Home / ಕವನ / ಕವಿತೆ / ಹಣ್ಣ ಬಂದಾವ ಹಣ್ಣ

ಹಣ್ಣ ಬಂದಾವ ಹಣ್ಣ

ಹಣ್ಣ ಬಂದಾವ ಹೆಣ್ಣಾ ಮಗಿಯ ಮಾವಿನಽ ಹಣ್ಣ ಜಾಣಿ||
ಹಣ್ಣ ಕೊಳತೇವ ಹಣ್ಣಿನ ಬಿಲಿವಯ ಹೇಳ ಜಾಣಿ ||೧||

ಬೆಲಿಯ ಹೇಳುಽವ ಜಾಣಾ ಮಲ್ಲಾಡ ದೇಶಕ್ಹೋಗಿದನಲ್ಲೋ ಜಾಣಾ ||
ತಿಳಿಯಲಾರಽದ ಬೆಲಿಯ ನಾ ಏನ್ಹೇಳಾಲೊ ಜಾಣಾ ||೨||

ಕೆರಿಯ ಪಾಳ್ಯದ ಮ್ಯಾಲ ಕರಿಽ ಕಬ್ಬ ಹೆಚ್ಚ್ಯಾರಲಮ್ಮಽ ಜಾಣಿ ||
ಅದರಾಗ ತುಡಽಗ ದನ ಹೊಗತಾವಲಮಽ ಜಾಣಿ ||೩||

ತುಡಽಗ ದನ ಹೊಳ್ಳರ ಹೊಡದಾರ ಬಡೆದಾರೋ ಜಾಣಾ ||
ನಾಲೂರ ಕೂಡಿ ಬುದ್ದೀ ಹೇಳುವರಲ್ಲೋ ಜಾಣಾ ||೪||

ಭಾಂಯಾದರ ಕಟ್ಟ್ಯಾರಲ್ಲ ಅರುಟಿಗ್ಯಾದರಿಟ್ಟಾರಲಮಽ ಜಾಣಿ ||
ಅದರಾಗ ದಾಽನ ಧರ್ಮ ಇಲ್ಲ ಏನಽ ಜಾಣಿ ||೫||

ಅನ್ನ ವಸ್ತರು ದಾನ ಬೆಳ್ಳಿ ಬಂಗಾರ ದಾನೋ ಜಾಣಾ ||
ಹೆಣ್ಣ ಮಕ್ಕಳ ದಾನಾ ಕೊಡುಽವರೇನೋ ಜಾಣಾ ||೬||

ಗುಡಿಯಾದರು ಕಟ್ಟ್ಯಾರಲ್ಲ ಕಳಸಾದರಿಟ್ಟಾರಲಮಽ ಜಾಣಿ ||
ಕಣ್ಣೊತ್ತಿ ಕಳಸಗೋಳು ಒಡೆದಾವಲಮಽಽ ಜಾಣಿ ||೭||

ಒಡೆದಾರೆ ಒಡಿಯಾಲಿ ಒಡೆದುನೆ ಛಲ್ಲುವರೋ ಜಾಣಾ ||
ಒಡಹುಟ್ಟಿದಣ್ಣನಾಗಿ ಇರಽನೆ ಹೋಗೋ ಜಾಣಾ ||೮||
*****

ಹೆಂಡತಿಯನ್ನು ಅಗಲಿ ಬಹಳ ದಿನ ವ್ಯಾಪಾರಕ್ಕೆಂದು ಮಲ್ಲಾಡ ದೇಶಕ್ಕೆ ಹೋಗಿದ್ದ ಶೆಟ್ಟಿಯು ಮರಳಿ ಬಂದು ಬೇರೆ ವೇಷದಿಂದ ತನ್ನ ಮಡದಿಯ ಪಾತಿವ್ರತ್ಯವನ್ನು ಪರೀಕ್ಷಿಸುತ್ತಾನೆ. ಈ ಇಡೀ ಹಾಡಿನಲ್ಲಿ-ಒಂದು ನುಡಿಯಲ್ಲಿ ಅವನ ಕೌಶಲ್ಯದ ಪ್ರಶ್ನವೂ ಇನ್ನೊಂದು ನುಡಿಯಲ್ಲಿ ಅವಳ ಅದೇ ಬಗೆಯ ಉತ್ತರವೂ ಇನೆ.

ಛಂದಸ್ಸು:- ಸಾಂಗತ್ಯಕ್ಕೆ ಸಮೀಪವಾದುದು.

ಶಬ್ದಪ್ರಯೋಗಗಳು:– ಪಾಳ್ಯಾ=ದಂಡೆ. ಕೊಳತೇವು=ಕೊಂಡುಕೊಳ್ಳುತ್ತೇವೆ. ನಾಲೂರ=ನಾಲ್ವರು. ಭಾಂಯಿ=ಬಾವಿ. ಅರೂಟಿಗಿ=ಆರವಟ್ಟಿಗೆ. ಎಲಮ=ಏನೇ. ಇರಽನೆ ಮತ್ತು ಒಡದೂನೆ ಎಂಬಲ್ಲಿ `ನೆ’ ಎಂಬುದು ಪದ ಪೂರಣಕ್ಕಾಗಿ ಬಂದ ಅರ್ಥವಿಲ್ಲದ ಅಕ್ಷರವು. ಹೆಣ್ಣುಮಕ್ಕಳ ಹಾಡುಗಳಲ್ಲೆಲ್ಲಾ ಇದು ಬಹಳ ಕಡೆಗೆ ಬರುತ್ತದೆ. ಇದಕ್ಕೆ ಅರ್ಧಹಚ್ಚುವುದೇ ಅದರೆ `ರೆ’ ಎಂಬ ಅಕ್ಷರದಂತೆ ಇದನ್ನು ತಿಳಿದುಕೊಳ್ಳಬಹುದು.

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...