Home / ಕವನ / ಕವಿತೆ / ಬಂದೆ ಬಂದೆ

ಬಂದೆ ಬಂದೆ

ಮಾತೃವಚನ

ನನ್ನ ದೊರೆಯೆ ಸವಿಗಾರ ಸ್ವಾಮಿ ಈ ನಿನ್ನ ಕೆಲಸವನ್ನೇ
ಗೊನೆಗೊಳಿಸಲೆಂದು ಜಡಜಲಧಿತಳಕೆ ಮುಟ್ಟಿದೆನು ಮೂಲವನ್ನೇ
ಸುಳ್ಳನ್ನು ಮತ್ತೆ ಅಜ್ಞಾನನರಕ ಬೆರಳೊತ್ತಿ ಮುಟ್ಟಿಬಿಟ್ಟೆ
ಗಾಢಾಂಧಕಾರ ವಿಸ್ಮೃತಿಯ ಪರಮಗುಹೆಯಲ್ಲಿ ಪಾದವಿಟ್ಟೆ

ನಿನ್ನ ನೆನೆವು ನನ್ನೆದೆಯೊಳಿತ್ತದರ ಕರೆಯೆ ಹಾರಿ ಸಾರಿ
ನಿನ್ನತ್ತ ಬಂತು; ಹಾ ದೊರೆಯೆ ಎತ್ತೆತ್ತು ನಿನ್ನ ವೈರಿ
ಜಯಮತ್ತರಂತೆ ತೋರುತ್ತಲಿಹರು ಜಗದೊಡೆಯನೀಗ ಸತ್ಯ
ನೀನಿರದ ಬಾಳು ಅದು ಒಂದು ಸಾವು ಅದು ನರಕ ನಿತ್ಯನಿತ್ಯ

ಆಸೆಯನ್ನು ತಳ್ಳಿ ಸಂಶಯವೆ ಪಟ್ಟವನ್ನು ಕಟ್ಟಿಕೊಂಡು ಮತ್ತೆ
ಹುಸಿಬಂಡು ಪುಂಡು ಶರಣತೆಯ ನೂಕಿ, ನಂಬುಗೆಯ ತೀರಹತ್ತಿ
ಉಪಕಾರ ಸ್ಮೃತಿಯು ಹುಟ್ಟಿಲ್ಲವಿನ್ನು ಕಗ್ಗುರುಡು ಕಾಮ
ಕೊಲೆಗಡಕ ಬುದ್ದಿ ಬರುತಿಹುದು ನೋಡ ದುರ್ಬಲದ ತಪ್ಪಹೊಂದಿ

ಆ ನಿನ್ನ ಮಧುರತಮ ಪ್ರೇಮಧರ್ಮ ಬಾಯ್ಗಟ್ಟಿ ಉಸಿರುಗಟ್ಟಿ
ಉಮ್ಮಳಿಸುತಿಹುದು ಹಾ ದೊರೆಯೆ ನೀನೆ ಆಪಗೆಯ ಪಟ್ಟಗಟ್ಟಿ;
ಬಿಡುವಿಯೇನು? ಆ ಅನೃತವನ್ನು ಆ ವಿಕೃತಿಯನ್ನು ಮತ್ತೆ,
ಸಂತಾಪ ತಾಪ ಸಂತತಿಯನೆಲ್ಲ ಆ ಮಹಾವಿಜಯದತ್ತೆ.

ಹಾ ದೊರೆಯೆ ಆಜ್ಞೆಯನು ಕೊಟ್ಟು ನೋಡು ಕಟ್ಟಿಟ್ಟ ವಿಜಯವಹುದು
ನಾ ಬಲ್ಲೆ, ನಮಗೆ ಯೋಗ್ಯತೆಯು ಇಲ್ಲ ಜಗ ಸಿದ್ಧವಿಲ್ಲ; ಅಹುದು
ಕಡುಕಟ್ಟಿ ನಂಬುಗೆಯ ತುಟ್ಟತುದಿಯ ಮುಟ್ಟೊಮ್ಮೆ ಕೂಗಿಕೊಳುವೆ,
ದೊರೆ ಹೈ ಹಸಾದ ಜಗ ರಕ್ಷಿಸಯ್ಯ ಅದು ನಿನ್ನ ಅರುಳಿನಳವೆ.

ಇದು ಏನೆ ಇರಲಿ, ಇದು ಹೇಗು ಇರಲಿ, ತೋರಯ್ಯ ಕರುಣೆದೋರು.
ಉದ್ದಾರವಹುದು ಜಗವಮೃತವಹುದು ಭವಜಲಧಿ ದಾಟಿ ಪಾರು.
ಪಾತಾಳದಿಂದ ಎದೆಯಾಳದಿಂದ ಜೀವಾಳದಿಂದ ಒಂದು
ನಿನ್ನತ್ತ ನುಗ್ಗಿ ಹೊರಹೊಮ್ಮಿ ಹಿಗ್ಗಿ ಪ್ರಾರ್ಥನೆಯು ತಾನೆ ಬಂದು

ನಿನ್ನನ್ನು ಕಂಡೆ ಕಡುಕಾಂತಿಯಲ್ಲಿ ನೀನಾಗ ನನಗೆ ಅಂದೆ
ಎದೆಗೆಡಿಸಿಕೊಳ್ಳದಿರು, ಧೀರಳಾಗು, ಇಗೊ ನಂಬು ಬಂದೆಬಂದೆ.
*****

Tagged:

Leave a Reply

Your email address will not be published. Required fields are marked *

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...