Home / ಕವನ / ಕವಿತೆ / ಚೈತ್ಯಾಲಯ

ಚೈತ್ಯಾಲಯ


ಶಿವನುಂಡ ನಂಜು ತಿಳಿಗೊಂಡು ಮಂಜು-
ಮಂಜಾಗಿದೆ ಈ ಸಂಜಿಗೆ.
ಇದು ಉಷಾಮಿಷದ ಪೊಸನೇಹ ಸೇರಿ ಕಳೆ
ಏರಿದೆ ಹುರಿಮಂಜಿಗೆ.
ಭೌಮಾತ್ಮಭೂತಿ ಚೈತನ್ಯದೂತಿ, ಊ-
ರ್ಜಿತದಾ ಸಿರಿವಂತಿಗೆ.
ಕಥಕ್ಕಳಿಯ ಪುತ್ಥಳಿಯೆ ! ಪೃಥಕ್ ಥತ್
ತಳಿಸಿದೆ ಜೀವಂತಿಗೆ.
ಜಡೆತುಂಬ ಕಣ್ಣು, ಇದು ಯಾವ ಹೆಣ್ಣು ? ಮಾ-
ಪ್ರಾಣದ ಸ್ಯಾವಂತಿಗೆ !


ಯಾವ ಅಚ್ಚರಸಿ ? ಯಾವ ಋಷಿಯರಸಿ ?
ಯಾವ ಭಾವಸರಸಿ ?
ಯಾವ ಘಟ್ಟದಲಿ ? ಯಾವ ಪಟ್ಟದಲಿ ?
ಯಾವ ಮುಹೂರ್ತವಿರಿಸಿ ?
ಯಾವ ನಕ್ಷತ್ರ ? ಯಾವ ಸುಕ್ಷೇತ್ರ ?
ಯಾವ ಪಾತ್ರ ಧರಿಸಿ ?
ಝಂಝಣಣ ಝಣಣ, ಝಂಝುಣತ್ ಝಣಣ, ಜೀ-
ವಾಣುವೃಂದ ಮೆರೆಸಿ,
ಛಂದಛಂದ ನವಬಂಧ ಪಡೆದು ಬಂ-
ದಿಹವು ಹಳತ ಮರೆಸಿ.


ಛಿಳಿಲ್ ಛಟಿಲೆಂದು ಭುಕ್ಕ್ ಭುಗಿಲೆಂದು
ತಟಿತ್ ತಟ್ಟಿತೆಂದೂ
ಕಣ್ಣ ಮುಚ್ಚಣಿಕೆ ಕಣ್ಣ ತೆರೆವಣಿಕೆ
ಕಣ್ಣ ಕಟ್ಟಿತೆಂದೂ
ನವೋನವದ ಭವಭವದ ತವದ ವೈ-
ಭವವ ಒಟ್ಟಿತಂದು
ಕುರುಡು ಬಯಲಿಗಿಗೊ ಕಣ್ಣು ಬರೆವ ಕೈ-
ವಾಡ ಚಿಗುರ್ತಿಂದು
ದುಂದುದುಂದು ದುಂದುಭಿಸುತಿಹುದು ಇಕೊ!
ಹಲವು ಮುಖದಲೊಂದು.


ಬಾರೊ ಇಲ್ಲಿ ಬೈರಾಗಿ ಬಾರೊ, ಬಾ
ಇಲ್ಲಿದೆ ತಂಗುವ ಸ್ಥಲಾ-
ತಣಿವನರಿಯದೇ ದಣಿದುಹೋದೆ, ಬಾ
ಇಲ್ಲಿದೆ ಇಂಗದ ಜಲಾ-
ಏಕೆ ರೋಸಿ, ಭಯಗೊಂಡು ಹೇಸಿ, ನೀ
ಆಕ್ರೋಶಿಸುತಿಹೆ ಎಲಾ !
ಶಿವದ ಭಕ್ತಿಗವತಾರಶಕ್ತಿಗಿಗೊ
ಇದುವೇ ಇಂಗಿತವಲಾ!
ಬ್ರಹ್ಮಸ್ಫುರಣಕೆ ಮರಣವೆಂತು ? ಅದು
ಅದುವೇ ಅಮೃತದ ಬಲಾ.


ಹಿಮಾಲಯದ ಒಳಬಸಿರಲೆ ಕೊರೆದಿದೆ
ಯಾವುದೊ ಬ್ರಹ್ಮಾಭಯಾ-
ಚಿತ್ರನೇತ್ರಗಳು ಉನ್ಮೀಲಿಸುತಿವೆ
ಓಹೊ ತಾರಕಾಮಯಾ !
ಸೃಷ್ಟಿಯ ಕಲೆಯಾ, ಮಾಯೆಯ ಬಲೆಯಾ
ಬೀಸಿದೆ ಉದಯದ ನಯಾ
ಅರವಿಂದ ಮಿಂದ ಅರವಿಂದ ಗಂಧ ಆರಿ-
ವಿಂದಲೆ ಬಂದಿದೆ ಜಯಾ.
ಚಿತ್ತ ಚಿತ್ತಗಳ ಪಾತ್ರ ಕುಣಿಯುತಿವೆ
ಕಟ್ಟಿದೆ ಚೈತ್ಯಾಲಯ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...