Home / ಕವನ / ಕವಿತೆ / ಹಣ್ಣ ಬಂದಾವ ಹಣ್ಣ

ಹಣ್ಣ ಬಂದಾವ ಹಣ್ಣ

ಹಣ್ಣ ಬಂದಾವ ಹೆಣ್ಣಾ ಮಗಿಯ ಮಾವಿನಽ ಹಣ್ಣ ಜಾಣಿ||
ಹಣ್ಣ ಕೊಳತೇವ ಹಣ್ಣಿನ ಬಿಲಿವಯ ಹೇಳ ಜಾಣಿ ||೧||

ಬೆಲಿಯ ಹೇಳುಽವ ಜಾಣಾ ಮಲ್ಲಾಡ ದೇಶಕ್ಹೋಗಿದನಲ್ಲೋ ಜಾಣಾ ||
ತಿಳಿಯಲಾರಽದ ಬೆಲಿಯ ನಾ ಏನ್ಹೇಳಾಲೊ ಜಾಣಾ ||೨||

ಕೆರಿಯ ಪಾಳ್ಯದ ಮ್ಯಾಲ ಕರಿಽ ಕಬ್ಬ ಹೆಚ್ಚ್ಯಾರಲಮ್ಮಽ ಜಾಣಿ ||
ಅದರಾಗ ತುಡಽಗ ದನ ಹೊಗತಾವಲಮಽ ಜಾಣಿ ||೩||

ತುಡಽಗ ದನ ಹೊಳ್ಳರ ಹೊಡದಾರ ಬಡೆದಾರೋ ಜಾಣಾ ||
ನಾಲೂರ ಕೂಡಿ ಬುದ್ದೀ ಹೇಳುವರಲ್ಲೋ ಜಾಣಾ ||೪||

ಭಾಂಯಾದರ ಕಟ್ಟ್ಯಾರಲ್ಲ ಅರುಟಿಗ್ಯಾದರಿಟ್ಟಾರಲಮಽ ಜಾಣಿ ||
ಅದರಾಗ ದಾಽನ ಧರ್ಮ ಇಲ್ಲ ಏನಽ ಜಾಣಿ ||೫||

ಅನ್ನ ವಸ್ತರು ದಾನ ಬೆಳ್ಳಿ ಬಂಗಾರ ದಾನೋ ಜಾಣಾ ||
ಹೆಣ್ಣ ಮಕ್ಕಳ ದಾನಾ ಕೊಡುಽವರೇನೋ ಜಾಣಾ ||೬||

ಗುಡಿಯಾದರು ಕಟ್ಟ್ಯಾರಲ್ಲ ಕಳಸಾದರಿಟ್ಟಾರಲಮಽ ಜಾಣಿ ||
ಕಣ್ಣೊತ್ತಿ ಕಳಸಗೋಳು ಒಡೆದಾವಲಮಽಽ ಜಾಣಿ ||೭||

ಒಡೆದಾರೆ ಒಡಿಯಾಲಿ ಒಡೆದುನೆ ಛಲ್ಲುವರೋ ಜಾಣಾ ||
ಒಡಹುಟ್ಟಿದಣ್ಣನಾಗಿ ಇರಽನೆ ಹೋಗೋ ಜಾಣಾ ||೮||
*****

ಹೆಂಡತಿಯನ್ನು ಅಗಲಿ ಬಹಳ ದಿನ ವ್ಯಾಪಾರಕ್ಕೆಂದು ಮಲ್ಲಾಡ ದೇಶಕ್ಕೆ ಹೋಗಿದ್ದ ಶೆಟ್ಟಿಯು ಮರಳಿ ಬಂದು ಬೇರೆ ವೇಷದಿಂದ ತನ್ನ ಮಡದಿಯ ಪಾತಿವ್ರತ್ಯವನ್ನು ಪರೀಕ್ಷಿಸುತ್ತಾನೆ. ಈ ಇಡೀ ಹಾಡಿನಲ್ಲಿ-ಒಂದು ನುಡಿಯಲ್ಲಿ ಅವನ ಕೌಶಲ್ಯದ ಪ್ರಶ್ನವೂ ಇನ್ನೊಂದು ನುಡಿಯಲ್ಲಿ ಅವಳ ಅದೇ ಬಗೆಯ ಉತ್ತರವೂ ಇನೆ.

ಛಂದಸ್ಸು:- ಸಾಂಗತ್ಯಕ್ಕೆ ಸಮೀಪವಾದುದು.

ಶಬ್ದಪ್ರಯೋಗಗಳು:– ಪಾಳ್ಯಾ=ದಂಡೆ. ಕೊಳತೇವು=ಕೊಂಡುಕೊಳ್ಳುತ್ತೇವೆ. ನಾಲೂರ=ನಾಲ್ವರು. ಭಾಂಯಿ=ಬಾವಿ. ಅರೂಟಿಗಿ=ಆರವಟ್ಟಿಗೆ. ಎಲಮ=ಏನೇ. ಇರಽನೆ ಮತ್ತು ಒಡದೂನೆ ಎಂಬಲ್ಲಿ `ನೆ’ ಎಂಬುದು ಪದ ಪೂರಣಕ್ಕಾಗಿ ಬಂದ ಅರ್ಥವಿಲ್ಲದ ಅಕ್ಷರವು. ಹೆಣ್ಣುಮಕ್ಕಳ ಹಾಡುಗಳಲ್ಲೆಲ್ಲಾ ಇದು ಬಹಳ ಕಡೆಗೆ ಬರುತ್ತದೆ. ಇದಕ್ಕೆ ಅರ್ಧಹಚ್ಚುವುದೇ ಅದರೆ `ರೆ’ ಎಂಬ ಅಕ್ಷರದಂತೆ ಇದನ್ನು ತಿಳಿದುಕೊಳ್ಳಬಹುದು.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...