದ್ದಾರವಹುದು ಜಗವಮೃತವಹುದು ಭವಜಲಧಿ ದಾಟಿ ಪಾರು.
ಪಾತಾಳದಿಂದ ಎದೆಯಾಳದಿಂದ ಜೀವಾಳದಿಂದ ಒಂದು
ನಿನ್ನತ್ತ ನುಗ್ಗಿ ಹೊರಹೊಮ್ಮಿ ಹಿಗ್ಗಿ ಪ್ರಾರ್ಥನೆಯು ತಾನೆ ಬಂದು

ನಿನ್ನನ್ನು ಕಂಡೆ ಕಡುಕಾಂತಿಯಲ್ಲಿ ನೀನಾಗ ನನಗೆ ಅಂದೆ
ಎದೆಗೆಡಿಸಿಕೊಳ್ಳದಿರು, ಧೀರಳಾಗು, ಇಗೊ ನಂಬು ಬಂದೆಬಂದೆ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...