ಬಂದೆ ಬಂದೆ

ಮಾತೃವಚನ

ನನ್ನ ದೊರೆಯೆ ಸವಿಗಾರ ಸ್ವಾಮಿ ಈ ನಿನ್ನ ಕೆಲಸವನ್ನೇ
ಗೊನೆಗೊಳಿಸಲೆಂದು ಜಡಜಲಧಿತಳಕೆ ಮುಟ್ಟಿದೆನು ಮೂಲವನ್ನೇ
ಸುಳ್ಳನ್ನು ಮತ್ತೆ ಅಜ್ಞಾನನರಕ ಬೆರಳೊತ್ತಿ ಮುಟ್ಟಿಬಿಟ್ಟೆ
ಗಾಢಾಂಧಕಾರ ವಿಸ್ಮೃತಿಯ ಪರಮಗುಹೆಯಲ್ಲಿ ಪಾದವಿಟ್ಟೆ

ನಿನ್ನ ನೆನೆವು ನನ್ನೆದೆಯೊಳಿತ್ತದರ ಕರೆಯೆ ಹಾರಿ ಸಾರಿ
ನಿನ್ನತ್ತ ಬಂತು; ಹಾ ದೊರೆಯೆ ಎತ್ತೆತ್ತು ನಿನ್ನ ವೈರಿ
ಜಯಮತ್ತರಂತೆ ತೋರುತ್ತಲಿಹರು ಜಗದೊಡೆಯನೀಗ ಸತ್ಯ
ನೀನಿರದ ಬಾಳು ಅದು ಒಂದು ಸಾವು ಅದು ನರಕ ನಿತ್ಯನಿತ್ಯ

ಆಸೆಯನ್ನು ತಳ್ಳಿ ಸಂಶಯವೆ ಪಟ್ಟವನ್ನು ಕಟ್ಟಿಕೊಂಡು ಮತ್ತೆ
ಹುಸಿಬಂಡು ಪುಂಡು ಶರಣತೆಯ ನೂಕಿ, ನಂಬುಗೆಯ ತೀರಹತ್ತಿ
ಉಪಕಾರ ಸ್ಮೃತಿಯು ಹುಟ್ಟಿಲ್ಲವಿನ್ನು ಕಗ್ಗುರುಡು ಕಾಮ
ಕೊಲೆಗಡಕ ಬುದ್ದಿ ಬರುತಿಹುದು ನೋಡ ದುರ್ಬಲದ ತಪ್ಪಹೊಂದಿ

ಆ ನಿನ್ನ ಮಧುರತಮ ಪ್ರೇಮಧರ್ಮ ಬಾಯ್ಗಟ್ಟಿ ಉಸಿರುಗಟ್ಟಿ
ಉಮ್ಮಳಿಸುತಿಹುದು ಹಾ ದೊರೆಯೆ ನೀನೆ ಆಪಗೆಯ ಪಟ್ಟಗಟ್ಟಿ;
ಬಿಡುವಿಯೇನು? ಆ ಅನೃತವನ್ನು ಆ ವಿಕೃತಿಯನ್ನು ಮತ್ತೆ,
ಸಂತಾಪ ತಾಪ ಸಂತತಿಯನೆಲ್ಲ ಆ ಮಹಾವಿಜಯದತ್ತೆ.

ಹಾ ದೊರೆಯೆ ಆಜ್ಞೆಯನು ಕೊಟ್ಟು ನೋಡು ಕಟ್ಟಿಟ್ಟ ವಿಜಯವಹುದು
ನಾ ಬಲ್ಲೆ, ನಮಗೆ ಯೋಗ್ಯತೆಯು ಇಲ್ಲ ಜಗ ಸಿದ್ಧವಿಲ್ಲ; ಅಹುದು
ಕಡುಕಟ್ಟಿ ನಂಬುಗೆಯ ತುಟ್ಟತುದಿಯ ಮುಟ್ಟೊಮ್ಮೆ ಕೂಗಿಕೊಳುವೆ,
ದೊರೆ ಹೈ ಹಸಾದ ಜಗ ರಕ್ಷಿಸಯ್ಯ ಅದು ನಿನ್ನ ಅರುಳಿನಳವೆ.

ಇದು ಏನೆ ಇರಲಿ, ಇದು ಹೇಗು ಇರಲಿ, ತೋರಯ್ಯ ಕರುಣೆದೋರು.
ಉದ್ದಾರವಹುದು ಜಗವಮೃತವಹುದು ಭವಜಲಧಿ ದಾಟಿ ಪಾರು.
ಪಾತಾಳದಿಂದ ಎದೆಯಾಳದಿಂದ ಜೀವಾಳದಿಂದ ಒಂದು
ನಿನ್ನತ್ತ ನುಗ್ಗಿ ಹೊರಹೊಮ್ಮಿ ಹಿಗ್ಗಿ ಪ್ರಾರ್ಥನೆಯು ತಾನೆ ಬಂದು

ನಿನ್ನನ್ನು ಕಂಡೆ ಕಡುಕಾಂತಿಯಲ್ಲಿ ನೀನಾಗ ನನಗೆ ಅಂದೆ
ಎದೆಗೆಡಿಸಿಕೊಳ್ಳದಿರು, ಧೀರಳಾಗು, ಇಗೊ ನಂಬು ಬಂದೆಬಂದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೆಟ್ಟಿಯ ಲೆಕ್ಕಾಚಾರ
Next post ಸುಭದ್ರೆ – ೧೬

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…