Home / ಕವನ / ಕವಿತೆ / ಬಂದೆ ಬಂದೆ

ಬಂದೆ ಬಂದೆ

ಮಾತೃವಚನ

ನನ್ನ ದೊರೆಯೆ ಸವಿಗಾರ ಸ್ವಾಮಿ ಈ ನಿನ್ನ ಕೆಲಸವನ್ನೇ
ಗೊನೆಗೊಳಿಸಲೆಂದು ಜಡಜಲಧಿತಳಕೆ ಮುಟ್ಟಿದೆನು ಮೂಲವನ್ನೇ
ಸುಳ್ಳನ್ನು ಮತ್ತೆ ಅಜ್ಞಾನನರಕ ಬೆರಳೊತ್ತಿ ಮುಟ್ಟಿಬಿಟ್ಟೆ
ಗಾಢಾಂಧಕಾರ ವಿಸ್ಮೃತಿಯ ಪರಮಗುಹೆಯಲ್ಲಿ ಪಾದವಿಟ್ಟೆ

ನಿನ್ನ ನೆನೆವು ನನ್ನೆದೆಯೊಳಿತ್ತದರ ಕರೆಯೆ ಹಾರಿ ಸಾರಿ
ನಿನ್ನತ್ತ ಬಂತು; ಹಾ ದೊರೆಯೆ ಎತ್ತೆತ್ತು ನಿನ್ನ ವೈರಿ
ಜಯಮತ್ತರಂತೆ ತೋರುತ್ತಲಿಹರು ಜಗದೊಡೆಯನೀಗ ಸತ್ಯ
ನೀನಿರದ ಬಾಳು ಅದು ಒಂದು ಸಾವು ಅದು ನರಕ ನಿತ್ಯನಿತ್ಯ

ಆಸೆಯನ್ನು ತಳ್ಳಿ ಸಂಶಯವೆ ಪಟ್ಟವನ್ನು ಕಟ್ಟಿಕೊಂಡು ಮತ್ತೆ
ಹುಸಿಬಂಡು ಪುಂಡು ಶರಣತೆಯ ನೂಕಿ, ನಂಬುಗೆಯ ತೀರಹತ್ತಿ
ಉಪಕಾರ ಸ್ಮೃತಿಯು ಹುಟ್ಟಿಲ್ಲವಿನ್ನು ಕಗ್ಗುರುಡು ಕಾಮ
ಕೊಲೆಗಡಕ ಬುದ್ದಿ ಬರುತಿಹುದು ನೋಡ ದುರ್ಬಲದ ತಪ್ಪಹೊಂದಿ

ಆ ನಿನ್ನ ಮಧುರತಮ ಪ್ರೇಮಧರ್ಮ ಬಾಯ್ಗಟ್ಟಿ ಉಸಿರುಗಟ್ಟಿ
ಉಮ್ಮಳಿಸುತಿಹುದು ಹಾ ದೊರೆಯೆ ನೀನೆ ಆಪಗೆಯ ಪಟ್ಟಗಟ್ಟಿ;
ಬಿಡುವಿಯೇನು? ಆ ಅನೃತವನ್ನು ಆ ವಿಕೃತಿಯನ್ನು ಮತ್ತೆ,
ಸಂತಾಪ ತಾಪ ಸಂತತಿಯನೆಲ್ಲ ಆ ಮಹಾವಿಜಯದತ್ತೆ.

ಹಾ ದೊರೆಯೆ ಆಜ್ಞೆಯನು ಕೊಟ್ಟು ನೋಡು ಕಟ್ಟಿಟ್ಟ ವಿಜಯವಹುದು
ನಾ ಬಲ್ಲೆ, ನಮಗೆ ಯೋಗ್ಯತೆಯು ಇಲ್ಲ ಜಗ ಸಿದ್ಧವಿಲ್ಲ; ಅಹುದು
ಕಡುಕಟ್ಟಿ ನಂಬುಗೆಯ ತುಟ್ಟತುದಿಯ ಮುಟ್ಟೊಮ್ಮೆ ಕೂಗಿಕೊಳುವೆ,
ದೊರೆ ಹೈ ಹಸಾದ ಜಗ ರಕ್ಷಿಸಯ್ಯ ಅದು ನಿನ್ನ ಅರುಳಿನಳವೆ.

ಇದು ಏನೆ ಇರಲಿ, ಇದು ಹೇಗು ಇರಲಿ, ತೋರಯ್ಯ ಕರುಣೆದೋರು.
ಉದ್ದಾರವಹುದು ಜಗವಮೃತವಹುದು ಭವಜಲಧಿ ದಾಟಿ ಪಾರು.
ಪಾತಾಳದಿಂದ ಎದೆಯಾಳದಿಂದ ಜೀವಾಳದಿಂದ ಒಂದು
ನಿನ್ನತ್ತ ನುಗ್ಗಿ ಹೊರಹೊಮ್ಮಿ ಹಿಗ್ಗಿ ಪ್ರಾರ್ಥನೆಯು ತಾನೆ ಬಂದು

ನಿನ್ನನ್ನು ಕಂಡೆ ಕಡುಕಾಂತಿಯಲ್ಲಿ ನೀನಾಗ ನನಗೆ ಅಂದೆ
ಎದೆಗೆಡಿಸಿಕೊಳ್ಳದಿರು, ಧೀರಳಾಗು, ಇಗೊ ನಂಬು ಬಂದೆಬಂದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...