Home / ಕವನ / ಕವಿತೆ / ಬಂದೆ ಬಂದೆ

ಬಂದೆ ಬಂದೆ

ಮಾತೃವಚನ

ನನ್ನ ದೊರೆಯೆ ಸವಿಗಾರ ಸ್ವಾಮಿ ಈ ನಿನ್ನ ಕೆಲಸವನ್ನೇ
ಗೊನೆಗೊಳಿಸಲೆಂದು ಜಡಜಲಧಿತಳಕೆ ಮುಟ್ಟಿದೆನು ಮೂಲವನ್ನೇ
ಸುಳ್ಳನ್ನು ಮತ್ತೆ ಅಜ್ಞಾನನರಕ ಬೆರಳೊತ್ತಿ ಮುಟ್ಟಿಬಿಟ್ಟೆ
ಗಾಢಾಂಧಕಾರ ವಿಸ್ಮೃತಿಯ ಪರಮಗುಹೆಯಲ್ಲಿ ಪಾದವಿಟ್ಟೆ

ನಿನ್ನ ನೆನೆವು ನನ್ನೆದೆಯೊಳಿತ್ತದರ ಕರೆಯೆ ಹಾರಿ ಸಾರಿ
ನಿನ್ನತ್ತ ಬಂತು; ಹಾ ದೊರೆಯೆ ಎತ್ತೆತ್ತು ನಿನ್ನ ವೈರಿ
ಜಯಮತ್ತರಂತೆ ತೋರುತ್ತಲಿಹರು ಜಗದೊಡೆಯನೀಗ ಸತ್ಯ
ನೀನಿರದ ಬಾಳು ಅದು ಒಂದು ಸಾವು ಅದು ನರಕ ನಿತ್ಯನಿತ್ಯ

ಆಸೆಯನ್ನು ತಳ್ಳಿ ಸಂಶಯವೆ ಪಟ್ಟವನ್ನು ಕಟ್ಟಿಕೊಂಡು ಮತ್ತೆ
ಹುಸಿಬಂಡು ಪುಂಡು ಶರಣತೆಯ ನೂಕಿ, ನಂಬುಗೆಯ ತೀರಹತ್ತಿ
ಉಪಕಾರ ಸ್ಮೃತಿಯು ಹುಟ್ಟಿಲ್ಲವಿನ್ನು ಕಗ್ಗುರುಡು ಕಾಮ
ಕೊಲೆಗಡಕ ಬುದ್ದಿ ಬರುತಿಹುದು ನೋಡ ದುರ್ಬಲದ ತಪ್ಪಹೊಂದಿ

ಆ ನಿನ್ನ ಮಧುರತಮ ಪ್ರೇಮಧರ್ಮ ಬಾಯ್ಗಟ್ಟಿ ಉಸಿರುಗಟ್ಟಿ
ಉಮ್ಮಳಿಸುತಿಹುದು ಹಾ ದೊರೆಯೆ ನೀನೆ ಆಪಗೆಯ ಪಟ್ಟಗಟ್ಟಿ;
ಬಿಡುವಿಯೇನು? ಆ ಅನೃತವನ್ನು ಆ ವಿಕೃತಿಯನ್ನು ಮತ್ತೆ,
ಸಂತಾಪ ತಾಪ ಸಂತತಿಯನೆಲ್ಲ ಆ ಮಹಾವಿಜಯದತ್ತೆ.

ಹಾ ದೊರೆಯೆ ಆಜ್ಞೆಯನು ಕೊಟ್ಟು ನೋಡು ಕಟ್ಟಿಟ್ಟ ವಿಜಯವಹುದು
ನಾ ಬಲ್ಲೆ, ನಮಗೆ ಯೋಗ್ಯತೆಯು ಇಲ್ಲ ಜಗ ಸಿದ್ಧವಿಲ್ಲ; ಅಹುದು
ಕಡುಕಟ್ಟಿ ನಂಬುಗೆಯ ತುಟ್ಟತುದಿಯ ಮುಟ್ಟೊಮ್ಮೆ ಕೂಗಿಕೊಳುವೆ,
ದೊರೆ ಹೈ ಹಸಾದ ಜಗ ರಕ್ಷಿಸಯ್ಯ ಅದು ನಿನ್ನ ಅರುಳಿನಳವೆ.

ಇದು ಏನೆ ಇರಲಿ, ಇದು ಹೇಗು ಇರಲಿ, ತೋರಯ್ಯ ಕರುಣೆದೋರು.
ಉದ್ದಾರವಹುದು ಜಗವಮೃತವಹುದು ಭವಜಲಧಿ ದಾಟಿ ಪಾರು.
ಪಾತಾಳದಿಂದ ಎದೆಯಾಳದಿಂದ ಜೀವಾಳದಿಂದ ಒಂದು
ನಿನ್ನತ್ತ ನುಗ್ಗಿ ಹೊರಹೊಮ್ಮಿ ಹಿಗ್ಗಿ ಪ್ರಾರ್ಥನೆಯು ತಾನೆ ಬಂದು

ನಿನ್ನನ್ನು ಕಂಡೆ ಕಡುಕಾಂತಿಯಲ್ಲಿ ನೀನಾಗ ನನಗೆ ಅಂದೆ
ಎದೆಗೆಡಿಸಿಕೊಳ್ಳದಿರು, ಧೀರಳಾಗು, ಇಗೊ ನಂಬು ಬಂದೆಬಂದೆ.
*****

Tagged:

Leave a Reply

Your email address will not be published. Required fields are marked *

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...