Home / ಕವನ / ಕವಿತೆ / ಚೈತ್ಯಾಲಯ

ಚೈತ್ಯಾಲಯ


ಶಿವನುಂಡ ನಂಜು ತಿಳಿಗೊಂಡು ಮಂಜು-
ಮಂಜಾಗಿದೆ ಈ ಸಂಜಿಗೆ.
ಇದು ಉಷಾಮಿಷದ ಪೊಸನೇಹ ಸೇರಿ ಕಳೆ
ಏರಿದೆ ಹುರಿಮಂಜಿಗೆ.
ಭೌಮಾತ್ಮಭೂತಿ ಚೈತನ್ಯದೂತಿ, ಊ-
ರ್ಜಿತದಾ ಸಿರಿವಂತಿಗೆ.
ಕಥಕ್ಕಳಿಯ ಪುತ್ಥಳಿಯೆ ! ಪೃಥಕ್ ಥತ್
ತಳಿಸಿದೆ ಜೀವಂತಿಗೆ.
ಜಡೆತುಂಬ ಕಣ್ಣು, ಇದು ಯಾವ ಹೆಣ್ಣು ? ಮಾ-
ಪ್ರಾಣದ ಸ್ಯಾವಂತಿಗೆ !


ಯಾವ ಅಚ್ಚರಸಿ ? ಯಾವ ಋಷಿಯರಸಿ ?
ಯಾವ ಭಾವಸರಸಿ ?
ಯಾವ ಘಟ್ಟದಲಿ ? ಯಾವ ಪಟ್ಟದಲಿ ?
ಯಾವ ಮುಹೂರ್ತವಿರಿಸಿ ?
ಯಾವ ನಕ್ಷತ್ರ ? ಯಾವ ಸುಕ್ಷೇತ್ರ ?
ಯಾವ ಪಾತ್ರ ಧರಿಸಿ ?
ಝಂಝಣಣ ಝಣಣ, ಝಂಝುಣತ್ ಝಣಣ, ಜೀ-
ವಾಣುವೃಂದ ಮೆರೆಸಿ,
ಛಂದಛಂದ ನವಬಂಧ ಪಡೆದು ಬಂ-
ದಿಹವು ಹಳತ ಮರೆಸಿ.


ಛಿಳಿಲ್ ಛಟಿಲೆಂದು ಭುಕ್ಕ್ ಭುಗಿಲೆಂದು
ತಟಿತ್ ತಟ್ಟಿತೆಂದೂ
ಕಣ್ಣ ಮುಚ್ಚಣಿಕೆ ಕಣ್ಣ ತೆರೆವಣಿಕೆ
ಕಣ್ಣ ಕಟ್ಟಿತೆಂದೂ
ನವೋನವದ ಭವಭವದ ತವದ ವೈ-
ಭವವ ಒಟ್ಟಿತಂದು
ಕುರುಡು ಬಯಲಿಗಿಗೊ ಕಣ್ಣು ಬರೆವ ಕೈ-
ವಾಡ ಚಿಗುರ್ತಿಂದು
ದುಂದುದುಂದು ದುಂದುಭಿಸುತಿಹುದು ಇಕೊ!
ಹಲವು ಮುಖದಲೊಂದು.


ಬಾರೊ ಇಲ್ಲಿ ಬೈರಾಗಿ ಬಾರೊ, ಬಾ
ಇಲ್ಲಿದೆ ತಂಗುವ ಸ್ಥಲಾ-
ತಣಿವನರಿಯದೇ ದಣಿದುಹೋದೆ, ಬಾ
ಇಲ್ಲಿದೆ ಇಂಗದ ಜಲಾ-
ಏಕೆ ರೋಸಿ, ಭಯಗೊಂಡು ಹೇಸಿ, ನೀ
ಆಕ್ರೋಶಿಸುತಿಹೆ ಎಲಾ !
ಶಿವದ ಭಕ್ತಿಗವತಾರಶಕ್ತಿಗಿಗೊ
ಇದುವೇ ಇಂಗಿತವಲಾ!
ಬ್ರಹ್ಮಸ್ಫುರಣಕೆ ಮರಣವೆಂತು ? ಅದು
ಅದುವೇ ಅಮೃತದ ಬಲಾ.


ಹಿಮಾಲಯದ ಒಳಬಸಿರಲೆ ಕೊರೆದಿದೆ
ಯಾವುದೊ ಬ್ರಹ್ಮಾಭಯಾ-
ಚಿತ್ರನೇತ್ರಗಳು ಉನ್ಮೀಲಿಸುತಿವೆ
ಓಹೊ ತಾರಕಾಮಯಾ !
ಸೃಷ್ಟಿಯ ಕಲೆಯಾ, ಮಾಯೆಯ ಬಲೆಯಾ
ಬೀಸಿದೆ ಉದಯದ ನಯಾ
ಅರವಿಂದ ಮಿಂದ ಅರವಿಂದ ಗಂಧ ಆರಿ-
ವಿಂದಲೆ ಬಂದಿದೆ ಜಯಾ.
ಚಿತ್ತ ಚಿತ್ತಗಳ ಪಾತ್ರ ಕುಣಿಯುತಿವೆ
ಕಟ್ಟಿದೆ ಚೈತ್ಯಾಲಯ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...