Home / ಕವನ / ಕವಿತೆ / ಚೈತ್ಯಾಲಯ

ಚೈತ್ಯಾಲಯ


ಶಿವನುಂಡ ನಂಜು ತಿಳಿಗೊಂಡು ಮಂಜು-
ಮಂಜಾಗಿದೆ ಈ ಸಂಜಿಗೆ.
ಇದು ಉಷಾಮಿಷದ ಪೊಸನೇಹ ಸೇರಿ ಕಳೆ
ಏರಿದೆ ಹುರಿಮಂಜಿಗೆ.
ಭೌಮಾತ್ಮಭೂತಿ ಚೈತನ್ಯದೂತಿ, ಊ-
ರ್ಜಿತದಾ ಸಿರಿವಂತಿಗೆ.
ಕಥಕ್ಕಳಿಯ ಪುತ್ಥಳಿಯೆ ! ಪೃಥಕ್ ಥತ್
ತಳಿಸಿದೆ ಜೀವಂತಿಗೆ.
ಜಡೆತುಂಬ ಕಣ್ಣು, ಇದು ಯಾವ ಹೆಣ್ಣು ? ಮಾ-
ಪ್ರಾಣದ ಸ್ಯಾವಂತಿಗೆ !


ಯಾವ ಅಚ್ಚರಸಿ ? ಯಾವ ಋಷಿಯರಸಿ ?
ಯಾವ ಭಾವಸರಸಿ ?
ಯಾವ ಘಟ್ಟದಲಿ ? ಯಾವ ಪಟ್ಟದಲಿ ?
ಯಾವ ಮುಹೂರ್ತವಿರಿಸಿ ?
ಯಾವ ನಕ್ಷತ್ರ ? ಯಾವ ಸುಕ್ಷೇತ್ರ ?
ಯಾವ ಪಾತ್ರ ಧರಿಸಿ ?
ಝಂಝಣಣ ಝಣಣ, ಝಂಝುಣತ್ ಝಣಣ, ಜೀ-
ವಾಣುವೃಂದ ಮೆರೆಸಿ,
ಛಂದಛಂದ ನವಬಂಧ ಪಡೆದು ಬಂ-
ದಿಹವು ಹಳತ ಮರೆಸಿ.


ಛಿಳಿಲ್ ಛಟಿಲೆಂದು ಭುಕ್ಕ್ ಭುಗಿಲೆಂದು
ತಟಿತ್ ತಟ್ಟಿತೆಂದೂ
ಕಣ್ಣ ಮುಚ್ಚಣಿಕೆ ಕಣ್ಣ ತೆರೆವಣಿಕೆ
ಕಣ್ಣ ಕಟ್ಟಿತೆಂದೂ
ನವೋನವದ ಭವಭವದ ತವದ ವೈ-
ಭವವ ಒಟ್ಟಿತಂದು
ಕುರುಡು ಬಯಲಿಗಿಗೊ ಕಣ್ಣು ಬರೆವ ಕೈ-
ವಾಡ ಚಿಗುರ್ತಿಂದು
ದುಂದುದುಂದು ದುಂದುಭಿಸುತಿಹುದು ಇಕೊ!
ಹಲವು ಮುಖದಲೊಂದು.


ಬಾರೊ ಇಲ್ಲಿ ಬೈರಾಗಿ ಬಾರೊ, ಬಾ
ಇಲ್ಲಿದೆ ತಂಗುವ ಸ್ಥಲಾ-
ತಣಿವನರಿಯದೇ ದಣಿದುಹೋದೆ, ಬಾ
ಇಲ್ಲಿದೆ ಇಂಗದ ಜಲಾ-
ಏಕೆ ರೋಸಿ, ಭಯಗೊಂಡು ಹೇಸಿ, ನೀ
ಆಕ್ರೋಶಿಸುತಿಹೆ ಎಲಾ !
ಶಿವದ ಭಕ್ತಿಗವತಾರಶಕ್ತಿಗಿಗೊ
ಇದುವೇ ಇಂಗಿತವಲಾ!
ಬ್ರಹ್ಮಸ್ಫುರಣಕೆ ಮರಣವೆಂತು ? ಅದು
ಅದುವೇ ಅಮೃತದ ಬಲಾ.


ಹಿಮಾಲಯದ ಒಳಬಸಿರಲೆ ಕೊರೆದಿದೆ
ಯಾವುದೊ ಬ್ರಹ್ಮಾಭಯಾ-
ಚಿತ್ರನೇತ್ರಗಳು ಉನ್ಮೀಲಿಸುತಿವೆ
ಓಹೊ ತಾರಕಾಮಯಾ !
ಸೃಷ್ಟಿಯ ಕಲೆಯಾ, ಮಾಯೆಯ ಬಲೆಯಾ
ಬೀಸಿದೆ ಉದಯದ ನಯಾ
ಅರವಿಂದ ಮಿಂದ ಅರವಿಂದ ಗಂಧ ಆರಿ-
ವಿಂದಲೆ ಬಂದಿದೆ ಜಯಾ.
ಚಿತ್ತ ಚಿತ್ತಗಳ ಪಾತ್ರ ಕುಣಿಯುತಿವೆ
ಕಟ್ಟಿದೆ ಚೈತ್ಯಾಲಯ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...